ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ಡಿಕ್ಕಿ: ಬೈಕ್ ಸವಾರ ಸಾವು

Last Updated 8 ಆಗಸ್ಟ್ 2022, 4:28 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿಯ ಬೊಮ್ಮನಹಳ್ಳಿ ಗೇಟ್ ಸಮೀಪ ಭಾನುವಾರ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೊಮ್ಮ ನಹಳ್ಳಿ - ಸೋಣ್ಣೇನಹಳ್ಳಿ ಗ್ರಾಮಗಳ ಮಾರ್ಗ ಮಧ್ಯೆ ಇರುವ ಮೋರಿ ಬಳಿ ಈ ಘಟನೆ ನಡೆದಿದೆ. ಬೈಕ್ ಸಂಪೂರ್ಣ ಜಖಂಗೊಂಡಿದೆ.

ಚಿಕ್ಕಬಳ್ಳಾಪುರದ ನಿವಾಸಿ ಕೆ.ಎಸ್‌.ಚೇತನ್ ಮೃತ. ಇವರು ಎಜುಕೇಶನ್ ಇವೆಂಟ್ ಭಾಗವಾಗಿ ವಿದ್ಯಾರ್ಥಿಗಳಿಗೆ ಮೊಬೈಲ್ ತಂತ್ರಜ್ಞಾನದ ಬಗ್ಗೆ ಉಪನ್ಯಾಸ ನೀಡಲು ತಾಲ್ಲೂಕಿನ ಪಿಂಡಿ ಪಾಪನಹಳ್ಳಿ ಬಳಿ ಇರುವ ಬೃಂದಾ ಪಬ್ಲಿಕ್ ಸ್ಕೂಲ್ ಬಂದಿದ್ದರು ಎಂದು ತಿಳಿದು ಬಂದಿದೆ.

ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT