<p><strong>ಶಿಡ್ಲಘಟ್ಟ:</strong> ತ್ಯಾಗ ಮತ್ತು ಬಲಿದಾನದ ಸಂಕೇತ ಈದ್ ಉಲ್ ಅಝ್ ಹಾ (ಬಕ್ರೀದ್) ಹಬ್ಬವನ್ನು ಸೋಮವಾರ ಸಹಸ್ರಾರು ಮುಸ್ಲಿಮರು ಶ್ರದ್ಧಾಭಕ್ತಿಯಿಂದ ಶನಿವಾರ ಆಚರಿಸಿದರು.</p>.<p>ಸಂಪ್ರದಾಯದಂತೆ ಜಾಮಿಯಾ ಮಸೀದಿ ಬಳಿ ಜಮಾಯಿಸಿದ ಮುಸ್ಲಿಮರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಬಳಿಕ ಮೀಲಾದ್ ಬಾಗ್ ಈದ್ಗಾ ಮೈದಾನದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು.</p>.<p>ಜಾಮಿಯಾ ಮಸೀದಿ ಧರ್ಮಗುರು ಹಝರತ್ ಮೌಲಾನಾ ಗುಲಾಂ ಜೀಲಾನಿ ಅವರು ಬಕ್ರೀದ್ ಹಬ್ಬದ ಮಹತ್ವದ ಕುರಿತು ಉಪನ್ಯಾಸ ನೀಡಿದರು.</p>.<p>ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮುಸ್ಲಿಮರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ನಂತರ ಪೂರ್ವಜರ ಸಮಾಧಿಗಳ ಬಳಿ ತೆರಳಿ ಪುಷ್ಪನಮನ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು.</p>.<p>ಪ್ರಾರ್ಥನೆ ಸಲ್ಲಿಸಿದ ಹಝರತ್ ಇಸ್ಮಾಯಿಲ್ ಝಬೀಉಲ್ಲಾ ಅವರ ಸ್ಮರಣಾರ್ಥವಾಗಿ ಮೇಕೆ, ಕುರಿಗಳನ್ನು ಬಲಿ ನೀಡಿ ಮೂರು ಭಾಗಗಳಾಗಿ ವಿಂಗಡಿಸಿ ಮಾಂಸವನ್ನು ಹಂಚಿದರು.</p>.<p>ಶಾಸಕ ಬಿ.ಎನ್.ರವಿಕುಮಾರ್ ಅವರು ಈದ್ಗಾ ಮೈದಾನಕ್ಕೆ ಬಂದು ಮುಸ್ಲಿಮರಿಗೆ ಹಬ್ಬದ ಶುಭಾಶಯ ಕೋರಿದರು. ಜಾಮಿಯಾ ಮಸೀದಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು.</p>.<p>ಶ್ರೀನಿವಾಸ್ ನೇತೃತ್ವದಲ್ಲಿ ವೇಣುಗೋಪಾಲ್, ಶ್ಯಾಮಲಾ ಮತ್ತು ಸಿಬ್ಬಂದಿ ಬಂದೋಬಸ್ತ್ ಕೈಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ತ್ಯಾಗ ಮತ್ತು ಬಲಿದಾನದ ಸಂಕೇತ ಈದ್ ಉಲ್ ಅಝ್ ಹಾ (ಬಕ್ರೀದ್) ಹಬ್ಬವನ್ನು ಸೋಮವಾರ ಸಹಸ್ರಾರು ಮುಸ್ಲಿಮರು ಶ್ರದ್ಧಾಭಕ್ತಿಯಿಂದ ಶನಿವಾರ ಆಚರಿಸಿದರು.</p>.<p>ಸಂಪ್ರದಾಯದಂತೆ ಜಾಮಿಯಾ ಮಸೀದಿ ಬಳಿ ಜಮಾಯಿಸಿದ ಮುಸ್ಲಿಮರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಬಳಿಕ ಮೀಲಾದ್ ಬಾಗ್ ಈದ್ಗಾ ಮೈದಾನದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು.</p>.<p>ಜಾಮಿಯಾ ಮಸೀದಿ ಧರ್ಮಗುರು ಹಝರತ್ ಮೌಲಾನಾ ಗುಲಾಂ ಜೀಲಾನಿ ಅವರು ಬಕ್ರೀದ್ ಹಬ್ಬದ ಮಹತ್ವದ ಕುರಿತು ಉಪನ್ಯಾಸ ನೀಡಿದರು.</p>.<p>ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮುಸ್ಲಿಮರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ನಂತರ ಪೂರ್ವಜರ ಸಮಾಧಿಗಳ ಬಳಿ ತೆರಳಿ ಪುಷ್ಪನಮನ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು.</p>.<p>ಪ್ರಾರ್ಥನೆ ಸಲ್ಲಿಸಿದ ಹಝರತ್ ಇಸ್ಮಾಯಿಲ್ ಝಬೀಉಲ್ಲಾ ಅವರ ಸ್ಮರಣಾರ್ಥವಾಗಿ ಮೇಕೆ, ಕುರಿಗಳನ್ನು ಬಲಿ ನೀಡಿ ಮೂರು ಭಾಗಗಳಾಗಿ ವಿಂಗಡಿಸಿ ಮಾಂಸವನ್ನು ಹಂಚಿದರು.</p>.<p>ಶಾಸಕ ಬಿ.ಎನ್.ರವಿಕುಮಾರ್ ಅವರು ಈದ್ಗಾ ಮೈದಾನಕ್ಕೆ ಬಂದು ಮುಸ್ಲಿಮರಿಗೆ ಹಬ್ಬದ ಶುಭಾಶಯ ಕೋರಿದರು. ಜಾಮಿಯಾ ಮಸೀದಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು.</p>.<p>ಶ್ರೀನಿವಾಸ್ ನೇತೃತ್ವದಲ್ಲಿ ವೇಣುಗೋಪಾಲ್, ಶ್ಯಾಮಲಾ ಮತ್ತು ಸಿಬ್ಬಂದಿ ಬಂದೋಬಸ್ತ್ ಕೈಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>