ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಚಿಂತಾಮಣಿಯಲ್ಲಿ 32 ಕೆ.ಜಿ ಗಾಂಜಾ ವಶ

Last Updated 8 ಸೆಪ್ಟೆಂಬರ್ 2020, 6:59 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದ ರಾಮಕುಂಟೆ ರಸ್ತೆ ಪಕ್ಕ ಸೋಮವಾರ ಸಂಜೆ ನಿಂತಿದ್ದ ಆಂಧ್ರಪ್ರದೇಶ ಮೂಲದ ಕಾರೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಸುಮಾರು ₹10 ಲಕ್ಷ ಮೌಲ್ಯದ 32 ಕೆ.ಜಿ ಗಾಂಜಾ ವಶಪಡಿಸಿಕೊಂಡು, ಇಬ್ಬರನ್ನು ಬಂಧಿಸಿದ್ದಾರೆ.

ಈ ಕುರಿತು ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ‘ಆಂಧ್ರಪ್ರದೇಶದ ನೋಂದಣಿ ಸಂಖ್ಯೆ ಉಳ್ಳ ಇಂಡಿಗೊ ಕಾರಿನ ಹಿಂಬದಿ ಸೀಟಿನಲ್ಲಿ ಮೂರು ಬ್ಯಾಗ್ ಗಳಲ್ಲಿ 32 ಕೆ.ಜಿ ಗಾಂಜಾ ಪತ್ತೆಯಾಗಿದೆ. ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ’ಎಂದು ಮಾಹಿತಿ ನೀಡಿದರು.

‘ಆಂಧ್ರದ ಚಿತ್ತೂರು ಜಿಲ್ಲೆಯ ಗುಂಟಪಲ್ಲಿ ಗ್ರಾಮದ ನಿವಾಸಿ ಶಂಕರ್ (33) ಮತ್ತು ಶಿಡ್ಲಘಟ್ಟದ ಶಬಾಜ್ (26) ಬಂಧಿತ ಆರೋಪಿಗಳು. ಈ ಪೈಕಿ ಶಂಕರ್ ಗಾಂಜಾ ಸಾಗಣೆಯನ್ನೇ ವೃತ್ತಿಯನ್ನಾಗಿಸಿಕೊಂಡಿದ್ದು, ಆತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ’ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT