<p><strong>ಚಿಂತಾಮಣಿ</strong>: ತಾಲ್ಲೂಕಿನ ತಿರುಮಲಾಪುರ ಗ್ರಾಮದದಲ್ಲಿ ಮಾರ್ಚ್ 28ರಂದು ರಾತ್ರಿ ಅತ್ಯಂತ ವೈಭವದಿಂದ ನಡೆಸಲು ಉದ್ದೇಶಿಸಿದ್ದ ಶ್ರೀಲಕ್ಷ್ಮೀನರಸಿಂಹಸ್ವಾಮಿಯ ಬೆಳದಿಂಗಳ ಬ್ರಹ್ಮ ರಥೋತ್ಸವವನ್ನು ಕೊರೊನಾ ಸೋಂಕು ಹರಡುವ ಹಿನ್ನೆಲೆಯಲ್ಲಿ ರದ್ದುಪಡಿಸಿ ತಹಶೀಲ್ದಾರ್ ಡಿ. ಹನುಮಂತರಾಯಪ್ಪ ಆದೇಶ ಹೊರಡಿಸಿದ್ದಾರೆ.</p>.<p>ಕೋವಿಡ್ ಎರಡನೇ ಅಲೆ ವ್ಯಾಪಕವಾಗುತ್ತಿದೆ. ತಿರುಮಲಾಪುರ ಜಾತ್ರೆಯು ಪ್ರತಿವರ್ಷ ವೈಭವದಿಂದ ನಡೆಯುತ್ತಿದ್ದು ಸಾವಿರಾರು ಜನರು ಸೇರುತ್ತಾರೆ. ಈ ಬಾರಿ ಕೇವಲ 500 ಜನರಿಗೆ ಮಾತ್ರ ಅವಕಾಶವಿದೆ. ರಾತ್ರಿವೇಳೆಯಲ್ಲಿ ಜಾತ್ರೆ ನಡೆಯುವುದರಿಂದ ಮಾರ್ಗಸೂಚಿಯಂತೆ ಜನರನ್ನು ನಿಯಂತ್ರಿಸಲು ತೊಂದರೆಯಾಗುತ್ತದೆ ಎಂದು ತಿಳಿಸಿದ್ದಾರೆ.</p>.<p>ದೇವಾಲಯದಲ್ಲಿ ನಡೆಯುತ್ತಿದ್ದ ಎಲ್ಲ ಧಾರ್ಮಿಕ ಕಾರ್ಯಗಳನ್ನು ಸಂಪ್ರದಾಯದಂತೆ ಸಾಂಕೇತಿಕವಾಗಿ ಆಚರಿಸಬೇಕು. ದೇವಾಲಯದ ಒಳಾವರಣ ಹಾಗೂ ಪ್ರಾಕಾರದೊಳಗೆ ಅರ್ಚಕರು ಮತ್ತು ಸಿಬ್ಬಂದಿಯ ಉಪಸ್ಥಿತಿಯಲ್ಲಿ ನಡೆಸಬೇಕು ಎಂದು ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ತಾಲ್ಲೂಕಿನ ತಿರುಮಲಾಪುರ ಗ್ರಾಮದದಲ್ಲಿ ಮಾರ್ಚ್ 28ರಂದು ರಾತ್ರಿ ಅತ್ಯಂತ ವೈಭವದಿಂದ ನಡೆಸಲು ಉದ್ದೇಶಿಸಿದ್ದ ಶ್ರೀಲಕ್ಷ್ಮೀನರಸಿಂಹಸ್ವಾಮಿಯ ಬೆಳದಿಂಗಳ ಬ್ರಹ್ಮ ರಥೋತ್ಸವವನ್ನು ಕೊರೊನಾ ಸೋಂಕು ಹರಡುವ ಹಿನ್ನೆಲೆಯಲ್ಲಿ ರದ್ದುಪಡಿಸಿ ತಹಶೀಲ್ದಾರ್ ಡಿ. ಹನುಮಂತರಾಯಪ್ಪ ಆದೇಶ ಹೊರಡಿಸಿದ್ದಾರೆ.</p>.<p>ಕೋವಿಡ್ ಎರಡನೇ ಅಲೆ ವ್ಯಾಪಕವಾಗುತ್ತಿದೆ. ತಿರುಮಲಾಪುರ ಜಾತ್ರೆಯು ಪ್ರತಿವರ್ಷ ವೈಭವದಿಂದ ನಡೆಯುತ್ತಿದ್ದು ಸಾವಿರಾರು ಜನರು ಸೇರುತ್ತಾರೆ. ಈ ಬಾರಿ ಕೇವಲ 500 ಜನರಿಗೆ ಮಾತ್ರ ಅವಕಾಶವಿದೆ. ರಾತ್ರಿವೇಳೆಯಲ್ಲಿ ಜಾತ್ರೆ ನಡೆಯುವುದರಿಂದ ಮಾರ್ಗಸೂಚಿಯಂತೆ ಜನರನ್ನು ನಿಯಂತ್ರಿಸಲು ತೊಂದರೆಯಾಗುತ್ತದೆ ಎಂದು ತಿಳಿಸಿದ್ದಾರೆ.</p>.<p>ದೇವಾಲಯದಲ್ಲಿ ನಡೆಯುತ್ತಿದ್ದ ಎಲ್ಲ ಧಾರ್ಮಿಕ ಕಾರ್ಯಗಳನ್ನು ಸಂಪ್ರದಾಯದಂತೆ ಸಾಂಕೇತಿಕವಾಗಿ ಆಚರಿಸಬೇಕು. ದೇವಾಲಯದ ಒಳಾವರಣ ಹಾಗೂ ಪ್ರಾಕಾರದೊಳಗೆ ಅರ್ಚಕರು ಮತ್ತು ಸಿಬ್ಬಂದಿಯ ಉಪಸ್ಥಿತಿಯಲ್ಲಿ ನಡೆಸಬೇಕು ಎಂದು ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>