<p><strong>ಚಿಕ್ಕಬಳ್ಳಾಪುರ</strong>: ‘ಪ್ರತಿಯೊಬ್ಬ ರೈತರು ತಮ್ಮ ರಾಸುಗಳಿಗೆ ಜೀವ ವಿಮೆ ಮಾಡಿಸುವ ಮೂಲಕ ಆಕಸ್ಮಿಕವಾಗಿ ಜರುಗುವ ರಾಸುಗಳ ಜೀವ ಹಾನಿಯಿಂದ ಉಂಟಾಗುವ ಆರ್ಥಿಕ ನಷ್ಟದ ಹೊರೆಯನ್ನು ಕಡಿಮೆ ಮಾಡಿಕೊಳ್ಳಬೇಕು’ ಎಂದು ಕೋಲಾರ–ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಕೋಚಿಮುಲ್) ನಿರ್ದೇಶಕ ಎನ್.ಸಿ.ವೆಂಕಟೇಶ್ ತಿಳಿಸಿದರು.</p>.<p>ನಗರದ ಎಪಿಎಂಸಿ ಆವರಣದಲ್ಲಿರುವ ಕೋಚಿಮುಲ್ ಚಿಕ್ಕಬಳ್ಳಾಪುರ ಶಿಬಿರ ಕಚೇರಿ ಕಟ್ಟಡವನ್ನು ₹59 ಲಕ್ಷ ವೆಚ್ಚದಲ್ಲಿ ನವೀಕರಿಸುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಗುಣಮಟ್ಟದ ಹಾಲು ಉತ್ಪಾದನೆ ಹಾಗೂ ರಾಸು ವಿಮೆಯಲ್ಲಿ ಜಿಲ್ಲೆಯು ಮೊದಲ ಸ್ಥಾನದಲ್ಲಿದೆ. ಈ ಸ್ಥಾನವನ್ನು ಕಾಯ್ದುಕೊಂಡು ಹೋಗುವ ನಿಟ್ಟಿನಲ್ಲಿ ರೈತರು, ಹಾಲು ಉತ್ಪಾದಕರ ಸಹಕಾರ ಸಂಘಗಳು ಒಕ್ಕೂಟಕ್ಕೆ ಸಹಕಾರ ನೀಡಬೇಕು. ವಿಮೆಯ ಪ್ರಿಮಿಯಂ ಹಣದಲ್ಲಿ ರೈತರು ಶೇ 50ರಷ್ಟು ನೀಡಿದರೆ ಸಾಕು, ಉಳಿದದ್ದು ಒಕ್ಕೂಟ ಭರಿಸುತ್ತದೆ’ ಎಂದು ಹೇಳಿದರು.</p>.<p>‘ಈಗಾಗಲೇ ರಾಸು ವಿಮೆ ಅಭಿಯಾನ ಶುರುವಾಗಿದೆ. ವಿಮೆ ಮಾಡಿಸಲು ಓರಿಯೆಂಟಲ್ ವಿಮಾ ಕಂಪನಿ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಒಂದು ಹಸು ಮೃತಪಟ್ಟರೆ ಗರಿಷ್ಠ ₹70 ಸಾವಿರ ವರೆಗೆ ವಿಮೆ ಪರಿಹಾರ ಸಿಗುತ್ತದೆ. ವಿಮೆ ಮಾಡಿಸಲು ಜುಲೈ 30 ಕೊನೆಯ ದಿನವಾಗಿದೆ’ ಎಂದರು.</p>.<p>‘ಜಿಲ್ಲೆಯಲ್ಲಿ ಇವತ್ತು ಹೈನುಗಾರರು ಸಾಕಷ್ಟು ಸಮಸ್ಯೆಗಳಿಂದಾಗಿ ಜಾನುವಾರ ನಿರ್ವಹಣೆಗೆ ಕಷ್ಟಪಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಯೋಜನೆ ಜಾರಿಯಾಗಿರುವುದು ಹೈನುಗಾರರಿಗೆ ವರದಾನವಾಗಿದ್ದು, ಪ್ರತಿಯೊಬ್ಬ ಹೈನುಗಾರರು ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಯೋಜನೆ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಶಿಬಿರ ಕಚೇರಿ ನವೀಕರಣ ಕಾರ್ಯವನ್ನು ಗುತ್ತಿಗೆದಾರರು ಆರು ತಿಂಗಳಲ್ಲಿ ಪೂರ್ಣಗೊಳಿಸಿ ಹಸ್ತಾಂತರಿಸಬೇಕು. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಸಕಾಲಕ್ಕೆ ಕೆಲಸ ಮುಗಿಸಲು ಆದ್ಯತೆ ನೀಡಬೇಕು’ ಎಂದು ಹೇಳಿದರು.</p>.<p>ಕೋಚಿಮುಲ್ ಚಿಕ್ಕಬಳ್ಳಾಪುರ ಶಿಬಿರ ಕಚೇರಿಯ ಉಪ ವ್ಯವಸ್ಥಾಪಕ ಪಾಪೇಗೌಡ ಮಾತನಾಡಿ, ‘ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಯೋಜನೆ ಅಡಿ ಈಗಾಗಲೇ ರೈತರಿಗೆ ಸಾಲ ಮಂಜೂರಾಗಿದೆ. ಹಸು ಇಲ್ಲದವರೂ ಈ ಯೋಜನೆಗೆ ಹೆಸರು ನೋಂದಾಯಿಸಿಕೊಳ್ಳಲು ಜುಲೈ 30 ರ ವರೆಗೆ ಅವಕಾಶವಿದೆ. ಬಳಿಕ ಹಸು ಖರೀದಿಸಿ, ಪೂರಕ ದಾಖಲೆಗಳನ್ನು ಒದಗಿಸಿದರೆ ಸಾಲ ಮಂಜೂರಾಗುತ್ತದೆ ಎಂದು ಹೇಳಿದರು.</p>.<p>‘ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳು ರೈತರಿಗೆ ಈ ಅರಿವು ಮೂಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾಲದ ಪ್ರಯೋಜನ ತಲುಪುವಂತೆ ನೋಡಿಕೊಳ್ಳಬೇಕು. ಅರ್ಜಿಯನ್ನು ಇಂಗ್ಲಿಷ್ನಲ್ಲಿ ಭರ್ತಿ ಮಾಡಬೇಕಾಗಿರುವುದರಿಂದ ರೈತರಿಗೆ ಅರ್ಜಿ ಸಲ್ಲಿಸಲು ಸಹಾಯ ಮಾಡಬೇಕು. ನೀವೇ ಅರ್ಜಿ ಭರ್ತಿ ಮಾಡಿ ಬ್ಯಾಂಕಿಗೆ ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರ ಪಡೆಯಬೇಕು’ ಎಂದರು.</p>.<p>ಕರ್ನಾಟಕ ಪ್ರಾಂತ ರೈತಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ, ಗುತ್ತಿಗೆದಾರ ನರಸಿಂಹಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ‘ಪ್ರತಿಯೊಬ್ಬ ರೈತರು ತಮ್ಮ ರಾಸುಗಳಿಗೆ ಜೀವ ವಿಮೆ ಮಾಡಿಸುವ ಮೂಲಕ ಆಕಸ್ಮಿಕವಾಗಿ ಜರುಗುವ ರಾಸುಗಳ ಜೀವ ಹಾನಿಯಿಂದ ಉಂಟಾಗುವ ಆರ್ಥಿಕ ನಷ್ಟದ ಹೊರೆಯನ್ನು ಕಡಿಮೆ ಮಾಡಿಕೊಳ್ಳಬೇಕು’ ಎಂದು ಕೋಲಾರ–ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಕೋಚಿಮುಲ್) ನಿರ್ದೇಶಕ ಎನ್.ಸಿ.ವೆಂಕಟೇಶ್ ತಿಳಿಸಿದರು.</p>.<p>ನಗರದ ಎಪಿಎಂಸಿ ಆವರಣದಲ್ಲಿರುವ ಕೋಚಿಮುಲ್ ಚಿಕ್ಕಬಳ್ಳಾಪುರ ಶಿಬಿರ ಕಚೇರಿ ಕಟ್ಟಡವನ್ನು ₹59 ಲಕ್ಷ ವೆಚ್ಚದಲ್ಲಿ ನವೀಕರಿಸುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಗುಣಮಟ್ಟದ ಹಾಲು ಉತ್ಪಾದನೆ ಹಾಗೂ ರಾಸು ವಿಮೆಯಲ್ಲಿ ಜಿಲ್ಲೆಯು ಮೊದಲ ಸ್ಥಾನದಲ್ಲಿದೆ. ಈ ಸ್ಥಾನವನ್ನು ಕಾಯ್ದುಕೊಂಡು ಹೋಗುವ ನಿಟ್ಟಿನಲ್ಲಿ ರೈತರು, ಹಾಲು ಉತ್ಪಾದಕರ ಸಹಕಾರ ಸಂಘಗಳು ಒಕ್ಕೂಟಕ್ಕೆ ಸಹಕಾರ ನೀಡಬೇಕು. ವಿಮೆಯ ಪ್ರಿಮಿಯಂ ಹಣದಲ್ಲಿ ರೈತರು ಶೇ 50ರಷ್ಟು ನೀಡಿದರೆ ಸಾಕು, ಉಳಿದದ್ದು ಒಕ್ಕೂಟ ಭರಿಸುತ್ತದೆ’ ಎಂದು ಹೇಳಿದರು.</p>.<p>‘ಈಗಾಗಲೇ ರಾಸು ವಿಮೆ ಅಭಿಯಾನ ಶುರುವಾಗಿದೆ. ವಿಮೆ ಮಾಡಿಸಲು ಓರಿಯೆಂಟಲ್ ವಿಮಾ ಕಂಪನಿ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಒಂದು ಹಸು ಮೃತಪಟ್ಟರೆ ಗರಿಷ್ಠ ₹70 ಸಾವಿರ ವರೆಗೆ ವಿಮೆ ಪರಿಹಾರ ಸಿಗುತ್ತದೆ. ವಿಮೆ ಮಾಡಿಸಲು ಜುಲೈ 30 ಕೊನೆಯ ದಿನವಾಗಿದೆ’ ಎಂದರು.</p>.<p>‘ಜಿಲ್ಲೆಯಲ್ಲಿ ಇವತ್ತು ಹೈನುಗಾರರು ಸಾಕಷ್ಟು ಸಮಸ್ಯೆಗಳಿಂದಾಗಿ ಜಾನುವಾರ ನಿರ್ವಹಣೆಗೆ ಕಷ್ಟಪಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಯೋಜನೆ ಜಾರಿಯಾಗಿರುವುದು ಹೈನುಗಾರರಿಗೆ ವರದಾನವಾಗಿದ್ದು, ಪ್ರತಿಯೊಬ್ಬ ಹೈನುಗಾರರು ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಯೋಜನೆ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಶಿಬಿರ ಕಚೇರಿ ನವೀಕರಣ ಕಾರ್ಯವನ್ನು ಗುತ್ತಿಗೆದಾರರು ಆರು ತಿಂಗಳಲ್ಲಿ ಪೂರ್ಣಗೊಳಿಸಿ ಹಸ್ತಾಂತರಿಸಬೇಕು. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಸಕಾಲಕ್ಕೆ ಕೆಲಸ ಮುಗಿಸಲು ಆದ್ಯತೆ ನೀಡಬೇಕು’ ಎಂದು ಹೇಳಿದರು.</p>.<p>ಕೋಚಿಮುಲ್ ಚಿಕ್ಕಬಳ್ಳಾಪುರ ಶಿಬಿರ ಕಚೇರಿಯ ಉಪ ವ್ಯವಸ್ಥಾಪಕ ಪಾಪೇಗೌಡ ಮಾತನಾಡಿ, ‘ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಯೋಜನೆ ಅಡಿ ಈಗಾಗಲೇ ರೈತರಿಗೆ ಸಾಲ ಮಂಜೂರಾಗಿದೆ. ಹಸು ಇಲ್ಲದವರೂ ಈ ಯೋಜನೆಗೆ ಹೆಸರು ನೋಂದಾಯಿಸಿಕೊಳ್ಳಲು ಜುಲೈ 30 ರ ವರೆಗೆ ಅವಕಾಶವಿದೆ. ಬಳಿಕ ಹಸು ಖರೀದಿಸಿ, ಪೂರಕ ದಾಖಲೆಗಳನ್ನು ಒದಗಿಸಿದರೆ ಸಾಲ ಮಂಜೂರಾಗುತ್ತದೆ ಎಂದು ಹೇಳಿದರು.</p>.<p>‘ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳು ರೈತರಿಗೆ ಈ ಅರಿವು ಮೂಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾಲದ ಪ್ರಯೋಜನ ತಲುಪುವಂತೆ ನೋಡಿಕೊಳ್ಳಬೇಕು. ಅರ್ಜಿಯನ್ನು ಇಂಗ್ಲಿಷ್ನಲ್ಲಿ ಭರ್ತಿ ಮಾಡಬೇಕಾಗಿರುವುದರಿಂದ ರೈತರಿಗೆ ಅರ್ಜಿ ಸಲ್ಲಿಸಲು ಸಹಾಯ ಮಾಡಬೇಕು. ನೀವೇ ಅರ್ಜಿ ಭರ್ತಿ ಮಾಡಿ ಬ್ಯಾಂಕಿಗೆ ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರ ಪಡೆಯಬೇಕು’ ಎಂದರು.</p>.<p>ಕರ್ನಾಟಕ ಪ್ರಾಂತ ರೈತಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ, ಗುತ್ತಿಗೆದಾರ ನರಸಿಂಹಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>