ಈ ಕ್ಷೇತ್ರದ ಹಿಂದಿನ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಸುಧಾಕರ್ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಆ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಹಲವರು ಸಿನಿಮಾ ತಾರೆಯರನ್ನು ಕರೆ ತಂದು ತಮ್ಮ ಪರ ಮತ ಪ್ರಚಾರ ಕೈಗೊಂಡಿದ್ದರು. ಆದರೆ, ಈ ಬಾರಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರಿದ್ದು ಈ ಬಾರಿಯೂ ಕೂಡ ಮತದಾರರನ್ನು ಸೆಳೆಯಲು ಸಿನಿಮಾ ತಾರೆಯರನ್ನು ಪ್ರತಿನಿತ್ಯ ಪ್ರಚಾರಕ್ಕೆಂದು ಬಳಸಿಕೊಳ್ಳುತ್ತಿದ್ದಾರೆ. ನಗರದಲ್ಲಿ ಕಳೆದ ಒಂದು ವಾರದಿಂದ ಸಿನಿಮಾ ತಾರೆಯರಾದ ಹಿರಿಯ ನಟಿ ಶ್ರುತಿ, ಹರ್ಷಿಕಾ ಪೂಣಚ್ಚ, ಹರಿಪ್ರಿಯಾ, ನಟರಾದ ಭುವನ್, ದಿಗಂತ್ ಹೆಗಡೆ ಅವರು ಸುಧಾಕರ್ ಪರ ಪ್ರಚಾರ ನಡೆಸುತ್ತಿದ್ದಾರೆ.