<p><strong>ಚಿಂತಾಮಣಿ</strong>: ತಾಲ್ಲೂಕಿನ ದೊಡ್ಡಗಂಜೂರು–ಆನೂರು ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಶಿಕ್ಷಕಿಯನ್ನು ಅಡ್ಡಗಟ್ಟಿದ ಆರೋಪಿಗಳು, ಮಾಂಗಲ್ಯ ಸರ ಕಿತ್ತು ಪರಾರಿಯಾದ ಘಟನೆ ಗುರುವಾರ ನಡೆದಿದೆ.</p>.<p>ಶಿಕ್ಷಕಿ ಮೇಘನಾ ಹೆಗಡೆ ಮಾಂಗಲ್ಯ ಸರ ಕಳೆದುಕೊಂಡ ಶಿಕ್ಷಕಿ. ಅವರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಮತ್ತೊಂದು ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದ ಆರೋಪಿಗಳು, ಕೋಡಿಹಳ್ಳಿ ತಿರುವಿನಲ್ಲಿ ಶಿಕ್ಷಕಿಯ ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿದ್ದಾರೆ. ಜೊತೆಗೆ ಶಿಕ್ಷಕಿಯ ಕುತ್ತಿಗೆಗೆ ಕೈಹಾಕಿ ಬಂಗಾರದ ಸರ ಎಳೆದಿದ್ದಾರೆ. ಈ ವೇಳೆ ಶಿಕ್ಷಕಿಯು ಪ್ರತಿರೋಧ ಒಡ್ಡಿ, ಜೋರಾಗಿ ಕೂಗಿಕೊಂಡಿದ್ದಾರೆ. ಇದರಿಂದ ಆತಂಕಗೊಂಡ ಆರೋಪಿಗಳು, ತಮ್ಮ ಕೈಗೆ ಬಂದ ಅರ್ಧ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. </p>.<p>ಆರೋಪಿಗಳು ಬಂದಿದ್ದ ಬೈಕ್ಗೆ ನೋಂದಣಿ ಸಂಖ್ಯೆ ಇರಲಿಲ್ಲ. ಜೊತೆಗೆ ಇಬ್ಬರೂ ಮುಖ ಕಾಣದಂತೆ ಹೆಲ್ಮೆಟ್ ಧರಿಸಿದ್ದರು. ಇದರಿಂದಾಗಿ ಅವರನ್ನು ಗುರುತಿಸಲು ಸಾಧ್ಯವಾಗಿಲ್ಲ ಎನ್ನಲಾಗಿದೆ. </p>.<p>ಈ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಬಂದ ಗ್ರಾಮಾಂತರ ಠಾಣೆ ಪೊಲೀಸರು, ಸ್ಥಳ ಪರಿಶೀಲನೆ ಮಾಡಿದರು. ಸುತ್ತಮುತ್ತಲಿರುವ ಸಿ.ಸಿ. ಕ್ಯಾಮೆರಾ ಫುಟೆಜ್ಗಳನ್ನು ಸಂಗ್ರಹಿಸಿ, ಕಳ್ಳರ ಪತ್ತೆಗೆ ಕಾರ್ಯಾಚರಣೆ ಕೈಗೊಂಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ತಾಲ್ಲೂಕಿನ ದೊಡ್ಡಗಂಜೂರು–ಆನೂರು ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಶಿಕ್ಷಕಿಯನ್ನು ಅಡ್ಡಗಟ್ಟಿದ ಆರೋಪಿಗಳು, ಮಾಂಗಲ್ಯ ಸರ ಕಿತ್ತು ಪರಾರಿಯಾದ ಘಟನೆ ಗುರುವಾರ ನಡೆದಿದೆ.</p>.<p>ಶಿಕ್ಷಕಿ ಮೇಘನಾ ಹೆಗಡೆ ಮಾಂಗಲ್ಯ ಸರ ಕಳೆದುಕೊಂಡ ಶಿಕ್ಷಕಿ. ಅವರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಮತ್ತೊಂದು ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದ ಆರೋಪಿಗಳು, ಕೋಡಿಹಳ್ಳಿ ತಿರುವಿನಲ್ಲಿ ಶಿಕ್ಷಕಿಯ ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿದ್ದಾರೆ. ಜೊತೆಗೆ ಶಿಕ್ಷಕಿಯ ಕುತ್ತಿಗೆಗೆ ಕೈಹಾಕಿ ಬಂಗಾರದ ಸರ ಎಳೆದಿದ್ದಾರೆ. ಈ ವೇಳೆ ಶಿಕ್ಷಕಿಯು ಪ್ರತಿರೋಧ ಒಡ್ಡಿ, ಜೋರಾಗಿ ಕೂಗಿಕೊಂಡಿದ್ದಾರೆ. ಇದರಿಂದ ಆತಂಕಗೊಂಡ ಆರೋಪಿಗಳು, ತಮ್ಮ ಕೈಗೆ ಬಂದ ಅರ್ಧ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. </p>.<p>ಆರೋಪಿಗಳು ಬಂದಿದ್ದ ಬೈಕ್ಗೆ ನೋಂದಣಿ ಸಂಖ್ಯೆ ಇರಲಿಲ್ಲ. ಜೊತೆಗೆ ಇಬ್ಬರೂ ಮುಖ ಕಾಣದಂತೆ ಹೆಲ್ಮೆಟ್ ಧರಿಸಿದ್ದರು. ಇದರಿಂದಾಗಿ ಅವರನ್ನು ಗುರುತಿಸಲು ಸಾಧ್ಯವಾಗಿಲ್ಲ ಎನ್ನಲಾಗಿದೆ. </p>.<p>ಈ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಬಂದ ಗ್ರಾಮಾಂತರ ಠಾಣೆ ಪೊಲೀಸರು, ಸ್ಥಳ ಪರಿಶೀಲನೆ ಮಾಡಿದರು. ಸುತ್ತಮುತ್ತಲಿರುವ ಸಿ.ಸಿ. ಕ್ಯಾಮೆರಾ ಫುಟೆಜ್ಗಳನ್ನು ಸಂಗ್ರಹಿಸಿ, ಕಳ್ಳರ ಪತ್ತೆಗೆ ಕಾರ್ಯಾಚರಣೆ ಕೈಗೊಂಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>