ಶ್ರೀಸಾಯಿ ಶಿರಡಿ ಕ್ವಾರಿ ಮಾಲೀಕರು ಮತ್ತು ವ್ಯವಸ್ಥಾಪಕರು ಹಾಗೂ ಆರು ಮಂದಿ ಮೃತರು ಸೇರಿ 13 ಮಂದಿ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಆಗಿದೆ. ಬಂಧಿತ ಆರೋಪಿಗಳಾದ ಕ್ವಾರಿ ಮಾಲೀಕ ಜಿ.ಎಸ್.ನಾಗರಾಜ್ ಮತ್ತು ಪಾಲುದಾರರಾದ ರಾಘವೇಂದ್ರ ರೆಡ್ಡಿ, ವೆಂಕಟಶಿವ ರೆಡ್ಡಿ, ಮಧುಸೂದನ್ ರೆಡ್ಡಿ ಮತ್ತು ವ್ಯವಸ್ಥಾಪಕ ಪ್ರವೀಣ್ ಕುಮಾರ್, ದೇವನಹಳ್ಳಿಯ ಇಮ್ತಿಯಾಜ್ ವಿರುದ್ಧ ನಿರ್ಲಕ್ಷ್ಯ ಮತ್ತು ಸ್ಫೋಟಕ ಕಾಯ್ದೆಯಡಿ ಆರೋಪಪಟ್ಟಿ ಸಲ್ಲಿಕೆಯಾಗಿದೆ.