ಸಿಪಿಎಂ ಮುಖಂಡ ಎಚ್.ಪಿ.ಲಕ್ಷ್ಮಿನಾರಾಯಣ ಮಾತನಾಡಿ, ‘ದೇಶ ಪ್ರಥಮ ಬಾರಿ ಕಂಡಂತಹ ಕಳಪೆ, ಕಾರ್ಮಿಕ, ರೈತ ವಿರೋಧಿ ಬಜೆಟ್ ಇದಾಗಿದೆ. ಕೇವಲ ಅಂಬಾನಿ, ಅದಾನಿಯಂತಹ ಶ್ರೀಮಂತರಿಗೆ, ಕಾರ್ಪೊರೇಟ್ ಕಂಪನಿಗಳಿಗೆ ಮಾತ್ರ ಈ ಬಜೆಟ್ ಪೂರಕವಾಗಿದೆ. ಶಿಕ್ಷಣ, ಉದ್ಯೋಗ ಸೃಷ್ಟಿ, ವ್ಯವಸಾಯ, ನೂತನ ಕೈಗಾರಿಕೆಗಳ ಸ್ಥಾಪನೆಗೆ ಯಾವುದೇ ಒತ್ತು ನೀಡಿಲ್ಲ. ಇಂತಹ ಜನವಿರೋಧಿ, ಕಣ್ಣೊರೆಸುವ ಬಜೆಟ್ ಅನ್ನು ಕೇಂದ್ರಸರ್ಕಾರ ಕೂಡಲೇ ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದರು.