ಬಿಜೆಪಿ ರಾಜ್ಯ ಸಮಿತಿಯ ವಿಶೇಷ ಆಹ್ವಾನಿತ ಎನ್.ಎಂ. ರವಿನಾರಾಯಣರೆಡ್ಡಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಈ ದೇಶದ ಶಕ್ತಿಯಾಗಿದ್ದು, ಅವರ ಮಾರ್ಗದರ್ಶನ ಮತ್ತು ಪ್ರೋತ್ಸಾಹದಿಂದ ಇಡೀ ದೇಶದಲ್ಲಿ ಪಕ್ಷ ಸಂಘಟನೆ ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ಕಾರ್ಯಕರ್ತರು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ಅವರ ಕೈ ಬಲಪಡಿಸುವ ಕಾರ್ಯ ಮಾಡಬೇಕಾಗಿದೆ ಎಂದು ಹೇಳಿದರು.