ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಪ್ರಶಾಂತಿ ಬಾಲಮಂದಿರ ಟ್ರಸ್ಟ್ ನಿರ್ಮಿಸಿರುವ 300 ಹಾಸಿಗೆಗಳ ಸತ್ಯಸಾಯಿ ಸರಳ ಸ್ಮಾರಕ ಆಸ್ಪತ್ರೆ ಮತ್ತು ಮಕ್ಕಳ ತೀವ್ರ ನಿಗಾ ಘಟಕವನ್ನು ಶುಕ್ರವಾರ ಬೆಳಿಗ್ಗೆ 12ಕ್ಕೆ ಉದ್ಘಾಟಿಸುವರು.
ನಂತರ ಮುದ್ದೇನಹಳ್ಳಿ ಗ್ರಾಮದಲ್ಲಿ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಸಮಾಧಿ ಸ್ಥಳಕ್ಕೆ ಭೇಟಿ ಗೌರವಸಲ್ಲಿಸಲಿದ್ದಾರೆ.