<p><strong>ಚಿಕ್ಕಬಳ್ಳಾಪುರ</strong>: ತಾಲ್ಲೂಕಿನ ನಂದಿಗಿರಿಧಾಮದಲ್ಲಿ ಜೂ.19ರಂದು ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಸ್ಥಳಾಂತರವಾಗಿತ್ತು. ಇದಕ್ಕೆ ಜಿಲ್ಲೆಯಲ್ಲಿ ನಾಗರಿಕ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. </p>.<p>ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಂದಿಬೆಟ್ಟದಲ್ಲಿ ಜುಲೈ 16 ಅಥವಾ 17 ರಂದು ಸಂಪುಟ ಸಭೆ ನಡೆಸಲಾಗುವುದು ಎಂದು ಸರ್ಕಾರ ತಿಳಿಸಿದೆ. ಹಲವು ಇಲಾಖೆಯಿಂದ ಪ್ರಸ್ತಾವಗಳು ಬಾರದೇ ಇದ್ದ ಕಾರಣ, ಬೆಂಗಳೂರಿನಲ್ಲಿ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಯಿತು. ಆ ಪ್ರದೇಶಕ್ಕೆ ಪರಿಣಾಮಕಾರಿ ಕೆಲಸಗಳು ಆಗಬೇಕು ಎಂಬ ಉದ್ದೇಶದಿಂದ ಮತ್ತು ಕೆಲವು ಸಚಿವರ ಕೋರಿಕೆ ಮೇರೆಗೆ ಮುಂದೂಡಲಾಯಿತು ಎಂದೂ ಸರ್ಕಾರ ತಿಳಿಸಿದೆ. </p>.<p>ಈಗ ಜುಲೈ ತಿಂಗಳಲ್ಲಿ ನಡೆಯುವ ಸಚಿವ ಸಂಪುಟದತ್ತ ಜಿಲ್ಲೆಯ ಜನರ ಚಿತ್ತ ಹರಿದಿದೆ. ಜಿಲ್ಲೆಯ ಶಾಸಕರು ಈ ಭಾಗದ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಮುಂದಿನ ತಿಂಗಳು ನಂದಿಯಲ್ಲಿ ಸಚಿವ ಸಂಪುಟ ಸಭೆ ನಡೆದರೆ ಯಾವ ವಿಚಾರಗಳು ಕಾರ್ಯಸೂಚಿ ಪಟ್ಟಿಯಲ್ಲಿ ಇರಲಿವೆ ಎನ್ನುವ ಕುತೂಹಲ ಸಹ ಶಾಶ್ವತ ನೀರಾವರಿ ಹೋರಾಟಗಾರರು, ರೈತ ಮುಖಂಡರದ್ದಾಗಿದೆ. </p>.<p>ಚಿಕ್ಕಬಳ್ಳಾಪುರ ಸೇರಿದಂತೆ ಬಯಲು ಸೀಮೆಯ ಜಿಲ್ಲೆಗಳ ಅಭಿವೃದ್ಧಿ ವಿಚಾರವಾಗಿ ನಂದಿಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಬೇಕು ಎನ್ನುವ ಒತ್ತಾಯ ಜನಪ್ರತಿನಿಧಿಗಳದ್ದೂ ಆಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ತಾಲ್ಲೂಕಿನ ನಂದಿಗಿರಿಧಾಮದಲ್ಲಿ ಜೂ.19ರಂದು ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಸ್ಥಳಾಂತರವಾಗಿತ್ತು. ಇದಕ್ಕೆ ಜಿಲ್ಲೆಯಲ್ಲಿ ನಾಗರಿಕ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. </p>.<p>ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಂದಿಬೆಟ್ಟದಲ್ಲಿ ಜುಲೈ 16 ಅಥವಾ 17 ರಂದು ಸಂಪುಟ ಸಭೆ ನಡೆಸಲಾಗುವುದು ಎಂದು ಸರ್ಕಾರ ತಿಳಿಸಿದೆ. ಹಲವು ಇಲಾಖೆಯಿಂದ ಪ್ರಸ್ತಾವಗಳು ಬಾರದೇ ಇದ್ದ ಕಾರಣ, ಬೆಂಗಳೂರಿನಲ್ಲಿ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಯಿತು. ಆ ಪ್ರದೇಶಕ್ಕೆ ಪರಿಣಾಮಕಾರಿ ಕೆಲಸಗಳು ಆಗಬೇಕು ಎಂಬ ಉದ್ದೇಶದಿಂದ ಮತ್ತು ಕೆಲವು ಸಚಿವರ ಕೋರಿಕೆ ಮೇರೆಗೆ ಮುಂದೂಡಲಾಯಿತು ಎಂದೂ ಸರ್ಕಾರ ತಿಳಿಸಿದೆ. </p>.<p>ಈಗ ಜುಲೈ ತಿಂಗಳಲ್ಲಿ ನಡೆಯುವ ಸಚಿವ ಸಂಪುಟದತ್ತ ಜಿಲ್ಲೆಯ ಜನರ ಚಿತ್ತ ಹರಿದಿದೆ. ಜಿಲ್ಲೆಯ ಶಾಸಕರು ಈ ಭಾಗದ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಮುಂದಿನ ತಿಂಗಳು ನಂದಿಯಲ್ಲಿ ಸಚಿವ ಸಂಪುಟ ಸಭೆ ನಡೆದರೆ ಯಾವ ವಿಚಾರಗಳು ಕಾರ್ಯಸೂಚಿ ಪಟ್ಟಿಯಲ್ಲಿ ಇರಲಿವೆ ಎನ್ನುವ ಕುತೂಹಲ ಸಹ ಶಾಶ್ವತ ನೀರಾವರಿ ಹೋರಾಟಗಾರರು, ರೈತ ಮುಖಂಡರದ್ದಾಗಿದೆ. </p>.<p>ಚಿಕ್ಕಬಳ್ಳಾಪುರ ಸೇರಿದಂತೆ ಬಯಲು ಸೀಮೆಯ ಜಿಲ್ಲೆಗಳ ಅಭಿವೃದ್ಧಿ ವಿಚಾರವಾಗಿ ನಂದಿಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಬೇಕು ಎನ್ನುವ ಒತ್ತಾಯ ಜನಪ್ರತಿನಿಧಿಗಳದ್ದೂ ಆಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>