ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇರಳ ಮತ್ತು ತಮಿಳುನಾಡಿನಲ್ಲಿ ಕಸುಬು ಆಧಾರಿತ ವಿವಿಧ ಕಾರ್ಮಿಕ ಮಂಡಳಿಗಳಿವೆ. ಹೀಗಾಗಿ, ಅಲ್ಲಿ ಕಾರ್ವಿುಕರಿಗೆ ಹೆಚ್ಚಿನ ರಕ್ಷಣೆ ಕೊಡಲು ಸಾಧ್ಯವಾಗಿದೆ. ಅದೇ ಮಾದರಿಯಲ್ಲಿ ನಾವು ಕೂಡ ಅಸಂಘಟಿತ ವಲಯದ ಕಾರ್ಮಿಕರ ಹಿತ ಕಾಯುವ ಉದ್ದೇಶದಿಂದ ಮಸೂದೆಗಳನ್ನು ಸಿದ್ಧಪಡಿಸುತ್ತಿದ್ದೆವೆ’ ಎಂದು ತಿಳಿಸಿದರು.