<p><strong>ಚಿಕ್ಕಬಳ್ಳಾಪುರ:</strong> ಬಿಜೆಪಿಯವರು ಹಿಂದೂಗಳಿಗೆ ಏನು ಮಾಡಿದ್ದಾರೆ? ಇವರಿಂದ ಹಿಂದೂಗಳು ಹಾಳಾಗಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಟೀಕಾಪ್ರಹಾರ ನಡೆಸಿದರು. </p><p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ತನ್ನ 70 ವರ್ಷಗಳ ಆಡಳಿತದಲ್ಲಿ ದೇಶದಲ್ಲಿ 7 ಲಕ್ಷಕ್ಕೂ ಹೆಚ್ಚು ದೇಗುಲಗಳನ್ನು ನಿರ್ಮಿಸಿದೆ. ಶಕ್ತಿ ಪೀಠಗಳು ಆಗಿದ್ದು ನಮ್ಮ ಅವಧಿಯಲ್ಲಿ. ಆದರೆ ಇವರು ಎಷ್ಟು ದೇವಾಲಯ ಕಟ್ಟಿಸಿದ್ದಾರೆ ಎಂದು ಪ್ರಶ್ನಿಸಿದರು.</p><p>ಮೂರ್ತಿ ಕೆತ್ತಿದ್ದು, ದೇಗುಲ ಕಟ್ಟಿದ್ದು ಈ ದೇಶದ ತಳ ಸಮುದಾಯಗಳು. ಆದರೆ ಈ ಸಮುದಾಯಗಳಿಗೆ ಪೂಜೆ ಮಾಡಲು ಅವಕಾಶವೇ ಇಲ್ಲ. ಪೂಜೆಯ ಅವಕಾಶಗಳನ್ನು ಸಣ್ಣ ಸಮುದಾಯಗಳಿಗೆ ಕೊಡಲಿಸಲು ಬಿಜೆಪಿ ನಾಯಕರು ಹೋರಾಟ ನಡೆಸಲಿ ಎಂದು ಆಗ್ರಹಿಸಿದರು.</p><p>ಮಧ್ಯಪ್ರಾಚ್ಯದ ಮುಸ್ಲಿಂ ದೇಶಗಳಲ್ಲಿ ನಮ್ಮ ದೇಶದ 50 ಲಕ್ಷ ಜನರು ಕೆಲಸ ಮಾಡುತ್ತಿದ್ದಾರೆ. ಮುಸ್ಲಿಂ ರಾಷ್ಟ್ರಗಳಿಂದ ದೇಶಕ್ಕೆ ಶೇ 50ರಷ್ಟು ಪೆಟ್ರೋಲಿಯಂ ಉತ್ಪನ್ನಗಳು ಪೂರೈಕೆ ಆಗುತ್ತಿವೆ. ಈ ಬಗ್ಗೆ ಮಾತನಾಡುವುದಿಲ್ಲ ಎಂದರು.</p><p>ಮುಸ್ಲಿಮರು, ಪಾಕಿಸ್ತಾನ, ಹಿಂದುತ್ವ ಬಿಟ್ಟರೆ ಬಿಜೆಪಿಯವರಿಗೆ ಮಾತನಾಡಲು ಬೇರೆ ವಿಚಾರಗಳೇ ಇಲ್ಲ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಬಿಜೆಪಿಯವರು ಹಿಂದೂಗಳಿಗೆ ಏನು ಮಾಡಿದ್ದಾರೆ? ಇವರಿಂದ ಹಿಂದೂಗಳು ಹಾಳಾಗಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಟೀಕಾಪ್ರಹಾರ ನಡೆಸಿದರು. </p><p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ತನ್ನ 70 ವರ್ಷಗಳ ಆಡಳಿತದಲ್ಲಿ ದೇಶದಲ್ಲಿ 7 ಲಕ್ಷಕ್ಕೂ ಹೆಚ್ಚು ದೇಗುಲಗಳನ್ನು ನಿರ್ಮಿಸಿದೆ. ಶಕ್ತಿ ಪೀಠಗಳು ಆಗಿದ್ದು ನಮ್ಮ ಅವಧಿಯಲ್ಲಿ. ಆದರೆ ಇವರು ಎಷ್ಟು ದೇವಾಲಯ ಕಟ್ಟಿಸಿದ್ದಾರೆ ಎಂದು ಪ್ರಶ್ನಿಸಿದರು.</p><p>ಮೂರ್ತಿ ಕೆತ್ತಿದ್ದು, ದೇಗುಲ ಕಟ್ಟಿದ್ದು ಈ ದೇಶದ ತಳ ಸಮುದಾಯಗಳು. ಆದರೆ ಈ ಸಮುದಾಯಗಳಿಗೆ ಪೂಜೆ ಮಾಡಲು ಅವಕಾಶವೇ ಇಲ್ಲ. ಪೂಜೆಯ ಅವಕಾಶಗಳನ್ನು ಸಣ್ಣ ಸಮುದಾಯಗಳಿಗೆ ಕೊಡಲಿಸಲು ಬಿಜೆಪಿ ನಾಯಕರು ಹೋರಾಟ ನಡೆಸಲಿ ಎಂದು ಆಗ್ರಹಿಸಿದರು.</p><p>ಮಧ್ಯಪ್ರಾಚ್ಯದ ಮುಸ್ಲಿಂ ದೇಶಗಳಲ್ಲಿ ನಮ್ಮ ದೇಶದ 50 ಲಕ್ಷ ಜನರು ಕೆಲಸ ಮಾಡುತ್ತಿದ್ದಾರೆ. ಮುಸ್ಲಿಂ ರಾಷ್ಟ್ರಗಳಿಂದ ದೇಶಕ್ಕೆ ಶೇ 50ರಷ್ಟು ಪೆಟ್ರೋಲಿಯಂ ಉತ್ಪನ್ನಗಳು ಪೂರೈಕೆ ಆಗುತ್ತಿವೆ. ಈ ಬಗ್ಗೆ ಮಾತನಾಡುವುದಿಲ್ಲ ಎಂದರು.</p><p>ಮುಸ್ಲಿಮರು, ಪಾಕಿಸ್ತಾನ, ಹಿಂದುತ್ವ ಬಿಟ್ಟರೆ ಬಿಜೆಪಿಯವರಿಗೆ ಮಾತನಾಡಲು ಬೇರೆ ವಿಚಾರಗಳೇ ಇಲ್ಲ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>