ಈಗ ಶಾಲೆಯ ಆವರಣದಲ್ಲಿ ಪಕ್ಷಿಗಳ ಕಲರವ ಹೆಚ್ಚಾಗಿದೆ ಎನ್ನುತ್ತಾರೆ ಶಿಕ್ಷಕಿ ಕೀರ್ತಿ ಲಗಳಿ. ಬಿಸಿಲಿನ ತಾಪ ಹೆಚ್ಚಾಗಿದೆ. ಪಕ್ಷಿಗಳಿಗೆ ಆಹಾರ, ನೀರು ಸಿಗದೆ ನರಳುತ್ತಿವೆ. ಮನೆ, ಶಾಲೆ, ಸರ್ಕಾರಿ ಕಚೇರಿ, ಖಾಲಿ ನಿವೇಶನಗಳಲ್ಲಿ ಪ್ರಾಣಿಗಳಿಗೆ ನೀರು ಇಡುವ ಮೂಲಕ ಗುಬ್ಬಚ್ಚಿಗಳ ದಿನವನ್ನು ಅರ್ಥಪೂರ್ಣವಾಗಿ ಆಚರಿಸುವಂತಾಗಲಿ ಎನ್ನುತ್ತಾರೆ.