<p><strong>ಚಿಕ್ಕಬಳ್ಳಾಪುರ</strong>: ಜಿ.ಪಂ ಮುಖ್ಯಲೆಕ್ಕಾಧಿಕಾರಿ ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣ ಚಿಕ್ಕಬಳ್ಳಾಪುರದಲ್ಲಿ ರಾಜಕೀಯ ರಂಗನ್ನು ತೀವ್ರವಾಗಿ ಪಡೆಯುತ್ತಿದೆ.</p><p>ಸುಧಾಕರ್ ದಲಿತ ವಿರೋಧಿ ಎಂದು ಅವರ ಭಾವಚಿತ್ರವುಳ್ಳ ಪೋಸ್ಟರ್ ಗಳನ್ನು ಅಂಟಿಸಲು ಮುಂದಾಗಿದ್ದವರನ್ನು ಸಂಸದರ ಬೆಂಬಲಿಗರು ತಡೆದಿದ್ದಾರೆ.</p><p>ಶನಿವಾರ ನಡುರಾತ್ರಿ ಕಾಂಗ್ರೆಸ್ ಮುಖಂಡರು ಹಾಗೂ ಶಾಸಕ ಪ್ರದೀಪ್ ಈಶ್ವರ್ ಬೆಂಬಲಿಗರಾದ ವಿನಯ್ ಮತ್ತು ಹಮೀಮ್ ಎಂಬುವವರು ಫೋಸ್ಟರ್ ಅಂಟಿಸಲು ಮುಂದಾಗಿದ್ದಾರೆ. ಇದನ್ನು ತಡೆದ ಸಂಸದರ ಬೆಂಬಲಿಗರು ವಿಡಿಯೊ ಮಾಡಿದ್ದಾರೆ.</p><p>ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಶಾಸಕರ ಬೆಂಬಲಿಗರನ್ನು ಕರೆದೊಯ್ದಿದ್ದಾರೆ. </p><p>ಈ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ನಡುರಾತ್ರಿಯೇ ಪೊಲೀಸ್ ಠಾಣೆ ಎದುರು ಬಿಜೆಪಿ ಕಾರ್ಯಕರ್ತರು ಮತ್ತು ಸುಧಾಕರ್ ಬೆಂಬಲಿಗರು ಜಮಾಯಿಸಿದ್ದಾರೆ. ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.</p><p>ಸಂಸದ ಸುಧಾಕರ್ ಅವರನ್ನು ದಲಿತ ವಿರೋಧಿ ಎಂದು ಅಪಪ್ರಚಾರ ಮಾಡಲು ಶಾಸಕರ ಅಪ್ತರು ಮುಂದಾಗಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.</p><p>ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಸಂಸದ ಡಾ.ಕೆ.ಸುಧಾಕರ್ ಮೊದಲ ಆರೋಪಿ ಆಗಿದ್ದಾರೆ. ಅವರ ಮೇಲೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.</p>.ಚಾಲಕ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣ: ರಾಜಕಾರಣ ಮಾಡದಂತೆ ಸೋದರನಿಂದ ಮನವಿ .ಚಾಲಕ ಆತ್ಮಹತ್ಯೆ: ಕೆ.ಸುಧಾಕರ್ ಎ1, ಮೂರು ಪುಟಗಳ ಡೆತ್ನೋಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಜಿ.ಪಂ ಮುಖ್ಯಲೆಕ್ಕಾಧಿಕಾರಿ ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣ ಚಿಕ್ಕಬಳ್ಳಾಪುರದಲ್ಲಿ ರಾಜಕೀಯ ರಂಗನ್ನು ತೀವ್ರವಾಗಿ ಪಡೆಯುತ್ತಿದೆ.</p><p>ಸುಧಾಕರ್ ದಲಿತ ವಿರೋಧಿ ಎಂದು ಅವರ ಭಾವಚಿತ್ರವುಳ್ಳ ಪೋಸ್ಟರ್ ಗಳನ್ನು ಅಂಟಿಸಲು ಮುಂದಾಗಿದ್ದವರನ್ನು ಸಂಸದರ ಬೆಂಬಲಿಗರು ತಡೆದಿದ್ದಾರೆ.</p><p>ಶನಿವಾರ ನಡುರಾತ್ರಿ ಕಾಂಗ್ರೆಸ್ ಮುಖಂಡರು ಹಾಗೂ ಶಾಸಕ ಪ್ರದೀಪ್ ಈಶ್ವರ್ ಬೆಂಬಲಿಗರಾದ ವಿನಯ್ ಮತ್ತು ಹಮೀಮ್ ಎಂಬುವವರು ಫೋಸ್ಟರ್ ಅಂಟಿಸಲು ಮುಂದಾಗಿದ್ದಾರೆ. ಇದನ್ನು ತಡೆದ ಸಂಸದರ ಬೆಂಬಲಿಗರು ವಿಡಿಯೊ ಮಾಡಿದ್ದಾರೆ.</p><p>ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಶಾಸಕರ ಬೆಂಬಲಿಗರನ್ನು ಕರೆದೊಯ್ದಿದ್ದಾರೆ. </p><p>ಈ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ನಡುರಾತ್ರಿಯೇ ಪೊಲೀಸ್ ಠಾಣೆ ಎದುರು ಬಿಜೆಪಿ ಕಾರ್ಯಕರ್ತರು ಮತ್ತು ಸುಧಾಕರ್ ಬೆಂಬಲಿಗರು ಜಮಾಯಿಸಿದ್ದಾರೆ. ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.</p><p>ಸಂಸದ ಸುಧಾಕರ್ ಅವರನ್ನು ದಲಿತ ವಿರೋಧಿ ಎಂದು ಅಪಪ್ರಚಾರ ಮಾಡಲು ಶಾಸಕರ ಅಪ್ತರು ಮುಂದಾಗಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.</p><p>ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಸಂಸದ ಡಾ.ಕೆ.ಸುಧಾಕರ್ ಮೊದಲ ಆರೋಪಿ ಆಗಿದ್ದಾರೆ. ಅವರ ಮೇಲೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.</p>.ಚಾಲಕ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣ: ರಾಜಕಾರಣ ಮಾಡದಂತೆ ಸೋದರನಿಂದ ಮನವಿ .ಚಾಲಕ ಆತ್ಮಹತ್ಯೆ: ಕೆ.ಸುಧಾಕರ್ ಎ1, ಮೂರು ಪುಟಗಳ ಡೆತ್ನೋಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>