ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಸ್ಕಾಂ ಎಂಜಿನಿಯರ್ ಎಸಿಬಿ ಬಲೆಗೆ

Last Updated 3 ಅಕ್ಟೋಬರ್ 2019, 13:02 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಸುಟ್ಟ ಟ್ರಾನ್ಸಫಾರ್ಮರ್ ಬದಲಾಯಿಸಲು ರೈತರೊಬ್ಬರಿಂದ ಲಂಚ ಪಡೆಯುತ್ತಿದ್ದ ಬೆಸ್ಕಾಂ ಗ್ರಾಮೀಣ ವಿಭಾಗದ ಕಿರಿಯ ಎಂಜಿನಿಯರ್ ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಗುರುವಾರ ಮಧ್ಯಾಹ್ನ ಬಂಧಿಸಿದ್ದಾರೆ.

ತಾಲ್ಲೂಕಿನ ದೊಡ್ಡ ಕಿರುಗಂಬಿಯ ರೈತ ಮಲ್ಲೇಶ್ ಕುಮಾರ್ ಅವರಿಗೆ ಸುಟ್ಟ ಟ್ರಾನ್ಸಫಾರ್ಮರ್ ಬದಲಿಸಲು ಮಂಜುನಾಥ್ ಅವರು ₹3,000ಕ್ಕೆ ಬೇಡಿಕೆ ಇಟ್ಟಿದ್ದರು. ಆ ಪೈಕಿ ₹1,000 ಮುಂಗಡ ಕೊಟ್ಟಿದ್ದ ಮಲ್ಲೇಶ್‌ ಕುಮಾರ್‌ ಅವರು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು.

ಎಸಿಬಿ ಅಧಿಕಾರಿಗಳ ಸೂಚನೆ ಮೆರೆಗೆ ಗುರುವಾರ ಮಧ್ಯಾಹ್ನ 3.45ರ ಸುಮಾರಿಗೆ ನಗರದಲ್ಲಿರುವ ಬೆಸ್ಕಾಂ ಕಚೇರಿಗೆ ತೆರಳಿದ್ದ ಮಲ್ಲೇಶ್ ಕುಮಾರ್ ಅವರಿಂದ ಮಂಜುನಾಥ್‌ ಅವರು ₹2,000 ಪಡೆಯುತ್ತಿದ್ದ ವೇಳೆ ಎಸಿಬಿ ಡಿವೈಎಸ್ಪಿ ವೆಂಕಟೇಶ್ ನಾಯ್ಡು ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT