<p><strong>ಚಿಂತಾಮಣಿ</strong>: ನಗರದ ಸರ್ಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಮಂಗಳವಾರ ಬೆಳಗ್ಗೆ ಹೆಜ್ಜೇನು ದಾಳಿ ನಡೆಸಿದ್ದರಿಂದ ಸುಮಾರು 20-25 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಸಾರ್ವಜನಿಕ ಆಸ್ಪತ್ರೆ ಮತ್ತು ಡೆಕ್ಕನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<p>ಮಂಗಳವಾರ 9.30ರ ಸಮಯದಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಬರುತ್ತಿದ್ದರು. ಆವರಣದ ಮೆಕಾನಿಕಲ್ ವಿಭಾಗದ ಮುಂಭಾಗದ ಮರದಲ್ಲಿದ್ದ ಹೆಜ್ಜೇನು ದಾಳಿ ನಡೆಸಿವೆ. ಆವರಣದಲ್ಲಿ ಒಡಾಡುತ್ತಿದ್ದ ವಿದ್ಯಾರ್ಥಿಗಳನ್ನು ಕಚ್ಚಿವೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಸುಮಾರು 20-25 ವಿದ್ಯಾರ್ಥಿಗಳು ಹೆಜ್ಜೇನು ದಾಳಿಗೆ ತುತ್ತಾಗಿದ್ದಾರೆ. ಇನ್ನೂ ಕೆಲವರು ಖಾಸಗಿ ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿ ಸಂದ್ಯಾ ತೀವ್ರ ಅಸ್ವಸ್ಥಳಾಗಿದ್ದು ಡೆಕ್ಕನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ ಚೇತರಿಸಿಕೊಂಡಿದ್ದಾಳೆ.</p>.<p>ವಿದ್ಯಾರ್ಥಿ ಪ್ರಣತಿ, ರಿಫತ್ ಖಾನಂ, ಯೋಗೇಶ್, ಮುಸ್ತಾಫ, ಹರ್ಷವರ್ಧನ್, ಧನುಷ್ ಕುಮಾರ್, ವಿವೇಕ್, ಮಹೇಶ್, ಎಂ.ಎನ್.ಭರತ್, ಲಲಿತಕುಮಾರ್, ಕೋದಂಡ ಮತ್ತಿತರರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಬಹುತೇಕರು ಸಂಜೆ ಆಸ್ಪತ್ರೆಯಿಂದ ಬಿಡುಗಡೆಗೊಂಡರು. ಕಾಲೇಜಿನ ಉಪನ್ಯಾಸಕರು ಆಸ್ಪತ್ರೆಗೆ ಭೇಟಿ ನೀಡಿದರು.</p>.<p>ಕಾಲೇಜಿನ ಆವರಣದ ಮರದಲ್ಲಿದ್ದ ಹೆಜ್ಜೇನು ನೊಣಗಳ ದಾಳಿಗೆ ಖಚಿತ ಮಾಹಿತಿ ಇಲ್ಲ. ಬಿಸಿಲಿನ ತಾಪಕ್ಕೆ ಅಥವಾ ಕಾಗೆಗಳು ಹೆಜ್ಜೇನಿಗೆ ತಾಕಿರುವುದರಿಂದ ದಾಳಿ ನಡೆಸಿರಬಹುದು ಎಂದು ಉಪನ್ಯಾಸಕರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ನಗರದ ಸರ್ಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಮಂಗಳವಾರ ಬೆಳಗ್ಗೆ ಹೆಜ್ಜೇನು ದಾಳಿ ನಡೆಸಿದ್ದರಿಂದ ಸುಮಾರು 20-25 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಸಾರ್ವಜನಿಕ ಆಸ್ಪತ್ರೆ ಮತ್ತು ಡೆಕ್ಕನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<p>ಮಂಗಳವಾರ 9.30ರ ಸಮಯದಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಬರುತ್ತಿದ್ದರು. ಆವರಣದ ಮೆಕಾನಿಕಲ್ ವಿಭಾಗದ ಮುಂಭಾಗದ ಮರದಲ್ಲಿದ್ದ ಹೆಜ್ಜೇನು ದಾಳಿ ನಡೆಸಿವೆ. ಆವರಣದಲ್ಲಿ ಒಡಾಡುತ್ತಿದ್ದ ವಿದ್ಯಾರ್ಥಿಗಳನ್ನು ಕಚ್ಚಿವೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಸುಮಾರು 20-25 ವಿದ್ಯಾರ್ಥಿಗಳು ಹೆಜ್ಜೇನು ದಾಳಿಗೆ ತುತ್ತಾಗಿದ್ದಾರೆ. ಇನ್ನೂ ಕೆಲವರು ಖಾಸಗಿ ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿ ಸಂದ್ಯಾ ತೀವ್ರ ಅಸ್ವಸ್ಥಳಾಗಿದ್ದು ಡೆಕ್ಕನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ ಚೇತರಿಸಿಕೊಂಡಿದ್ದಾಳೆ.</p>.<p>ವಿದ್ಯಾರ್ಥಿ ಪ್ರಣತಿ, ರಿಫತ್ ಖಾನಂ, ಯೋಗೇಶ್, ಮುಸ್ತಾಫ, ಹರ್ಷವರ್ಧನ್, ಧನುಷ್ ಕುಮಾರ್, ವಿವೇಕ್, ಮಹೇಶ್, ಎಂ.ಎನ್.ಭರತ್, ಲಲಿತಕುಮಾರ್, ಕೋದಂಡ ಮತ್ತಿತರರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಬಹುತೇಕರು ಸಂಜೆ ಆಸ್ಪತ್ರೆಯಿಂದ ಬಿಡುಗಡೆಗೊಂಡರು. ಕಾಲೇಜಿನ ಉಪನ್ಯಾಸಕರು ಆಸ್ಪತ್ರೆಗೆ ಭೇಟಿ ನೀಡಿದರು.</p>.<p>ಕಾಲೇಜಿನ ಆವರಣದ ಮರದಲ್ಲಿದ್ದ ಹೆಜ್ಜೇನು ನೊಣಗಳ ದಾಳಿಗೆ ಖಚಿತ ಮಾಹಿತಿ ಇಲ್ಲ. ಬಿಸಿಲಿನ ತಾಪಕ್ಕೆ ಅಥವಾ ಕಾಗೆಗಳು ಹೆಜ್ಜೇನಿಗೆ ತಾಕಿರುವುದರಿಂದ ದಾಳಿ ನಡೆಸಿರಬಹುದು ಎಂದು ಉಪನ್ಯಾಸಕರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>