<p>ಚಿಕ್ಕಬಳ್ಳಾಪುರ: ‘ಎಚ್.ಡಿ. ದೇವೇಗೌಡ ಜೀವಂತ ಇರುವವರೆಗೂ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದುಕೊಂಡಿದ್ದೆ. ಜಾತ್ಯತೀತ ತತ್ವದ ಜೆಡಿಎಸ್, ಕೋಮುವಾದಿ ಬಿಜೆಪಿ ಜೊತೆ ಕೈಜೋಡಿಸಿರುವುದು ನಿಜಕ್ಕೂ ಅಚ್ಚರಿ ತರಿಸಿದೆ’ ಎಂದು ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಪ್ರತಿಕ್ರಿಯಿಸಿದ್ದಾರೆ. </p>.<p>ಜೆಡಿಎಸ್ ಮತ್ತು ಬಿಜೆಪಿ ಒಂದಾಗಿವೆ ಎನ್ನುವುದು ಇಲ್ಲಿಯವರೆಗೆ ಗೋಪ್ಯವಾಗಿತ್ತು. ಆದರೆ ಈಗ ಜನರಿಗೆ ಸ್ಪಷ್ಟವಾಗಿ ಗೊತ್ತಾಗಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೆ ಬಿಜೆಪಿಗೆ ಖಂಡಿತಾ ಒಳ್ಳೆಯದಾಗುವುದಿಲ್ಲ. ಪಕ್ಷದ ಶಕ್ತಿ ಕ್ಷೀಣಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕೋಮುವಾದಿ ಮತ್ತು ಮತೀಯವಾದಿ ಪಕ್ಷ ಎಂದು ತಮ್ಮ ಪಕ್ಷದ ವಿರುದ್ಧವೇ ಬಹಿರಂಗವಾಗಿ ವಾಗ್ದಾಳಿ ನಡೆಸಿದರು.</p>.<p>‘ಜೆಡಿಎಸ್ ಜತೆ ಕೈಜೋಡಿಸುವ ಉದ್ದೇಶದಿಂದಲೇ ಬಿಜೆಪಿ ಹೈಕಮಾಂಡ್ ವಿಧಾನಸಭೆ ಪ್ರತಿಪಕ್ಷದ ನಾಯಕ ಮತ್ತು ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗಳಿಗೆ ನೇಮಕ ತಡ ಮಾಡಿದೆ. ಮೈತ್ರಿ ತೀರ್ಮಾನದ ನಂತರ ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ ಎಂದು ನನಗೆ ಅನ್ನಿಸುತ್ತಿದೆ’ ಎಂದರು.</p>.<p>‘ಬಿಜೆಪಿಯವರು ಮಾಡುವುದೆಲ್ಲ ಸರಿ ಎಂದು ಹೇಳಲು ಆಗುವುದಿಲ್ಲ. ನಾನೂ ಪಕ್ಷದಲ್ಲಿ ಹಿರಿಯನಿದ್ದೇನೆ. ಸುಮ್ಮನೆ ಇರಬೇಕಾಗುತ್ತದೆ. ಹಾಗಾಗಿ ಸುಮ್ಮನೆ ಇದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ‘ಎಚ್.ಡಿ. ದೇವೇಗೌಡ ಜೀವಂತ ಇರುವವರೆಗೂ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದುಕೊಂಡಿದ್ದೆ. ಜಾತ್ಯತೀತ ತತ್ವದ ಜೆಡಿಎಸ್, ಕೋಮುವಾದಿ ಬಿಜೆಪಿ ಜೊತೆ ಕೈಜೋಡಿಸಿರುವುದು ನಿಜಕ್ಕೂ ಅಚ್ಚರಿ ತರಿಸಿದೆ’ ಎಂದು ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಪ್ರತಿಕ್ರಿಯಿಸಿದ್ದಾರೆ. </p>.<p>ಜೆಡಿಎಸ್ ಮತ್ತು ಬಿಜೆಪಿ ಒಂದಾಗಿವೆ ಎನ್ನುವುದು ಇಲ್ಲಿಯವರೆಗೆ ಗೋಪ್ಯವಾಗಿತ್ತು. ಆದರೆ ಈಗ ಜನರಿಗೆ ಸ್ಪಷ್ಟವಾಗಿ ಗೊತ್ತಾಗಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೆ ಬಿಜೆಪಿಗೆ ಖಂಡಿತಾ ಒಳ್ಳೆಯದಾಗುವುದಿಲ್ಲ. ಪಕ್ಷದ ಶಕ್ತಿ ಕ್ಷೀಣಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕೋಮುವಾದಿ ಮತ್ತು ಮತೀಯವಾದಿ ಪಕ್ಷ ಎಂದು ತಮ್ಮ ಪಕ್ಷದ ವಿರುದ್ಧವೇ ಬಹಿರಂಗವಾಗಿ ವಾಗ್ದಾಳಿ ನಡೆಸಿದರು.</p>.<p>‘ಜೆಡಿಎಸ್ ಜತೆ ಕೈಜೋಡಿಸುವ ಉದ್ದೇಶದಿಂದಲೇ ಬಿಜೆಪಿ ಹೈಕಮಾಂಡ್ ವಿಧಾನಸಭೆ ಪ್ರತಿಪಕ್ಷದ ನಾಯಕ ಮತ್ತು ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗಳಿಗೆ ನೇಮಕ ತಡ ಮಾಡಿದೆ. ಮೈತ್ರಿ ತೀರ್ಮಾನದ ನಂತರ ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ ಎಂದು ನನಗೆ ಅನ್ನಿಸುತ್ತಿದೆ’ ಎಂದರು.</p>.<p>‘ಬಿಜೆಪಿಯವರು ಮಾಡುವುದೆಲ್ಲ ಸರಿ ಎಂದು ಹೇಳಲು ಆಗುವುದಿಲ್ಲ. ನಾನೂ ಪಕ್ಷದಲ್ಲಿ ಹಿರಿಯನಿದ್ದೇನೆ. ಸುಮ್ಮನೆ ಇರಬೇಕಾಗುತ್ತದೆ. ಹಾಗಾಗಿ ಸುಮ್ಮನೆ ಇದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>