<p><strong>ಚಿಕ್ಕಬಳ್ಳಾಪುರ:</strong> ನೆರೆಯ ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಗಾಂಜಾ ಘಾಟು ಜೋರಾಗಿಯೇ ಇದೆ. ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಗಾಂಜಾಗೆ ಸಂಬಂಧಿಸಿದಂತೆ 192 ಪ್ರಕರಣಗಳು ದಾಖಲಾಗಿವೆ. ಈ ಅವಧಿಯಲ್ಲಿ ಪೊಲೀಸ್ ಇಲಾಖೆ ₹2.16 ಕೋಟಿ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದೆ.</p>.<p>ಇತ್ತೀಚೆಗಷ್ಟೇ ಗಾಂಜಾ ಸಾಗಾಣೆ ಮತ್ತು ಮಾರಾಟದ ಪ್ರಕರಣದ ಆರೋಪಿಯೊಬ್ಬನಿಗೆ ಜಿಲ್ಲಾ ನ್ಯಾಯಾಲಯ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹ 30 ಸಾವಿರ ದಂಡ ವಿಧಿಸಿದೆ. ಜಿಲ್ಲೆಯ ಬಾಗೇಪಲ್ಲಿ, ಚಿಂತಾಮಣಿ, ಗೌರಿಬಿದನೂರಿನಲ್ಲಿ ಆಗಾಗ್ಗೆ ಗಾಂಜಾ ಮಾರಾಟ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಪ್ರಕರಣಗಳೂ ದಾಖಲಾಗಿವೆ.</p>.<p>2023ರಲ್ಲಿ ₹ 37.60 ಲಕ್ಷ ಮೌಲ್ಯದ 119 ಕೆ.ಜಿ 409 ಗ್ರಾಂ ಮಾದಕ ವಸ್ತುಗಳನ್ನು 50 ಪ್ರಕರಣಗಳಲ್ಲಿ ನಾಶಪಡಿಸಲಾಗಿದೆ. 2024ರಲ್ಲಿ ₹56.78 ಲಕ್ಷ ಮೌಲ್ಯದ 176 ಕೆ.ಜಿ 757 ಗ್ರಾಂ ಮಾದಕ ವಸ್ತುಗಳನ್ನು 22 ಪ್ರಕರಣಗಳಲ್ಲಿ ನಾಶಪಡಿಸಲಾಗಿದೆ. 2025ರಲ್ಲಿಯೂ 33 ಪ್ರಕರಣಗಳಲ್ಲಿ 133 ಕೆ.ಜಿ 759 ಗ್ರಾಂ ಮಾದಕವನ್ನು ಜಿಲ್ಲೆಯ ಪೊಲೀಸರು ನಾಶಗೊಳಿಸಿದ್ದಾರೆ. </p>.<p>ವಿಶೇಷವಾಗಿ ಜಿಲ್ಲೆಯು ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿರುವ ಕಾರಣ ಆ ರಾಜ್ಯದಿಂದ ಗಾಂಜಾ ಜಿಲ್ಲೆಗೆ ಪೂರೈಕೆ ಆಗುವ ಸಾಧ್ಯತೆ ಹೆಚ್ಚಿದೆ. ಗಾಂಜಾ ನಶೆಯಲ್ಲಿ ಚಿಕ್ಕಬಳ್ಳಾಪುರದ ತಾಲ್ಲೂಕಿನ ಕೆಲವು ಹಳ್ಳಿಗಳಲ್ಲಿ ಚಾಕು ಇರಿತದ ಪ್ರಕರಣಗಳು ಸಹ ಈ ಹಿಂದೆ ನಡೆದಿವೆ.</p>.<p>ಜಿಲ್ಲೆಯ ನಗರ, ಹಳ್ಳಿಗಳಲ್ಲಿಯೂ ಗಾಂಜಾ ಘಾಟು ಅಡರಿದೆ. ಒಂದೆಡೆ ಪೊಲೀಸರು ಆರೋಪಿಗಳನ್ನು ಹಿಡಿದು ಗಾಂಜಾ ವಶಕ್ಕೆ ಪಡೆಯುತ್ತಿದ್ದಾರೆ. ಹೀಗಿದ್ದರೂ ಪೂರ್ಣ ವಿರಾಮ ಹಾಕಲು ಸಾಧ್ಯವಾಗಿಲ್ಲ.</p>.<p>ಜಿಲ್ಲಾ ಪೊಲೀಸ್ ಇಲಾಖೆಯು ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ (ಎನ್ಡಿಪಿಎಸ್) ಕುರಿತು ಶಾಲಾ, ಕಾಲೇಜುಗಳಲ್ಲಿ ನಿರಂತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ.</p>.<p>ಪೆಡ್ಲರ್ಗಳು ಯುವ ಸಮುದಾಯವನ್ನೇ ಮುಖ್ಯವಾಗಿಟ್ಟುಕೊಂಡು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಎಲ್ಲ ಕಾರಣದಿಂದ ಮತ್ತು ಯುವ ಸಮುದಾಯವನ್ನು ದುಶ್ಚಟದಿಂದ ದೂರ ಮಾಡಲು ಪೊಲೀಸ್ ಇಲಾಖೆ ಎನ್ಡಿಪಿಎಸ್ ಜಾಗೃತಿ ಕಾರ್ಯಕ್ರಮಗಳನ್ನು ಆಂದೋಲನದ ರೂಪದಲ್ಲಿ ನಡೆಸುತ್ತಿದೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಹಿಡಿದು ಪಿಎಸ್ಐವರೆಗಿನ ಅಧಿಕಾರಿಗಳು ಈ ಜಾಗೃತಿ ಆಂದೋಲನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕಳೆದ ಒಂದೂಕಾಲು ವರ್ಷದಲ್ಲಿ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಗಳು ಶಾಲಾ, ಕಾಲೇಜುಗಳಿಗೆ ಭೇಟಿ ನೀಡಿ ಈ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಈ ಅವಧಿಯಲ್ಲಿ 7,552 ವಿದ್ಯಾರ್ಥಿಗಳನ್ನು ಜಾಗೃತಿ ಕಾರ್ಯಕ್ರಮಗಳು ಒಳಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ನೆರೆಯ ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಗಾಂಜಾ ಘಾಟು ಜೋರಾಗಿಯೇ ಇದೆ. ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಗಾಂಜಾಗೆ ಸಂಬಂಧಿಸಿದಂತೆ 192 ಪ್ರಕರಣಗಳು ದಾಖಲಾಗಿವೆ. ಈ ಅವಧಿಯಲ್ಲಿ ಪೊಲೀಸ್ ಇಲಾಖೆ ₹2.16 ಕೋಟಿ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದೆ.</p>.<p>ಇತ್ತೀಚೆಗಷ್ಟೇ ಗಾಂಜಾ ಸಾಗಾಣೆ ಮತ್ತು ಮಾರಾಟದ ಪ್ರಕರಣದ ಆರೋಪಿಯೊಬ್ಬನಿಗೆ ಜಿಲ್ಲಾ ನ್ಯಾಯಾಲಯ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹ 30 ಸಾವಿರ ದಂಡ ವಿಧಿಸಿದೆ. ಜಿಲ್ಲೆಯ ಬಾಗೇಪಲ್ಲಿ, ಚಿಂತಾಮಣಿ, ಗೌರಿಬಿದನೂರಿನಲ್ಲಿ ಆಗಾಗ್ಗೆ ಗಾಂಜಾ ಮಾರಾಟ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಪ್ರಕರಣಗಳೂ ದಾಖಲಾಗಿವೆ.</p>.<p>2023ರಲ್ಲಿ ₹ 37.60 ಲಕ್ಷ ಮೌಲ್ಯದ 119 ಕೆ.ಜಿ 409 ಗ್ರಾಂ ಮಾದಕ ವಸ್ತುಗಳನ್ನು 50 ಪ್ರಕರಣಗಳಲ್ಲಿ ನಾಶಪಡಿಸಲಾಗಿದೆ. 2024ರಲ್ಲಿ ₹56.78 ಲಕ್ಷ ಮೌಲ್ಯದ 176 ಕೆ.ಜಿ 757 ಗ್ರಾಂ ಮಾದಕ ವಸ್ತುಗಳನ್ನು 22 ಪ್ರಕರಣಗಳಲ್ಲಿ ನಾಶಪಡಿಸಲಾಗಿದೆ. 2025ರಲ್ಲಿಯೂ 33 ಪ್ರಕರಣಗಳಲ್ಲಿ 133 ಕೆ.ಜಿ 759 ಗ್ರಾಂ ಮಾದಕವನ್ನು ಜಿಲ್ಲೆಯ ಪೊಲೀಸರು ನಾಶಗೊಳಿಸಿದ್ದಾರೆ. </p>.<p>ವಿಶೇಷವಾಗಿ ಜಿಲ್ಲೆಯು ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿರುವ ಕಾರಣ ಆ ರಾಜ್ಯದಿಂದ ಗಾಂಜಾ ಜಿಲ್ಲೆಗೆ ಪೂರೈಕೆ ಆಗುವ ಸಾಧ್ಯತೆ ಹೆಚ್ಚಿದೆ. ಗಾಂಜಾ ನಶೆಯಲ್ಲಿ ಚಿಕ್ಕಬಳ್ಳಾಪುರದ ತಾಲ್ಲೂಕಿನ ಕೆಲವು ಹಳ್ಳಿಗಳಲ್ಲಿ ಚಾಕು ಇರಿತದ ಪ್ರಕರಣಗಳು ಸಹ ಈ ಹಿಂದೆ ನಡೆದಿವೆ.</p>.<p>ಜಿಲ್ಲೆಯ ನಗರ, ಹಳ್ಳಿಗಳಲ್ಲಿಯೂ ಗಾಂಜಾ ಘಾಟು ಅಡರಿದೆ. ಒಂದೆಡೆ ಪೊಲೀಸರು ಆರೋಪಿಗಳನ್ನು ಹಿಡಿದು ಗಾಂಜಾ ವಶಕ್ಕೆ ಪಡೆಯುತ್ತಿದ್ದಾರೆ. ಹೀಗಿದ್ದರೂ ಪೂರ್ಣ ವಿರಾಮ ಹಾಕಲು ಸಾಧ್ಯವಾಗಿಲ್ಲ.</p>.<p>ಜಿಲ್ಲಾ ಪೊಲೀಸ್ ಇಲಾಖೆಯು ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ (ಎನ್ಡಿಪಿಎಸ್) ಕುರಿತು ಶಾಲಾ, ಕಾಲೇಜುಗಳಲ್ಲಿ ನಿರಂತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ.</p>.<p>ಪೆಡ್ಲರ್ಗಳು ಯುವ ಸಮುದಾಯವನ್ನೇ ಮುಖ್ಯವಾಗಿಟ್ಟುಕೊಂಡು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಎಲ್ಲ ಕಾರಣದಿಂದ ಮತ್ತು ಯುವ ಸಮುದಾಯವನ್ನು ದುಶ್ಚಟದಿಂದ ದೂರ ಮಾಡಲು ಪೊಲೀಸ್ ಇಲಾಖೆ ಎನ್ಡಿಪಿಎಸ್ ಜಾಗೃತಿ ಕಾರ್ಯಕ್ರಮಗಳನ್ನು ಆಂದೋಲನದ ರೂಪದಲ್ಲಿ ನಡೆಸುತ್ತಿದೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಹಿಡಿದು ಪಿಎಸ್ಐವರೆಗಿನ ಅಧಿಕಾರಿಗಳು ಈ ಜಾಗೃತಿ ಆಂದೋಲನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕಳೆದ ಒಂದೂಕಾಲು ವರ್ಷದಲ್ಲಿ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಗಳು ಶಾಲಾ, ಕಾಲೇಜುಗಳಿಗೆ ಭೇಟಿ ನೀಡಿ ಈ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಈ ಅವಧಿಯಲ್ಲಿ 7,552 ವಿದ್ಯಾರ್ಥಿಗಳನ್ನು ಜಾಗೃತಿ ಕಾರ್ಯಕ್ರಮಗಳು ಒಳಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>