ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಾರಾಯಣಸ್ವಾಮಿ, ‘ಕ್ಷೇತ್ರಕ್ಕೆ ಇವತ್ತು ಒಳ್ಳೆಯ ಶಾಸಕರು ಬೇಕಾಗಿದ್ದಾರೆ. ಇವತ್ತು ಕ್ಷೇತ್ರದಲ್ಲಿ ಜನರ ಸಮಸ್ಯೆ ಕೇಳುವವರಿಲ್ಲ. ಕೈಗಾರಿಕೆಗಳ ಅಭಿವೃದ್ಧಿಯಾಗಿಲ್ಲ. ನನಗೆ ಕ್ಷೇತ್ರದ ಪ್ರತಿಯೊಂದು ಸಮಸ್ಯೆಯ ಅರಿವಿದೆ. ಕ್ಷೇತ್ರದಲ್ಲಿಯೇ ಮನೆ ಮಾಡುವೆ. ಮುಂದಿನ ಎಲ್ಲ ಚುನಾವಣೆಗಳಲ್ಲಿ ನಮ್ಮ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ’ ಎಂದು ಹೇಳಿದರು.