‘ಗ್ರಾಮೀಣ ಪ್ರದೇಶದ ನೈರ್ಮಲ್ಯ ಕುರಿತು ಜನರ ನಡವಳಿಕೆಯಲ್ಲಿ ಬದಲಾವಣೆ ಮೂಡಿಸುವುದೇ ಸಮೀಕ್ಷೆಯ ಪ್ರಮುಖ ಉದ್ದೇಶ. ಸಾರ್ವಜನಿಕ ಸ್ಥಳಗಳು, ಶಾಲೆಗಳು, ಅಂಗನವಾಡಿ ಕೇಂದ್ರಗಳು, ಸಂತೆ ನಡೆಯುವ ಸ್ಥಳ, ಕುಡಿಯುವ ನೀರು ಸಂಗ್ರಹ ಸ್ಥಳಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಗ್ರಾಮದ ಮುಖ್ಯ ಬೀದಿಗಳು, ಧಾರ್ಮಿಕ ಸ್ಥಳಗಳು ಸೇರಿದಂತೆ ಎಲ್ಲೆಡೆ ಸ್ವಚ್ಛತೆ ಮೊದಲ ಆದ್ಯತೆಯಾಗಬೇಕಿದೆ’ ಎಂದು ತಿಳಿಸಿದರು.