<p><strong>ಬಾಗೇಪಲ್ಲಿ</strong>: ತಾಲ್ಲೂಕಿನ ಯಲ್ಲಂಪಲ್ಲಿ ಗ್ರಾಮದ ನಿವಾಸಿ ಗಜೇಂದ್ರ ಅವರನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ₹25 ಸಾವಿರ ವಿಧಿಸಲಾಗಿದೆ. </p>.<p>ಪ್ರಕರಣದ ಸಾಕ್ಷಿದಾರರನ್ನು ವಿಚಾರಣೆ ಮಾಡಿದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್. ಶ್ರೀಧರ್ ಅವರು, ಅಪರಾಧಿಗಳಾದ ಸುರೇಂದ್ರಬಾಬು, ಶ್ರೀನಾಥ ಮತ್ತು ವೆಂಕಟೇಶ್ ಅವರಿಗೆ ಜೀವಾವಧಿ ಶಿಕ್ಷೆ ಮತ್ತು ₹25 ಸಾವಿರ ದಂಡ ವಿಧಿಸಿ ಇದೇ 19ರಂದು ತೀರ್ಪು ಪ್ರಕಟಿಸಿದ್ದರು. </p>.<p><strong>ಪ್ರಕರಣದ ಹಿನ್ನಲೆ:</strong> ತಾಲ್ಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ 2023ರ ಡಿಸೆಂಬರ್ 6ರಂದು ಗಜೇಂದ್ರ ಎಂಬುವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಗಜೇಂದ್ರ ಅವರ ತಾಯಿ ವರಲಕ್ಷ್ಮಮ್ಮ 2023ರ ಡಿ.7ರಂದು ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕಾರ್ಯಾಚರಣೆ ಕೈಗೊಂಡ ಪೊಲೀಸರು, ಯಲ್ಲಂಪಲ್ಲಿ ಗ್ರಾಮದ ಸುರೇಂದ್ರಬಾಬು, ಶ್ರೀನಾಥ ಮತ್ತು ವೆಂಕಟೇಶ್ ಅವರನ್ನು ಬಂಧಿಸಿದ್ದರು. ಈ ಮೂವರ ವಿರುದ್ಧ ದೋಷಾರೋಪವನ್ನು ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ</strong>: ತಾಲ್ಲೂಕಿನ ಯಲ್ಲಂಪಲ್ಲಿ ಗ್ರಾಮದ ನಿವಾಸಿ ಗಜೇಂದ್ರ ಅವರನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ₹25 ಸಾವಿರ ವಿಧಿಸಲಾಗಿದೆ. </p>.<p>ಪ್ರಕರಣದ ಸಾಕ್ಷಿದಾರರನ್ನು ವಿಚಾರಣೆ ಮಾಡಿದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್. ಶ್ರೀಧರ್ ಅವರು, ಅಪರಾಧಿಗಳಾದ ಸುರೇಂದ್ರಬಾಬು, ಶ್ರೀನಾಥ ಮತ್ತು ವೆಂಕಟೇಶ್ ಅವರಿಗೆ ಜೀವಾವಧಿ ಶಿಕ್ಷೆ ಮತ್ತು ₹25 ಸಾವಿರ ದಂಡ ವಿಧಿಸಿ ಇದೇ 19ರಂದು ತೀರ್ಪು ಪ್ರಕಟಿಸಿದ್ದರು. </p>.<p><strong>ಪ್ರಕರಣದ ಹಿನ್ನಲೆ:</strong> ತಾಲ್ಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ 2023ರ ಡಿಸೆಂಬರ್ 6ರಂದು ಗಜೇಂದ್ರ ಎಂಬುವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಗಜೇಂದ್ರ ಅವರ ತಾಯಿ ವರಲಕ್ಷ್ಮಮ್ಮ 2023ರ ಡಿ.7ರಂದು ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕಾರ್ಯಾಚರಣೆ ಕೈಗೊಂಡ ಪೊಲೀಸರು, ಯಲ್ಲಂಪಲ್ಲಿ ಗ್ರಾಮದ ಸುರೇಂದ್ರಬಾಬು, ಶ್ರೀನಾಥ ಮತ್ತು ವೆಂಕಟೇಶ್ ಅವರನ್ನು ಬಂಧಿಸಿದ್ದರು. ಈ ಮೂವರ ವಿರುದ್ಧ ದೋಷಾರೋಪವನ್ನು ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>