ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಪಿಎಂಸಿ ಸ್ಥಾನಕ್ಕೆ ಉಪ ಚುನಾವಣೆ

Last Updated 24 ನವೆಂಬರ್ 2020, 3:00 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಗೌರಿಬಿದನೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಲ್ಲೂಡಿ ಪರಿಶಿಷ್ಟ ಪಂಗಡ ಮೀಸಲು ಕೃಷಿಕ ಕ್ಷೇತ್ರಕ್ಕೆ ಸದಸ್ಯನನ್ನು ಆಯ್ಕೆ ಮಾಡಲು ಜಿಲ್ಲಾಧಿಕಾರಿ ಅವರು ಸೋಮವಾರ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದಾರೆ.

ನವೆಂಬರ್ 30 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಡಿಸೆಂಬರ್ 1 ನಾಮಪತ್ರ ಪರಿಶೀಲನೆ ನಡೆಯಲಿದೆ. ಡಿ. 4 ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಅವಶ್ಯವಿದ್ದರೆ ಡಿ.14ರಂದು ಬೆಳಿಗ್ಗೆ 8 ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. ಅವಶ್ಯಕತೆ ಇದ್ದಲ್ಲಿಡಿ.15 ರಂದು ಮರು ಮತದಾನ ನಡೆಯಲಿದೆ. ಡಿ. 16ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಡಿ. 17ರಂದು ಮತದಾನ ಪ್ರಕ್ರಿಯೆ ಕೊನೆಗೊಳ್ಳಲಿದೆ.

ನಾಮಪತ್ರಗಳನ್ನು ಗೌರಿಬಿದನೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿಯಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3ರ ಒಳಗೆ ಸಲ್ಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT