<p><strong>ಚೇಳೂರು</strong>: ಪಟ್ಟಣದ ಸಮೀಪದ ಹೊಲವೊಂದರಲ್ಲಿ ನಾಯಿಗಳ ಹಿಂಡಿನಿಂದ ದಾಳಿಗೊಳಗಾಗುತ್ತಿದ್ದ ಜಿಂಕೆ ಮರಿಯೊಂದನ್ನು ರೈತರು ಸಮಯ ಪ್ರಜ್ಞೆಯಿಂದ ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.</p>.<p>ರೈತ ವೆಂಕಟರವಣಪ್ಪ (ಯರ್ರಪ್ಪ) ಅವರು ಎಂದಿನಂತೆ ಹೊಲದಲ್ಲಿದ್ದಾಗ ನಾಯಿಗಳು ಜಿಂಕೆ ಮರಿಯನ್ನು ಅಟ್ಟಾಡಿಸಿಕೊಂಡು ಬರುತ್ತಿರುವುದನ್ನು ಗಮನಿಸಿದರು. ತಕ್ಷಣ ಕಾರ್ಯಪ್ರವೃತ್ತರಾಗಿ ನಾಯಿಗಳನ್ನು ಓಡಿಸಿ ಜಿಂಕೆ ಮರಿಯನ್ನು ಪ್ರಾಣಾಪಾಯದಿಂದ ಪಾರು ಮಾಡಿದರು. ನಂತರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.</p>.<p>ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ರೈತರು ಸೇರಿ ಜಿಂಕೆ ಮರಿಯನ್ನು ಪಟ್ಟಣದ ಪಶು ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿಸಿದರು. ಸದ್ಯ ಜಿಂಕೆ ಮರಿ ಆರೋಗ್ಯವಾಗಿದೆ. ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.</p>.<p>ಚೇಳೂರು ಅರಣ್ಯ ಇಲಾಖೆ ಸಿಬ್ಬಂದಿ ವೆಂಕಟರವಣಪ್ಪ, ಗಸ್ತು ಅರಣ್ಯ ಪಾಲಕ ಪಿ.ನರಸಿಂಹಪ್ಪ, ರವಣಪ್ಪ, ವೆಂಕಟಸ್ವಾಮಿ, ನಾಗೇಶ್ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-16-2055063783</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೇಳೂರು</strong>: ಪಟ್ಟಣದ ಸಮೀಪದ ಹೊಲವೊಂದರಲ್ಲಿ ನಾಯಿಗಳ ಹಿಂಡಿನಿಂದ ದಾಳಿಗೊಳಗಾಗುತ್ತಿದ್ದ ಜಿಂಕೆ ಮರಿಯೊಂದನ್ನು ರೈತರು ಸಮಯ ಪ್ರಜ್ಞೆಯಿಂದ ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.</p>.<p>ರೈತ ವೆಂಕಟರವಣಪ್ಪ (ಯರ್ರಪ್ಪ) ಅವರು ಎಂದಿನಂತೆ ಹೊಲದಲ್ಲಿದ್ದಾಗ ನಾಯಿಗಳು ಜಿಂಕೆ ಮರಿಯನ್ನು ಅಟ್ಟಾಡಿಸಿಕೊಂಡು ಬರುತ್ತಿರುವುದನ್ನು ಗಮನಿಸಿದರು. ತಕ್ಷಣ ಕಾರ್ಯಪ್ರವೃತ್ತರಾಗಿ ನಾಯಿಗಳನ್ನು ಓಡಿಸಿ ಜಿಂಕೆ ಮರಿಯನ್ನು ಪ್ರಾಣಾಪಾಯದಿಂದ ಪಾರು ಮಾಡಿದರು. ನಂತರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.</p>.<p>ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ರೈತರು ಸೇರಿ ಜಿಂಕೆ ಮರಿಯನ್ನು ಪಟ್ಟಣದ ಪಶು ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿಸಿದರು. ಸದ್ಯ ಜಿಂಕೆ ಮರಿ ಆರೋಗ್ಯವಾಗಿದೆ. ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.</p>.<p>ಚೇಳೂರು ಅರಣ್ಯ ಇಲಾಖೆ ಸಿಬ್ಬಂದಿ ವೆಂಕಟರವಣಪ್ಪ, ಗಸ್ತು ಅರಣ್ಯ ಪಾಲಕ ಪಿ.ನರಸಿಂಹಪ್ಪ, ರವಣಪ್ಪ, ವೆಂಕಟಸ್ವಾಮಿ, ನಾಗೇಶ್ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-16-2055063783</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>