ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ನಂದಿಗಿರಿಧಾಮದಲ್ಲಿ ನಿಗದಿಯಾಗಿರುವ ಸಂಪುಟ ಸಭೆಯ ಮೇಲೆ ಅನಿಶ್ಚಿತತೆಯ ತೂಗುಗತ್ತಿ!

Published : 17 ಜೂನ್ 2025, 4:21 IST
Last Updated : 17 ಜೂನ್ 2025, 4:21 IST
ಫಾಲೋ ಮಾಡಿ
Comments
ಪ್ರಸ್ತಾವಗಳ ಮಾಹಿತಿಗೆ ಸೂಚನೆ
ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಬೆಂಗಳೂರಿನಲ್ಲಿ ಮುಖ್ಯಕಾರ್ಯದರ್ಶಿ ಅವರ ಜೊತೆ ಸಭೆ ನಡೆಸಿದರು. ಮುಖ್ಯಕಾರ್ಯದರ್ಶಿ ಮತ್ತು ಸಚಿವರು ವಿವಿಧ ಇಲಾಖೆಗಳ ಕಾರ್ಯದರ್ಶಿಗಳ ಜೊತೆ ವಿಡಿಯೊ ಸಂವಾದ ನಡೆಸಿದರು. ಚಿಕ್ಕಬಳ್ಳಾಪುರ ಜಿಲ್ಲೆಗೆ ಸಂಬಂಧಿಸಿದಂತೆ ಯಾವ ಯಾವ ಪ್ರಸ್ತಾವಗಳು, ಅಭಿವೃದ್ಧಿ ಯೋಜನೆಗಳು ಇವೆ ಎನ್ನುವ ಬಗ್ಗೆ ಮಾಹಿತಿ ನೀಡುವಂತೆ ಮುಖ್ಯ ಕಾರ್ಯದರ್ಶಿ ಅವರು ಆಯಾ ಇಲಾಖೆ ಉನ್ನತ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಭೋಗನಂದೀಶ್ವರ ಪ್ರವೇಶಕ್ಕೆ ನಿರ್ಬಂಧ
ಚಿಕ್ಕಬಳ್ಳಾಪುರ: ತಾಲ್ಲೂಕಿನ ನಂದಿಗಿರಿಧಾಮದಲ್ಲಿ ಜೂನ್‌19 ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಸಚಿವ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರು, ಶಾಸಕರು ನಂದಿ ಗ್ರಾಮದ ಭೋಗನಂದೀಶ್ವರ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಗಣ್ಯರಿಗೆ ಶಿಷ್ಟಾಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜೂ.19 ರಂದು ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರಿಗೆ ಭಕ್ತರಿಗೆ ಹಾಗೂ ಪ್ರವಾಸಿಗರಿಗೆ ದೇವಾಲಯದ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT