ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘2018–19ನೇ ಸಾಲಿನಲ್ಲಿ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ ಅಡಿ ಬಾಗೇಪಲ್ಲಿ ತಾಲ್ಲೂಕಿನ 141 ರೈತರು ಮುಸುಕಿನ ಜೋಳ, ನೆಲಗಡಲೆ, ತೊಗರಿ, ರಾಗಿ ಬೆಳೆಗಳಿಗೆ ವಿಮೆ ಮಾಡಿಸಿದ್ದರು. ಆದರೆ ಬ್ಯಾಂಕ್ ವ್ಯವಸ್ಥಾಪಕ ವಿಮಾ ಕಂಪೆನಿಗೆ ತಪ್ಪು ಮಾಹಿತಿ ನೀಡಿದ ಕಾರಣ ಈವರೆಗೆ ಪರಿಹಾರ ಹಣ ದೊರೆತಿಲ್ಲ’ ಎಂದು ಆರೋಪಿಸಿದರು.