ಸಮೀವುಲ್ಲಾ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಸೋಮವಾರ ಬೆಳಗಿನ ಜಾವ ಬಾಗೇಪಲ್ಲಿಯಿಂದ ಪಾತಪಾಳ್ಯದ ಮೂಲಕ ತೆರಳುತ್ತಿದ್ದರು. ಈ ವೇಳೆ ಲಘುಮದ್ದೇಮಪಲ್ಲಿ ಕ್ರಾಸ್ ಬಳಿ ರಸ್ತೆಯಲ್ಲಿ ಬಿದ್ದಿದ್ದ ಬೃಹತ್ ಗುಂಡಿಯಲ್ಲಿ ಆಯತಪ್ಪಿ ಬಿದ್ದು, ತೀವ್ರ ಪೆಟ್ಟಾಗಿದ್ದರಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.