<p><strong>ಬಾಗೇಪಲ್ಲಿ</strong>: ತಾಲ್ಲೂಕಿನ ಯಲ್ಲಂಪಲ್ಲಿ ಗ್ರಾಮದ ನಿವಾಸಿ ಗಜೇಂದ್ರ ಅವರನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ₹25 ಸಾವಿರ ವಿಧಿಸಲಾಗಿದೆ. </p>.<p>ಪ್ರಕರಣದ ಸಾಕ್ಷಿದಾರರನ್ನು ವಿಚಾರಣೆ ಮಾಡಿದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್. ಶ್ರೀಧರ್ ಅವರು, ಅಪರಾಧಿಗಳಾದ ಸುರೇಂದ್ರಬಾಬು, ಶ್ರೀನಾಥ ಮತ್ತು ವೆಂಕಟೇಶ್ ಅವರಿಗೆ ಜೀವಾವಧಿ ಶಿಕ್ಷೆ ಮತ್ತು ₹25 ಸಾವಿರ ದಂಡ ವಿಧಿಸಿ ಇದೇ 19ರಂದು ತೀರ್ಪು ಪ್ರಕಟಿಸಿದ್ದರು. </p>.<p><strong>ಪ್ರಕರಣದ ಹಿನ್ನಲೆ:</strong> ತಾಲ್ಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ 2023ರ ಡಿಸೆಂಬರ್ 6ರಂದು ಗಜೇಂದ್ರ ಎಂಬುವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಗಜೇಂದ್ರ ಅವರ ತಾಯಿ ವರಲಕ್ಷ್ಮಮ್ಮ 2023ರ ಡಿ.7ರಂದು ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕಾರ್ಯಾಚರಣೆ ಕೈಗೊಂಡ ಪೊಲೀಸರು, ಯಲ್ಲಂಪಲ್ಲಿ ಗ್ರಾಮದ ಸುರೇಂದ್ರಬಾಬು, ಶ್ರೀನಾಥ ಮತ್ತು ವೆಂಕಟೇಶ್ ಅವರನ್ನು ಬಂಧಿಸಿದ್ದರು. ಈ ಮೂವರ ವಿರುದ್ಧ ದೋಷಾರೋಪವನ್ನು ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. </p>
<p><strong>ಬಾಗೇಪಲ್ಲಿ</strong>: ತಾಲ್ಲೂಕಿನ ಯಲ್ಲಂಪಲ್ಲಿ ಗ್ರಾಮದ ನಿವಾಸಿ ಗಜೇಂದ್ರ ಅವರನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ₹25 ಸಾವಿರ ವಿಧಿಸಲಾಗಿದೆ. </p>.<p>ಪ್ರಕರಣದ ಸಾಕ್ಷಿದಾರರನ್ನು ವಿಚಾರಣೆ ಮಾಡಿದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್. ಶ್ರೀಧರ್ ಅವರು, ಅಪರಾಧಿಗಳಾದ ಸುರೇಂದ್ರಬಾಬು, ಶ್ರೀನಾಥ ಮತ್ತು ವೆಂಕಟೇಶ್ ಅವರಿಗೆ ಜೀವಾವಧಿ ಶಿಕ್ಷೆ ಮತ್ತು ₹25 ಸಾವಿರ ದಂಡ ವಿಧಿಸಿ ಇದೇ 19ರಂದು ತೀರ್ಪು ಪ್ರಕಟಿಸಿದ್ದರು. </p>.<p><strong>ಪ್ರಕರಣದ ಹಿನ್ನಲೆ:</strong> ತಾಲ್ಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ 2023ರ ಡಿಸೆಂಬರ್ 6ರಂದು ಗಜೇಂದ್ರ ಎಂಬುವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಗಜೇಂದ್ರ ಅವರ ತಾಯಿ ವರಲಕ್ಷ್ಮಮ್ಮ 2023ರ ಡಿ.7ರಂದು ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕಾರ್ಯಾಚರಣೆ ಕೈಗೊಂಡ ಪೊಲೀಸರು, ಯಲ್ಲಂಪಲ್ಲಿ ಗ್ರಾಮದ ಸುರೇಂದ್ರಬಾಬು, ಶ್ರೀನಾಥ ಮತ್ತು ವೆಂಕಟೇಶ್ ಅವರನ್ನು ಬಂಧಿಸಿದ್ದರು. ಈ ಮೂವರ ವಿರುದ್ಧ ದೋಷಾರೋಪವನ್ನು ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. </p>