<p><strong>ಚೇಳೂರು</strong>: ಇಲ್ಲಿನ ಬ್ರಾಹ್ಮಣರ ಭವನದಲ್ಲಿ ವಿಪ್ರ ವನಿತಾ ವೇದಿಕೆ ಉದ್ಘಾಟನಾ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು.</p>.<p>ಸಮಾಜದ ಮಹಿಳೆಯರಲ್ಲಿನ ಕಲೆ, ಸಾಹಿತ್ಯ ಮತ್ತು ವಿವಿಧ ಸೃಜನಶೀಲ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ ಸಂಘಟನೆ ಆರಂಭಿಸಲಾಗಿದೆ ಎಂದು ಸುವರ್ಣಾ ಅಮರನಾಥ ಹೇಳಿದರು.</p>.<p>ಮುಖ್ಯ ಅತಿಥಿಯಾಗಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಮಹಿಳೆಯರಲ್ಲಿ ಅಪಾರ ಜ್ಞಾನ ಮತ್ತು ಕೌಶಲ್ಯ ಅಡಗಿದೆ. ಆದರೆ ದೈನಂದಿನ ಕೌಟುಂಬಿಕ ಜವಾಬ್ದಾರಿಗಳ ಮಧ್ಯೆ ತಮ್ಮ ಆಸಕ್ತಿಗಳನ್ನು ಪ್ರದರ್ಶಿಸಲು ಅವರಿಗೆ ಸೂಕ್ತ ಅವಕಾಶಗಳು ಸಿಗುತ್ತಿಲ್ಲ. ಈ ಕೊರತೆ ನೀಗಿಸಲು ವಿಪ್ರ ವನಿತಾ ವೇದಿಕೆ ಪ್ರಮುಖ ಪಾತ್ರ ವಹಿಸಲಿದೆ ಎಂದರು.</p>.<p>ಚೇಳೂರು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ನೂತನ ಅಧ್ಯಕ್ಷೆಯಾಗಿ ಮಾನಸಾ ಆಯ್ಕೆಯಾದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಸಂಘದ ಬಲವರ್ಧನೆಗೆ ಶ್ರಮಿಸುವುದಾಗಿ ಹೇಳಿದರು.</p>.<p>ಸಭೆ ಉದ್ದೇಶಿಸಿ ಮಾತನಾಡಿದ ಪೂರ್ಣಿಮಾ, ಸಮಾಜದ ಪ್ರಗತಿಯಲ್ಲಿ ಮಹಿಳೆಯರ ಸಂಘಟನೆ ಅತ್ಯಗತ್ಯವಾಗಿದೆ ಎಂದರು.</p>.<p>ವೈದೇಹಿ ಶ್ರೀಕಾಂತ್, ವತ್ಸಲಾ ನಗೇಶ್, ಮಂಜುಳಾ, ಚಂಪಕ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಂದ ಅಪಾರ ಸಂಖ್ಯೆಯ ವಿಪ್ರ ಮಹಿಳೆಯರು, ಹಿರಿಯರು ಮತ್ತು ಸಮಾಜದ ಮುಖಂಡರು ಭಾಗವಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-16-158747976</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೇಳೂರು</strong>: ಇಲ್ಲಿನ ಬ್ರಾಹ್ಮಣರ ಭವನದಲ್ಲಿ ವಿಪ್ರ ವನಿತಾ ವೇದಿಕೆ ಉದ್ಘಾಟನಾ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು.</p>.<p>ಸಮಾಜದ ಮಹಿಳೆಯರಲ್ಲಿನ ಕಲೆ, ಸಾಹಿತ್ಯ ಮತ್ತು ವಿವಿಧ ಸೃಜನಶೀಲ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ ಸಂಘಟನೆ ಆರಂಭಿಸಲಾಗಿದೆ ಎಂದು ಸುವರ್ಣಾ ಅಮರನಾಥ ಹೇಳಿದರು.</p>.<p>ಮುಖ್ಯ ಅತಿಥಿಯಾಗಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಮಹಿಳೆಯರಲ್ಲಿ ಅಪಾರ ಜ್ಞಾನ ಮತ್ತು ಕೌಶಲ್ಯ ಅಡಗಿದೆ. ಆದರೆ ದೈನಂದಿನ ಕೌಟುಂಬಿಕ ಜವಾಬ್ದಾರಿಗಳ ಮಧ್ಯೆ ತಮ್ಮ ಆಸಕ್ತಿಗಳನ್ನು ಪ್ರದರ್ಶಿಸಲು ಅವರಿಗೆ ಸೂಕ್ತ ಅವಕಾಶಗಳು ಸಿಗುತ್ತಿಲ್ಲ. ಈ ಕೊರತೆ ನೀಗಿಸಲು ವಿಪ್ರ ವನಿತಾ ವೇದಿಕೆ ಪ್ರಮುಖ ಪಾತ್ರ ವಹಿಸಲಿದೆ ಎಂದರು.</p>.<p>ಚೇಳೂರು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ನೂತನ ಅಧ್ಯಕ್ಷೆಯಾಗಿ ಮಾನಸಾ ಆಯ್ಕೆಯಾದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಸಂಘದ ಬಲವರ್ಧನೆಗೆ ಶ್ರಮಿಸುವುದಾಗಿ ಹೇಳಿದರು.</p>.<p>ಸಭೆ ಉದ್ದೇಶಿಸಿ ಮಾತನಾಡಿದ ಪೂರ್ಣಿಮಾ, ಸಮಾಜದ ಪ್ರಗತಿಯಲ್ಲಿ ಮಹಿಳೆಯರ ಸಂಘಟನೆ ಅತ್ಯಗತ್ಯವಾಗಿದೆ ಎಂದರು.</p>.<p>ವೈದೇಹಿ ಶ್ರೀಕಾಂತ್, ವತ್ಸಲಾ ನಗೇಶ್, ಮಂಜುಳಾ, ಚಂಪಕ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಂದ ಅಪಾರ ಸಂಖ್ಯೆಯ ವಿಪ್ರ ಮಹಿಳೆಯರು, ಹಿರಿಯರು ಮತ್ತು ಸಮಾಜದ ಮುಖಂಡರು ಭಾಗವಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-16-158747976</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>