‘ಸಾರ್ವಜನಿಕರು ಮಾಹಿತಿ ನೀಡಿ’
ಬೈಕ್ ವ್ಹೀಲಿಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣಗಳನ್ನು ದಾಖಲಿಸಿಕೊಳ್ಳುತ್ತಿದ್ದಾರೆ. ಬಂಧಿತರ ವಿರುದ್ಧ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಬೈಕ್ ವ್ಹೀಲಿ ಮಾಡುತ್ತಿರುವುದು ಕಂಡು ಬಂದರೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಮನವಿ ಮಾಡಿದ್ದಾರೆ. ಬೈಕ್ ವ್ಹೀಲಿನಿಂದ ಅಪಘಾತಗಳು ಸಂಭವಿಸುತ್ತವೆ. ಸಾರ್ವಜನಿಕರಿಗೆ ವಾಹನಗಳ ಸವಾರರಿಗೆ ತೊಂದರೆ ಆಗುತ್ತದೆ. ಇಂತಹ ಚಟುವಟಿಕೆಗಳನ್ನು ಮಟ್ಟ ಹಾಕಲಾಗುವುದು ಎಂದಿದ್ದಾರೆ.