<p><strong>ಚಿಕ್ಕಬಳ್ಳಾಪುರ:</strong> ನೆರೆಯ ಆಂಧ್ರಪ್ರದೇಶ ದಿಂದ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು ₹60 ಲಕ್ಷ ಮೌಲ್ಯದ 13 ಟನ್ ರಕ್ತ ಚಂದನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p>ಖಚಿತ ಮಾಹಿತಿ ಮೇರೆಗೆ ಶನಿವಾರ ಮಧ್ಯಾಹ್ನ ರಕ್ತ ಚಂದನ ಸಾಗಿಸುತ್ತಿದ್ದ ಲಾರಿಯನ್ನು ಬೆನ್ನತ್ತಿದ್ದ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಎಸ್.ಬಿ.ಎಸ್ ಸೆಲ್ನ ಡಿವೈಎಸ್ಪಿ ವಿ.ವಿ. ಗಿರೀಶ್ ನೇತೃತ್ವದ ತಂಡದೊಂದಿಗೆ ಚಿಕ್ಕಬಳ್ಳಾಪುರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.</p>.<p>ಲಾರಿ ರಾಷ್ಟ್ರೀಯ ಹೆದ್ದಾರಿ-7 ರಲ್ಲಿ ಗುಡಿಬಂಡೆಯಿಂದ ಗೌರಿಬಿದನೂರು ಮಾರ್ಗವಾಗಿ ಚಿಕ್ಕಬಳ್ಳಾಪುರದ ಕಡೆಗೆ ಹೋಗುತ್ತಿರುವುದರ ಮಾಹಿತಿ ಪಡೆದ ಪೊಲೀಸರು, ನಗರದ ಹೊರ ವಲಯದ ಗೌರಿಬಿದನೂರು ರಸ್ತೆಯ ಕಣಿವೆ ಪ್ರದೇಶದ ವೀರದಿಮ್ಮನ ದೇವಾಲಯದ ಬಳಿ ದಾಳಿ ನಡೆಸಿ ವಶಕ್ಕೆ ಪಡೆದರು.</p>.<p>ಲಾರಿಯಲ್ಲಿದ್ದ ವೇಣುಗೋಪಾಲ್ (32), ರಾಮಚಂದ್ರ (32) ಅವರನ್ನು ಬಂಧಿಸಲಾಗಿದೆ.</p>.<p>ಲಾರಿಯಲ್ಲಿ 42 ರಕ್ತ ಚಂದನದ ತುಂಡುಗಳಿದ್ದವು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ನೆರೆಯ ಆಂಧ್ರಪ್ರದೇಶ ದಿಂದ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು ₹60 ಲಕ್ಷ ಮೌಲ್ಯದ 13 ಟನ್ ರಕ್ತ ಚಂದನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p>ಖಚಿತ ಮಾಹಿತಿ ಮೇರೆಗೆ ಶನಿವಾರ ಮಧ್ಯಾಹ್ನ ರಕ್ತ ಚಂದನ ಸಾಗಿಸುತ್ತಿದ್ದ ಲಾರಿಯನ್ನು ಬೆನ್ನತ್ತಿದ್ದ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಎಸ್.ಬಿ.ಎಸ್ ಸೆಲ್ನ ಡಿವೈಎಸ್ಪಿ ವಿ.ವಿ. ಗಿರೀಶ್ ನೇತೃತ್ವದ ತಂಡದೊಂದಿಗೆ ಚಿಕ್ಕಬಳ್ಳಾಪುರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.</p>.<p>ಲಾರಿ ರಾಷ್ಟ್ರೀಯ ಹೆದ್ದಾರಿ-7 ರಲ್ಲಿ ಗುಡಿಬಂಡೆಯಿಂದ ಗೌರಿಬಿದನೂರು ಮಾರ್ಗವಾಗಿ ಚಿಕ್ಕಬಳ್ಳಾಪುರದ ಕಡೆಗೆ ಹೋಗುತ್ತಿರುವುದರ ಮಾಹಿತಿ ಪಡೆದ ಪೊಲೀಸರು, ನಗರದ ಹೊರ ವಲಯದ ಗೌರಿಬಿದನೂರು ರಸ್ತೆಯ ಕಣಿವೆ ಪ್ರದೇಶದ ವೀರದಿಮ್ಮನ ದೇವಾಲಯದ ಬಳಿ ದಾಳಿ ನಡೆಸಿ ವಶಕ್ಕೆ ಪಡೆದರು.</p>.<p>ಲಾರಿಯಲ್ಲಿದ್ದ ವೇಣುಗೋಪಾಲ್ (32), ರಾಮಚಂದ್ರ (32) ಅವರನ್ನು ಬಂಧಿಸಲಾಗಿದೆ.</p>.<p>ಲಾರಿಯಲ್ಲಿ 42 ರಕ್ತ ಚಂದನದ ತುಂಡುಗಳಿದ್ದವು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>