ಜಿಲ್ಲಾಧಿಕಾರಿ ಮಾರ್ಗದರ್ಶನದಲ್ಲಿ ಬಾಗೇಪಲ್ಲಿ ತಾಲ್ಲೂಕಿನ ಪಾಳ್ಯಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಲ್ಲಪಲ್ಲಿ ಗ್ರಾಮದ ಲಕ್ಷ್ಮೀಪತಿನಾಯ್ಕರ್ ನ್ಯಾಯಬೆಲೆ ಅಂಗಡಿ (ಸಂ.77) ಮತ್ತು ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದ ಎಂ.ಎನ್.ಲಕ್ಷ್ಮೀನರಸಮ್ಮ ನ್ಯಾಯಬೆಲೆ ಅಂಗಡಿ (ಸಂ.26) ಗಳಲ್ಲಿ ಪಡಿತರ ಚೀಟಿದಾರರಿಂದ ಅಕ್ರಮವಾಗಿ ₹ 10 ಮತ್ತು ₹20 ವಸೂಲಿ ಮಾಡುತ್ತಿರುವುದನ್ನು ಪತ್ತೆ ಹಚ್ಚಲಾಗಿದೆ.