<p><strong>ಶಿಡ್ಲಘಟ್ಟ:</strong> ‘ನಗರ, ಪಟ್ಟಣಗಳಲ್ಲಿ ಮಳೆ ನೀರು ಸಂಗ್ರಹಣಾ ವ್ಯವಸ್ಥೆ ಅಳವಡಿಸಿಕೊಳ್ಳುವ ಪ್ರತಿ ಮನೆಗೆ ಸ್ಥಳೀಯ ಸಂಸ್ಥೆಗಳಿಂದ ತಲಾ ₹5,000 ಪ್ರೋತ್ಸಾಹಧನ ನೀಡಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ಥಳೀಯ ಸಂಸ್ಥೆಗಳಲ್ಲಿ ಮಳೆ ನೀರು ಕೊಯ್ಲು ಪದ್ಧತಿಯನ್ನು ಅನುಷ್ಟಾನಗೊಳಿಸಲು ಅಧಿಕಾರಿಗಳು ಹಾಗೂ ನಾಗರಿಕರನ್ನೊಳಗೊಂಡ ಜಿಲ್ಲಾ ಮಟ್ಟದ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಚಿಲುಮೆ ನೀರಿಗಾಗಿ ಒಂದಾಗಿ’ ಎಂಬ ಘೋಷ ವಾಕ್ಯದಡಿಯಲ್ಲಿ ಜಿಲ್ಲೆಯ ಪ್ರತಿಯೊಂದು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಳೆ ನೀರು ಸಂಗ್ರಹ ಪದ್ಧತಿ ಅನುಷ್ಟಾನಗೊಳಿಸಲು ಹಸಿರು ನಿಧಿಯನ್ನು ಸ್ಥಾಪಿಸಿದ್ದು, ಅದರ ಮೂಲಕ ಸ್ಥಳೀಯ ಸಂಸ್ಥೆಗಳಿಗೆ ತಲಾ ₹5 ಲಕ್ಷ ಬಿಡುಗಡೆ ಮಾಡಲಾಗುತ್ತದೆ’ ಎಂದು ಹೇಳಿದರು.</p>.<p>‘ಜಿಲ್ಲೆ ತೀವ್ರ ಅಂತರ್ಜಲದ ಕೊರತೆ ಎದುರಿಸುತ್ತಿರುವುದರಿಂದ ಎಲ್ಲ ಮನೆ, ಕಟ್ಟಡಗಳಲ್ಲಿ ಮಳೆ ನೀರನ್ನು ಸಂಗ್ರಹಿಸುವುದು ಇಂದಿನ ಅಗತ್ಯವಾಗಿದೆ. ಆದ್ದರಿಂದ ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ ವಾಸಿಸುವ ಪ್ರತಿಯೊಬ್ಬ ನಾಗರಿಕರು ತಮ್ಮ ಮನೆಗಳಲ್ಲಿ ಮಳೆ ನೀರು ಸಂಗ್ರಹಿಸುವ ಕೆಲಸ ಮಾಡಬೇಕಿದೆ. ಈ ಬಗ್ಗೆ ಅಧಿಕಾರಿಗಳು ಸಾರ್ವಜನಿಕರಿಗೆ ವಾರ್ಡ್ ಸಭೆ, ಕರಪತ್ರಗಳ ಮೂಲಕ ಅರಿವು ಮೂಡಿಸಬೇಕು’ ಎಂದರು.</p>.<p>‘ಪ್ರತಿಯೊಂದು ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ ನಾಲ್ಕು ವಾರ್ಡುಗಳನ್ನು ಆರಿಸಿಕೊಳ್ಳಬೇಕು. ಪ್ರತಿ ವಾರ್ಡ್ನಲ್ಲಿ ತರಬೇತಿ ನೀಡಿದ ವಿದ್ಯಾರ್ಥಿಗಳು ಅಥವಾ ಸ್ವಯಂಸೇವಕರಿಂದ ಸಮೀಕ್ಷೆ ಕೈಗೊಂಡು ಎಷ್ಟು ಪ್ರಮಾಣದ ಮಳೆ ನೀರು ಸಂಗ್ರಹಿಸಬಹುದೆಂದು ಅಂಕಿ ಅಂಶಗಳನ್ನು ತಯಾರಿಸಬೇಕು’ ಎಂದು ತಿಳಿಸಿದರು.</p>.<p>‘ಈ ಯೋಜನೆ ಅನುಷ್ಠಾನಕ್ಕಾಗಿ ಸ್ಥಳೀಯ ಸಂಸ್ಥೆಗಳಿಂದ ಆಯ್ದ ಪ್ಲಂಬರ್ ಮತ್ತು ಮೇಸ್ತ್ರಿಗಳಿಗೆ ತರಬೇತಿ ನೀಡಲಾಗುತ್ತದೆ. ಮಳೆ ನೀರು ಸಂಗ್ರಹ ಪದ್ಧತಿ ಅಳವಡಿಸಿಕೊಳ್ಳುವ ಮನೆ ಮಾಲೀಕನ ಆಧಾರ್ ಸಂಖ್ಯೆಗೆ ಲಿಂಕ್ ಆದ ಬ್ಯಾಂಕ್ ಖಾತೆಗೆ ₹5,000 ಪ್ರೋತ್ಸಾಹ ಧನ ಜಮೆ ಮಾಡಲಾಗುತ್ತದೆ. ಸರ್ಕಾರಿ ಉದ್ಯಾನ, ಸಾರ್ವಜನಿಕ ಸ್ಥಳಗಳಲ್ಲಿ ಸಹ ನೀರು ಸಂಗ್ರಹಿಸುವ ಕೆಲಸವಾಗಬೇಕಿದೆ’ ಎಂದು ಹೇಳಿದರು.</p>.<p>ಮಾರುಕಟ್ಟೆ ಕಟ್ಟಡಗಳು, ಸರ್ಕಾರಿ ಆಸ್ಪತ್ರೆಗಳು, ಬಸ್ ನಿಲ್ದಾಣಗಳಲ್ಲಿ ಮಳೆ ನೀರು ಸಂಗ್ರಹಿಸುವ ಪದ್ಧತಿ ಅಳವಡಿಸಿದರೆ, ಆಯಾ ಕಟ್ಟಡದಲ್ಲಿ ಸಾರ್ವಜನಿಕರ ನೀರಿನ ಅಗತ್ಯವನ್ನಾದರೂ ಪೂರೈಸಲು ಅದರಿಂದ ಸಾಧ್ಯವಾಗುತ್ತದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ನಾಗರಿಕ ಪ್ರತಿನಿಧಿಗಳು ಸಲಹೆ ನೀಡಿದರು.</p>.<p>ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ, ಕಾರ್ಯಪಾಲಕ ಎಂಜಿನಿಯರ್, ವಿವಿಧ ನಗರಸಭೆ ಹಾಗೂ ಪುರಸಭೆಗಳ ಪೌರಾಯುಕ್ತರು ಹಾಗೂ ನಾಮನಿರ್ದೇಶಿತ ಸದಸ್ಯರು ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ‘ನಗರ, ಪಟ್ಟಣಗಳಲ್ಲಿ ಮಳೆ ನೀರು ಸಂಗ್ರಹಣಾ ವ್ಯವಸ್ಥೆ ಅಳವಡಿಸಿಕೊಳ್ಳುವ ಪ್ರತಿ ಮನೆಗೆ ಸ್ಥಳೀಯ ಸಂಸ್ಥೆಗಳಿಂದ ತಲಾ ₹5,000 ಪ್ರೋತ್ಸಾಹಧನ ನೀಡಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ಥಳೀಯ ಸಂಸ್ಥೆಗಳಲ್ಲಿ ಮಳೆ ನೀರು ಕೊಯ್ಲು ಪದ್ಧತಿಯನ್ನು ಅನುಷ್ಟಾನಗೊಳಿಸಲು ಅಧಿಕಾರಿಗಳು ಹಾಗೂ ನಾಗರಿಕರನ್ನೊಳಗೊಂಡ ಜಿಲ್ಲಾ ಮಟ್ಟದ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಚಿಲುಮೆ ನೀರಿಗಾಗಿ ಒಂದಾಗಿ’ ಎಂಬ ಘೋಷ ವಾಕ್ಯದಡಿಯಲ್ಲಿ ಜಿಲ್ಲೆಯ ಪ್ರತಿಯೊಂದು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಳೆ ನೀರು ಸಂಗ್ರಹ ಪದ್ಧತಿ ಅನುಷ್ಟಾನಗೊಳಿಸಲು ಹಸಿರು ನಿಧಿಯನ್ನು ಸ್ಥಾಪಿಸಿದ್ದು, ಅದರ ಮೂಲಕ ಸ್ಥಳೀಯ ಸಂಸ್ಥೆಗಳಿಗೆ ತಲಾ ₹5 ಲಕ್ಷ ಬಿಡುಗಡೆ ಮಾಡಲಾಗುತ್ತದೆ’ ಎಂದು ಹೇಳಿದರು.</p>.<p>‘ಜಿಲ್ಲೆ ತೀವ್ರ ಅಂತರ್ಜಲದ ಕೊರತೆ ಎದುರಿಸುತ್ತಿರುವುದರಿಂದ ಎಲ್ಲ ಮನೆ, ಕಟ್ಟಡಗಳಲ್ಲಿ ಮಳೆ ನೀರನ್ನು ಸಂಗ್ರಹಿಸುವುದು ಇಂದಿನ ಅಗತ್ಯವಾಗಿದೆ. ಆದ್ದರಿಂದ ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ ವಾಸಿಸುವ ಪ್ರತಿಯೊಬ್ಬ ನಾಗರಿಕರು ತಮ್ಮ ಮನೆಗಳಲ್ಲಿ ಮಳೆ ನೀರು ಸಂಗ್ರಹಿಸುವ ಕೆಲಸ ಮಾಡಬೇಕಿದೆ. ಈ ಬಗ್ಗೆ ಅಧಿಕಾರಿಗಳು ಸಾರ್ವಜನಿಕರಿಗೆ ವಾರ್ಡ್ ಸಭೆ, ಕರಪತ್ರಗಳ ಮೂಲಕ ಅರಿವು ಮೂಡಿಸಬೇಕು’ ಎಂದರು.</p>.<p>‘ಪ್ರತಿಯೊಂದು ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ ನಾಲ್ಕು ವಾರ್ಡುಗಳನ್ನು ಆರಿಸಿಕೊಳ್ಳಬೇಕು. ಪ್ರತಿ ವಾರ್ಡ್ನಲ್ಲಿ ತರಬೇತಿ ನೀಡಿದ ವಿದ್ಯಾರ್ಥಿಗಳು ಅಥವಾ ಸ್ವಯಂಸೇವಕರಿಂದ ಸಮೀಕ್ಷೆ ಕೈಗೊಂಡು ಎಷ್ಟು ಪ್ರಮಾಣದ ಮಳೆ ನೀರು ಸಂಗ್ರಹಿಸಬಹುದೆಂದು ಅಂಕಿ ಅಂಶಗಳನ್ನು ತಯಾರಿಸಬೇಕು’ ಎಂದು ತಿಳಿಸಿದರು.</p>.<p>‘ಈ ಯೋಜನೆ ಅನುಷ್ಠಾನಕ್ಕಾಗಿ ಸ್ಥಳೀಯ ಸಂಸ್ಥೆಗಳಿಂದ ಆಯ್ದ ಪ್ಲಂಬರ್ ಮತ್ತು ಮೇಸ್ತ್ರಿಗಳಿಗೆ ತರಬೇತಿ ನೀಡಲಾಗುತ್ತದೆ. ಮಳೆ ನೀರು ಸಂಗ್ರಹ ಪದ್ಧತಿ ಅಳವಡಿಸಿಕೊಳ್ಳುವ ಮನೆ ಮಾಲೀಕನ ಆಧಾರ್ ಸಂಖ್ಯೆಗೆ ಲಿಂಕ್ ಆದ ಬ್ಯಾಂಕ್ ಖಾತೆಗೆ ₹5,000 ಪ್ರೋತ್ಸಾಹ ಧನ ಜಮೆ ಮಾಡಲಾಗುತ್ತದೆ. ಸರ್ಕಾರಿ ಉದ್ಯಾನ, ಸಾರ್ವಜನಿಕ ಸ್ಥಳಗಳಲ್ಲಿ ಸಹ ನೀರು ಸಂಗ್ರಹಿಸುವ ಕೆಲಸವಾಗಬೇಕಿದೆ’ ಎಂದು ಹೇಳಿದರು.</p>.<p>ಮಾರುಕಟ್ಟೆ ಕಟ್ಟಡಗಳು, ಸರ್ಕಾರಿ ಆಸ್ಪತ್ರೆಗಳು, ಬಸ್ ನಿಲ್ದಾಣಗಳಲ್ಲಿ ಮಳೆ ನೀರು ಸಂಗ್ರಹಿಸುವ ಪದ್ಧತಿ ಅಳವಡಿಸಿದರೆ, ಆಯಾ ಕಟ್ಟಡದಲ್ಲಿ ಸಾರ್ವಜನಿಕರ ನೀರಿನ ಅಗತ್ಯವನ್ನಾದರೂ ಪೂರೈಸಲು ಅದರಿಂದ ಸಾಧ್ಯವಾಗುತ್ತದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ನಾಗರಿಕ ಪ್ರತಿನಿಧಿಗಳು ಸಲಹೆ ನೀಡಿದರು.</p>.<p>ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ, ಕಾರ್ಯಪಾಲಕ ಎಂಜಿನಿಯರ್, ವಿವಿಧ ನಗರಸಭೆ ಹಾಗೂ ಪುರಸಭೆಗಳ ಪೌರಾಯುಕ್ತರು ಹಾಗೂ ನಾಮನಿರ್ದೇಶಿತ ಸದಸ್ಯರು ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>