ಶ್ರೀದೇವಿಭೂದೇವಿ ಸಮೇತ ಶ್ರೀ ವೆಂಕಟರಮಣಸ್ವಾಮಿಗೆ ವಿಶೇಷ ಅಭಿಷೇಕ, ಪೂಜೆ, ಅಲಂಕಾರವನ್ನು ಮಾಡಲಾಗಿತ್ತು. ದೇವಾಲಯವನ್ನು ಸ್ವಚ್ಛಗೊಳಿಸಿ ಅಲಂಕರಿಸಲಾಗಿತ್ತು. ಪ್ರಾಂಗಣದಲ್ಲಿರುವ ಅಮ್ಮನವರ ದೇವಾಲಯದಲ್ಲೂ ವಿಶೇಷ ಪೂಜಾ ಕೈಂಕರ್ಯಗಳು ಶ್ರದ್ಧಾ ಭಕ್ತಿಯಿಂದ ನೆರವೇರಿದವು. ಕೈವಾರದ ಯೋಗಿನಾರೇಯಣ ಮಠದ ಸಂಕೀರ್ತನಾ ಯೋಜನೆಯಿಂದ ಸಂಕೀರ್ತನಾ ಸೇವೆಯನ್ನು ಹಮ್ಮಿಕೊಳ್ಳಲಾಗಿತ್ತು. ಕೈವಾರ ಕ್ಷೇತ್ರದ ಧರ್ಮಾಧಿಕಾರಿ ಡಾ.ಎಂ.ಆರ್.ಜಯರಾಂಸೇರಿದಂತೆ ನೂರಾರು ಜನ ಭಕ್ತರು ಸಂಕೀರ್ತನೆಯಲ್ಲಿ ಪಾಲ್ಗೊಂಡಿದ್ದರು.