<p><strong>ಚಿಕ್ಕಬಳ್ಳಾಪುರ</strong>: ತಾಲ್ಲೂಕಿನ ಐತಿಹಾಸಿಕ ನಂದಿಗಿರಿಧಾಮದಲ್ಲಿ ಜೂ.19ರಂದು ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಬೆಂಗಳೂರಿನ ವಿಧಾನ ಸೌಧ ಸಚಿವ ಸಂಪುಟ ಸಭಾಂಗಣಕ್ಕೆ ಸ್ಥಳಾಂತರಿಸಲಾಗಿದೆ.</p><p>ಜಿಲ್ಲಾಡಳಿತ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಎಲ್ಲ ಸಿದ್ದತೆ ಮಾಡಿಕೊಂಡಿತ್ತು. ನಂದಿಗಿರಿಧಾಮಕ್ಕೆ ಮತ್ತು ನಂದಿ ಗ್ರಾಮದ ಭೋಗನಂದೀಶ್ವರ ದೇಗುಲ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. </p><p>ಗಿರಿಧಾಮದ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿಯಲಾಗಿತ್ತು.</p><p>ಮುಂದೂಡಿಕೆ ಬಗ್ಗೆ ಪ್ರಜಾವಾಣಿಯಲ್ಲಿ ವರದಿ: ನಂದಿಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ಮುಂದೂಡಿಕೆ ಆಗುವ ಸಾಧ್ಯತೆ ಇದೆ ಎಂದು ಸೋಮವಾರ ಪ್ರಜಾವಾಣಿಯಲ್ಲಿ ವರದಿ ಪ್ರಕಟವಾಗಿತ್ತು. ಈ ವರದಿ ತೀವ್ರ ಚರ್ಚೆಗೆ ಕಾರಣವಾಗಿತ್ತು.</p><p>ಸಚಿವ ಸಂಪುಟ ಸಭೆಯಲ್ಲಿ ಅನುದಾನ ಮತ್ತು ಯೋಜನೆಗಳ ಘೋಷಣೆ ಬಗ್ಗೆ ನಿರ್ಣಯ ಕೈಗೊಳ್ಳಬೇಕು ಎಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಶಾಸಕರು ಮುಖ್ಯಮಂತ್ರಿ ಅವರನ್ನು ಆಗ್ರಹಿಸಿದ್ದರು. ಆದರೆ ಮುಖ್ಯಮಂತ್ರಿ ಈ ವಿಚಾರದಲ್ಲಿ ಖಚಿತ ಭರವಸೆ ನೀಡಿರಲಿಲ್ಲ ಎನ್ನಲಾಗಿದೆ.</p><p>ಅಲ್ಲದೆ ಜಿಲ್ಲೆಯ ಶಾಸಕರು ತಮ್ಮ ಕ್ಷೇತ್ರಗಳ ಯೋಜನೆಗಳ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವ ಸಹ ಸಲ್ಲಿಸಿದ್ದರು. ಈ ಯೋಜನೆಗಳ ಜಾರಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ತಾಲ್ಲೂಕಿನ ಐತಿಹಾಸಿಕ ನಂದಿಗಿರಿಧಾಮದಲ್ಲಿ ಜೂ.19ರಂದು ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಬೆಂಗಳೂರಿನ ವಿಧಾನ ಸೌಧ ಸಚಿವ ಸಂಪುಟ ಸಭಾಂಗಣಕ್ಕೆ ಸ್ಥಳಾಂತರಿಸಲಾಗಿದೆ.</p><p>ಜಿಲ್ಲಾಡಳಿತ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಎಲ್ಲ ಸಿದ್ದತೆ ಮಾಡಿಕೊಂಡಿತ್ತು. ನಂದಿಗಿರಿಧಾಮಕ್ಕೆ ಮತ್ತು ನಂದಿ ಗ್ರಾಮದ ಭೋಗನಂದೀಶ್ವರ ದೇಗುಲ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. </p><p>ಗಿರಿಧಾಮದ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿಯಲಾಗಿತ್ತು.</p><p>ಮುಂದೂಡಿಕೆ ಬಗ್ಗೆ ಪ್ರಜಾವಾಣಿಯಲ್ಲಿ ವರದಿ: ನಂದಿಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ಮುಂದೂಡಿಕೆ ಆಗುವ ಸಾಧ್ಯತೆ ಇದೆ ಎಂದು ಸೋಮವಾರ ಪ್ರಜಾವಾಣಿಯಲ್ಲಿ ವರದಿ ಪ್ರಕಟವಾಗಿತ್ತು. ಈ ವರದಿ ತೀವ್ರ ಚರ್ಚೆಗೆ ಕಾರಣವಾಗಿತ್ತು.</p><p>ಸಚಿವ ಸಂಪುಟ ಸಭೆಯಲ್ಲಿ ಅನುದಾನ ಮತ್ತು ಯೋಜನೆಗಳ ಘೋಷಣೆ ಬಗ್ಗೆ ನಿರ್ಣಯ ಕೈಗೊಳ್ಳಬೇಕು ಎಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಶಾಸಕರು ಮುಖ್ಯಮಂತ್ರಿ ಅವರನ್ನು ಆಗ್ರಹಿಸಿದ್ದರು. ಆದರೆ ಮುಖ್ಯಮಂತ್ರಿ ಈ ವಿಚಾರದಲ್ಲಿ ಖಚಿತ ಭರವಸೆ ನೀಡಿರಲಿಲ್ಲ ಎನ್ನಲಾಗಿದೆ.</p><p>ಅಲ್ಲದೆ ಜಿಲ್ಲೆಯ ಶಾಸಕರು ತಮ್ಮ ಕ್ಷೇತ್ರಗಳ ಯೋಜನೆಗಳ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವ ಸಹ ಸಲ್ಲಿಸಿದ್ದರು. ಈ ಯೋಜನೆಗಳ ಜಾರಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>