ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೇಳೂರು: ಕೃಷಿ ಕಾನೂನು ರದ್ಧು ಘೋಷಣೆ, ಸಿಪಿಎಂ ಸಂಭ್ರಮಾಚರಣೆ

Last Updated 20 ನವೆಂಬರ್ 2021, 6:38 IST
ಅಕ್ಷರ ಗಾತ್ರ

ಚೇಳೂರು: ಸುದೀರ್ಘ ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನನ್ನು ಸರ್ಕಾರ ವಾಪಸ್ ಪಡೆದುಕೊಂಡಿದ್ದು, ರೈತರ ಹೋರಾಟಕ್ಕೆ ಫಲ ಸಿಕ್ಕಿದೆ ಎಂದು ಸಿಪಿಎಂ ಮುಖಂಡ ಮಾಸನಪಲ್ಲಿ ಬೈರಾರೆಡ್ಡಿ ಹೇಳಿದರು.

ಚೇಳೂರಿನ ಮಹಾತ್ಮಗಾಂಧಿ ವೃತ್ತದ ಬಳಿ ಸಂಭ್ರಮಾಚರಣೆ ನಡೆಸಿ ಮಾತನಾಡಿದರು.

ದೇಶದಾದ್ಯಂತ ರೈತರು ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು ಎಂದು ಪ್ರತಿಭಟನೆ ಮಾಡುತ್ತಿದ್ದರೂ ಕೂಡ ನರೇಂದ್ರ ಮೋದಿ ಕನಿಷ್ಠ ಸೌಜನ್ಯಕ್ಕಾದರೂ ರೈತರ ಬಳಿ ಬರಲಿಲ್ಲ. ಆದರೆ ಏಕಾಏಕಿ ಕಾಯ್ದೆಗಳನ್ನು ವಾಪಸ್‌ ಪಡೆದುಕೊಂಡಿದ್ದಾರೆ. ಇದರ ಉದ್ದೇಶ ರೈತರ ಹೋರಾಟ ಗೆದ್ದಿದೆ ಎಂಬುದು ಸಾಬೀತಾಗಿದೆ. ಸರ್ಕಾರ ಜನ ವಿರೋಧಿ ಕಾನೂನುಗಳನ್ನ ಜಾರಿ ಮಾಡಿದರೆ ನಾವು ಕೈಕಟ್ಟಿ ಕೂರುವುದಿಲ್ಲ ಎಂದರು.

ಕೃಷಿ ಮಸೂದೆಯನ್ನು ಹಿಂಪಡೆಯುವಂತೆ ನಡೆಸಿದ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರಿಗೆ ಕೇಂದ್ರ ಸರ್ಕಾರ‌ ಪರಿಹಾರ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ಜಾಹೀರ್ ಬೇಗ್, ಮಂಜುನಾಥ, ನಲ್ಲಪರೆಡ್ಡಿ, ಬೈರಾರೆಡ್ಡಿ, ಫಾತಿಮಾ ಬಿ, ಅಂಗಡಿ ಭೈರಾರೆಡ್ಡಿ, ಸುನಿಲ್, ಸಂಜೀವರೆಡ್ಡಿ, ಭಾರತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT