<p><strong>ಚೇಳೂರು:</strong> ಹಳೇ ದ್ವೇಷದಿಂದ ಜೋಳದ ಬೆಳೆಗೆ ಬೆಂಕಿ ಹಾಕಿ ಮಾಲೀಕರ ಮೇಲೆ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿರುವ ಘಟನೆ ಚೇಳೂರು ಸಮೀಪದ ಗೆರಿಗಿರೆಡ್ಡಿಪಾಳ್ಯ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದೆ.</p>.<p>ಗ್ರಾಮದ ಪರಿಶಿಷ್ಟ ಜಾತಿಯ ವೆಂಕಟರವಣಮ್ಮ ಅವರಿಗೆ ಷೇರ್ಖಾನ್ ಕೋಟೆ ಗ್ರಾಮದಲ್ಲಿ ಸರ್ಕಾರಿ ಜಮೀನು ಮಂಜೂರಾಗಿದೆ. ಇದೇ ಜಮೀನಿನಲ್ಲಿ ಬೆಳೆ ಬೆಳೆದು ಜೀವನ ಸಾಗಿಸುತ್ತಿದ್ದು, ಹಳೆ ದ್ವೇಷದ ಹಿನ್ನೆಲೆಯಲ್ಲಿ ಗ್ರಾಮದ ಪಿ.ಎ.ಮುರಳಿಕೃಷ್ಣ, ಜಿ.ಲೋಕೇಶ, ಆಂಜನೇಯಪ್ಪ, ನಾರಾಯಣಮ್ಮ ಸೇರಿದಂತೆ ಇತರರು ದೌರ್ಜನ್ಯ ನಡಸಿದ್ದಾರೆ. ₹60 ಸಾವಿರ ಬೆಲೆ ಬಾಳುವ ಮುಸುಕಿನ ಜೋಳ, ತೆಂಗಿನ ಮರಕ್ಕೆ ಬೆಂಕಿ ಹಾಕಿ ನಾಶ ಮಾಡಿದ್ದಾರೆ ಎಂದು ವೆಂಕಟರವಣಮ್ಮ ದೂರಿನಲ್ಲಿ ತಿಳಿಸಿದ್ದಾರೆ.</p>.<p>ವಿಷಯ ತಿಳಿದ ಗಂಡ ಕೆ.ವಿ.ವೆಂಕಟರವಣಪ್ಪ ಅಡ್ಡ ಹೋದಾಗ ಆತನ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ವೆಂಕಟರವಣಮ್ಮ ಚೇಳೂರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೇಳೂರು:</strong> ಹಳೇ ದ್ವೇಷದಿಂದ ಜೋಳದ ಬೆಳೆಗೆ ಬೆಂಕಿ ಹಾಕಿ ಮಾಲೀಕರ ಮೇಲೆ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿರುವ ಘಟನೆ ಚೇಳೂರು ಸಮೀಪದ ಗೆರಿಗಿರೆಡ್ಡಿಪಾಳ್ಯ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದೆ.</p>.<p>ಗ್ರಾಮದ ಪರಿಶಿಷ್ಟ ಜಾತಿಯ ವೆಂಕಟರವಣಮ್ಮ ಅವರಿಗೆ ಷೇರ್ಖಾನ್ ಕೋಟೆ ಗ್ರಾಮದಲ್ಲಿ ಸರ್ಕಾರಿ ಜಮೀನು ಮಂಜೂರಾಗಿದೆ. ಇದೇ ಜಮೀನಿನಲ್ಲಿ ಬೆಳೆ ಬೆಳೆದು ಜೀವನ ಸಾಗಿಸುತ್ತಿದ್ದು, ಹಳೆ ದ್ವೇಷದ ಹಿನ್ನೆಲೆಯಲ್ಲಿ ಗ್ರಾಮದ ಪಿ.ಎ.ಮುರಳಿಕೃಷ್ಣ, ಜಿ.ಲೋಕೇಶ, ಆಂಜನೇಯಪ್ಪ, ನಾರಾಯಣಮ್ಮ ಸೇರಿದಂತೆ ಇತರರು ದೌರ್ಜನ್ಯ ನಡಸಿದ್ದಾರೆ. ₹60 ಸಾವಿರ ಬೆಲೆ ಬಾಳುವ ಮುಸುಕಿನ ಜೋಳ, ತೆಂಗಿನ ಮರಕ್ಕೆ ಬೆಂಕಿ ಹಾಕಿ ನಾಶ ಮಾಡಿದ್ದಾರೆ ಎಂದು ವೆಂಕಟರವಣಮ್ಮ ದೂರಿನಲ್ಲಿ ತಿಳಿಸಿದ್ದಾರೆ.</p>.<p>ವಿಷಯ ತಿಳಿದ ಗಂಡ ಕೆ.ವಿ.ವೆಂಕಟರವಣಪ್ಪ ಅಡ್ಡ ಹೋದಾಗ ಆತನ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ವೆಂಕಟರವಣಮ್ಮ ಚೇಳೂರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>