ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಲಾಕ್ ಡೌನ್ ತೆರವಾಗಿದ್ದು ಬಸ್ ಸಂಚಾರ ಆರಂಭವಾಗಿದೆ. ಬೆಳಿಗ್ಗೆ 11.30ರವರೆಗೆ ಚಿಕ್ಕಬಳ್ಳಾಪುರ ಕೆಎಸ್ಆರ್ಟಿಸಿ ಘಟಕದಿಂದ 28 ಬಸ್ ಗಳು ಸಂಚಾರ ಆರಂಭಿಸಿವೆ
ಜಿಲ್ಲಾ ಕೇಂದ್ರದ ಬಸ್ ನಿಲ್ದಾಣದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರೇನೂ ಇಲ್ಲ.
ವಾಣಿಜ್ಯ ಚಟುವಟಿಕೆಗಳು ಹೆಚ್ಚಿವೆ. ಕೋವಿಡ್ ಪೂರ್ವದಲ್ಲಿ ಇದ್ದಂತೆಯೇ ಜನ ಸಂಚಾರವಿದೆ.
ಚಿಕ್ಕಬಳ್ಳಾಪುರ ಕೆಎಸ್ಆರ್ಟಿಸಿ ವಿಭಾಗದಲ್ಲಿ ಪ್ರತಿ ಘಟಕದಿಂದ 30 ಬಸ್ ಓಡಿಸಬೇಕು ಎಂದುಕೊಂಡಿದ್ದೇವೆ. ಪ್ರಯಾಣಿಕರ ಸಂಖ್ಯೆ ಆಧರಿಸಿ ಸಂಖ್ಯೆ ಹೆಚ್ಚಬಹುದು ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಬಸವರಾಜು ತಿಳಿಸಿದರು.