<p><strong>ಚಿಂತಾಮಣಿ:</strong> ಸ್ವಚ್ಛತೆ ಕಾಪಾಡುವುದು ಮಹಾತ್ಮ ಗಾಂಧಿಯವರ ತತ್ವವಾಗಿತ್ತು. ತನ್ನ ಕೆಲಸವನ್ನು ತಾನೇ ಮಾಡಿಕೊಳ್ಳಬೇಕು ಎಂಬ ಗಾಂಧೀಜಿ ಅವರ ನೀತಿಯಂತೆ ಪ್ರತಿಯೊಬ್ಬರೂ ತಮ್ಮ ಮನೆಗಳಿಂದಲೇ ಸ್ವಚ್ಛತೆ ಕಾಪಾಡುವ ಪಣ ತೊಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್ ಸಲಹೆ ನೀಡಿದರು.</p>.<p>ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ತಾಲ್ಲೂಕಿನ ಐತಿಹಾಸಿಕ ಕ್ಷೇತ್ರ ಆಲಂಬಗಿರಿಯಲ್ಲಿ ಶುಕ್ರವಾರ ಗಾಂಧಿ ಜಯಂತಿ ಅಂಗವಾಗಿ ಕಲ್ಯಾಣಿ ಸ್ವಚ್ಛತೆ ಮತ್ತು ಗಿಡನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲೂ ಸ್ವಚ್ಛತೆ ನಿರ್ವಹಿಸುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ. ಆಯಾ ಗ್ರಾಮಗಳ ಜನರು ಜತೆಯಾಗುತ್ತಿದ್ದಾರೆ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್ ಮಾತನಾಡಿ ಸ್ವಚ್ಛತೆ ನಿತ್ಯೋತ್ಸವವಾದರೆ ಜನ ಆರೋಗ್ಯವಂತರಾಗಿರುತ್ತಾರೆ. ಸ್ವಚ್ಛತೆ ಇದ್ದಲ್ಲಿ ಆರೋಗ್ಯವಿರುತ್ತದೆ. ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರಿನ ಸೇವನೆಯಿಂದ ಆರೋಗ್ಯವಂತರಾಗಿರಲು ಸಾಧ್ಯ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ಕವಿತಾ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸುರೇಶ್, ಕೃಷಿ ಇಲಾಖೆಯ ಪುಷ್ಪ, ನರೇಗಾ ಯೋಜನೆಯ ಅರುಣ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ನಾಗೇಶ್, ಶಿವಣ್ಣ, ಸುರೇಶ್, ದೇವರಾಜ್, ಯಾದವ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಸ್ವಚ್ಛತೆ ಕಾಪಾಡುವುದು ಮಹಾತ್ಮ ಗಾಂಧಿಯವರ ತತ್ವವಾಗಿತ್ತು. ತನ್ನ ಕೆಲಸವನ್ನು ತಾನೇ ಮಾಡಿಕೊಳ್ಳಬೇಕು ಎಂಬ ಗಾಂಧೀಜಿ ಅವರ ನೀತಿಯಂತೆ ಪ್ರತಿಯೊಬ್ಬರೂ ತಮ್ಮ ಮನೆಗಳಿಂದಲೇ ಸ್ವಚ್ಛತೆ ಕಾಪಾಡುವ ಪಣ ತೊಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್ ಸಲಹೆ ನೀಡಿದರು.</p>.<p>ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ತಾಲ್ಲೂಕಿನ ಐತಿಹಾಸಿಕ ಕ್ಷೇತ್ರ ಆಲಂಬಗಿರಿಯಲ್ಲಿ ಶುಕ್ರವಾರ ಗಾಂಧಿ ಜಯಂತಿ ಅಂಗವಾಗಿ ಕಲ್ಯಾಣಿ ಸ್ವಚ್ಛತೆ ಮತ್ತು ಗಿಡನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲೂ ಸ್ವಚ್ಛತೆ ನಿರ್ವಹಿಸುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ. ಆಯಾ ಗ್ರಾಮಗಳ ಜನರು ಜತೆಯಾಗುತ್ತಿದ್ದಾರೆ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್ ಮಾತನಾಡಿ ಸ್ವಚ್ಛತೆ ನಿತ್ಯೋತ್ಸವವಾದರೆ ಜನ ಆರೋಗ್ಯವಂತರಾಗಿರುತ್ತಾರೆ. ಸ್ವಚ್ಛತೆ ಇದ್ದಲ್ಲಿ ಆರೋಗ್ಯವಿರುತ್ತದೆ. ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರಿನ ಸೇವನೆಯಿಂದ ಆರೋಗ್ಯವಂತರಾಗಿರಲು ಸಾಧ್ಯ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ಕವಿತಾ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸುರೇಶ್, ಕೃಷಿ ಇಲಾಖೆಯ ಪುಷ್ಪ, ನರೇಗಾ ಯೋಜನೆಯ ಅರುಣ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ನಾಗೇಶ್, ಶಿವಣ್ಣ, ಸುರೇಶ್, ದೇವರಾಜ್, ಯಾದವ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>