ಮೋರ್ಚಾದ ಜಿಲ್ಲಾ ಘಟಕದ ಕಾರ್ಯದರ್ಶಿ ಸಿ.ಬಿ.ಕಿರಣ್ ಮಾತನಾಡಿ, ‘ಪಕ್ಷದ ಸಂಘಟನೆಯೊಂದಿಗೆ ಸ್ವಚ್ಛತಾ ಕಾರ್ಯ ನಡೆಸಲು ನಿರ್ಧರಿಸಿರುವ ಯುವ ಮೋರ್ಚಾ ಜಿಲ್ಲೆಯಲ್ಲಿರುವ ಪುರಾತನ ದೇವಾಲಯಗಳ ಹಾಗೂ ಕಲ್ಯಾಣಿಗಳ ಸ್ವಚ್ಛತೆ ಕಾರ್ಯ ನಡೆಸಲು ನಿರ್ಧರಿಸಿದೆ. ಮುಂಬರುವ ದಿನಗಳಲ್ಲಿ ಬಾಗೇಪಲ್ಲಿ ತಾಲ್ಲೂಕಿನ ಗುಮ್ಮನಾಯಕನ ಪಾಳ್ಯದ ಕೋಟೆಯಲ್ಲಿ ಸ್ವಚ್ಛ ಭಾರತ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ’ ಎಂದು ಹೇಳಿದರು. ಮೋರ್ಚಾದ ಪದಾಧಿಕಾರಿಗಳಾದ ಬಾಲು, ಮಧುಚಂದ್ರ, ನರೇಶ್, ನವೀನ್ ಹಾಜರಿದ್ದರು.