ದೇವಾಲಯವನ್ನು ವಿದ್ಯುತ್ ದೀಪಗಳಿಂದ ಲಂಕಾರ ಮಾಡಲಾಗಿತ್ತು. ಬೆಳಿಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಅಷ್ಟೋತ್ತರ ಸಹಿತ ಅಷ್ಟಾವಧಾನ ಸೇವೆಯನ್ನು ಸಲ್ಲಿಸಿ ಮಹಾ ಮಂಗಳಾರತಿ ಮಾಡಲಾಯಿತು. ಹನುಮಜಯಂತಿ ಪ್ರಯುಕ್ತ ಸುತ್ತಮುತ್ತಲ ಗ್ರಾಮಗಳು ಹಾಗೂ ದೂರದಿಂದ ಬಂದ ಭಕ್ತರು ದೇವಾಲಯದಲ್ಲಿ ಹಣ್ಣು ಕಾಯಿ ನೀಡಿ ಪೂಜೆ ಸಲ್ಲಿಸಿದರು.