ಗೌರಿಬಿದನೂರು: ತಾಲ್ಲೂಕಿನ ಕೋಟಾಲದಿನ್ನೆ ಬಳಿ ಸೋಮವಾರ ರಾತ್ರಿ ನಡೆದ ಅಪಘಾತದಲ್ಲಿ ಯುವಕ ಹೊಸೂರು ಗ್ರಾಮದ ಪ್ರತಾಪ್ (26) ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಬ್ಬರು ಯುವಕರು ದೊಡ್ಡಬಳ್ಳಾಪುರದ ರಿಟ್ಟಲ್ ಕಂಪನಿಯ ಉದ್ಯೋಗಿಗಳಾಗಿದ್ದು, ಸೋಮವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ.