<p><strong>ಚಿಕ್ಕಬಳ್ಳಾಪುರ:</strong> ಸುಟ್ಟ ಟ್ರಾನ್ಸಫಾರ್ಮರ್ ಬದಲಾಯಿಸಲು ರೈತರೊಬ್ಬರಿಂದ ಲಂಚ ಪಡೆಯುತ್ತಿದ್ದ ಬೆಸ್ಕಾಂ ಗ್ರಾಮೀಣ ವಿಭಾಗದ ಕಿರಿಯ ಎಂಜಿನಿಯರ್ ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಗುರುವಾರ ಮಧ್ಯಾಹ್ನ ಬಂಧಿಸಿದ್ದಾರೆ.</p>.<p>ತಾಲ್ಲೂಕಿನ ದೊಡ್ಡ ಕಿರುಗಂಬಿಯ ರೈತ ಮಲ್ಲೇಶ್ ಕುಮಾರ್ ಅವರಿಗೆ ಸುಟ್ಟ ಟ್ರಾನ್ಸಫಾರ್ಮರ್ ಬದಲಿಸಲು ಮಂಜುನಾಥ್ ಅವರು ₹3,000ಕ್ಕೆ ಬೇಡಿಕೆ ಇಟ್ಟಿದ್ದರು. ಆ ಪೈಕಿ ₹1,000 ಮುಂಗಡ ಕೊಟ್ಟಿದ್ದ ಮಲ್ಲೇಶ್ ಕುಮಾರ್ ಅವರು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು.</p>.<p>ಎಸಿಬಿ ಅಧಿಕಾರಿಗಳ ಸೂಚನೆ ಮೆರೆಗೆ ಗುರುವಾರ ಮಧ್ಯಾಹ್ನ 3.45ರ ಸುಮಾರಿಗೆ ನಗರದಲ್ಲಿರುವ ಬೆಸ್ಕಾಂ ಕಚೇರಿಗೆ ತೆರಳಿದ್ದ ಮಲ್ಲೇಶ್ ಕುಮಾರ್ ಅವರಿಂದ ಮಂಜುನಾಥ್ ಅವರು ₹2,000 ಪಡೆಯುತ್ತಿದ್ದ ವೇಳೆ ಎಸಿಬಿ ಡಿವೈಎಸ್ಪಿ ವೆಂಕಟೇಶ್ ನಾಯ್ಡು ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಸುಟ್ಟ ಟ್ರಾನ್ಸಫಾರ್ಮರ್ ಬದಲಾಯಿಸಲು ರೈತರೊಬ್ಬರಿಂದ ಲಂಚ ಪಡೆಯುತ್ತಿದ್ದ ಬೆಸ್ಕಾಂ ಗ್ರಾಮೀಣ ವಿಭಾಗದ ಕಿರಿಯ ಎಂಜಿನಿಯರ್ ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಗುರುವಾರ ಮಧ್ಯಾಹ್ನ ಬಂಧಿಸಿದ್ದಾರೆ.</p>.<p>ತಾಲ್ಲೂಕಿನ ದೊಡ್ಡ ಕಿರುಗಂಬಿಯ ರೈತ ಮಲ್ಲೇಶ್ ಕುಮಾರ್ ಅವರಿಗೆ ಸುಟ್ಟ ಟ್ರಾನ್ಸಫಾರ್ಮರ್ ಬದಲಿಸಲು ಮಂಜುನಾಥ್ ಅವರು ₹3,000ಕ್ಕೆ ಬೇಡಿಕೆ ಇಟ್ಟಿದ್ದರು. ಆ ಪೈಕಿ ₹1,000 ಮುಂಗಡ ಕೊಟ್ಟಿದ್ದ ಮಲ್ಲೇಶ್ ಕುಮಾರ್ ಅವರು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು.</p>.<p>ಎಸಿಬಿ ಅಧಿಕಾರಿಗಳ ಸೂಚನೆ ಮೆರೆಗೆ ಗುರುವಾರ ಮಧ್ಯಾಹ್ನ 3.45ರ ಸುಮಾರಿಗೆ ನಗರದಲ್ಲಿರುವ ಬೆಸ್ಕಾಂ ಕಚೇರಿಗೆ ತೆರಳಿದ್ದ ಮಲ್ಲೇಶ್ ಕುಮಾರ್ ಅವರಿಂದ ಮಂಜುನಾಥ್ ಅವರು ₹2,000 ಪಡೆಯುತ್ತಿದ್ದ ವೇಳೆ ಎಸಿಬಿ ಡಿವೈಎಸ್ಪಿ ವೆಂಕಟೇಶ್ ನಾಯ್ಡು ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>