<p><strong>ಚಿಕ್ಕಬಳ್ಳಾಪುರ</strong>: ತಾಲ್ಲೂಕಿನ ಆವಲಗುರ್ಕಿಯ ಈಶಾ ಯೋಗ ಕೇಂದ್ರದಲ್ಲಿ ನಡೆದ 70ನೇ ರಾಜ್ಯೋತ್ಸವ ಕಾರ್ಯಕ್ರಮ ವೇಳೆ ಆದಿಯೋಗಿಯ ಪ್ರತಿಮೆ ಮೇಲೆ ನಾಡಧ್ವಜದ ಬಣ್ಣಗಳನ್ನು ಬೆಳಗಿಸಲಾಯಿತು. </p><p>ಈ ವೇಳೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ಸಂಭ್ರಮಿಸಿದರು. ಇದೇ ಮೊದಲ ಬಾರಿಗೆ ನಾಡಧ್ವಜದ ಬಣ್ಣಗಳಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಮೇಲೆ ಬೆಳಗಿಸಲಾಯಿತು.</p><p>ಶನಿವಾರ ಸಂಜೆ 6.30ಕ್ಕೆ ಕೇಂದ್ರದಲ್ಲಿ ರಾಜ್ಯೋತ್ಸವ ಕಾರ್ಯಕ್ರಮಗಳು ಆರಂಭವಾದವು. ಯೋಗ ಕೇಂದ್ರದಲ್ಲಿ ಧ್ವಜಾರೋಹಣವನ್ನೂ<br>ಮಾಡಲಾಯಿತು. </p><p><strong>ಪೊಲೀಸ್ ಮಹಾನಿರ್ದೇಶಕ ಭೇಟಿ: </strong>ಈಶಾ ಯೋಗ ಕೇಂದ್ರಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಯೋಗ ಕೇಂದ್ರದ ಆದಿಯೋಗಿ ಪ್ರತಿಮೆ, ನಾಗಮಂಟಪ ಮತ್ತಿತರ ಸ್ಥಳಗಳಿಗೆ ಅವರು ಭೇಟಿ ನೀಡಿದರು.<strong> </strong></p><p>ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗನ್ನಾಥ್ ರೈ ಹಾಗೂ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ತಾಲ್ಲೂಕಿನ ಆವಲಗುರ್ಕಿಯ ಈಶಾ ಯೋಗ ಕೇಂದ್ರದಲ್ಲಿ ನಡೆದ 70ನೇ ರಾಜ್ಯೋತ್ಸವ ಕಾರ್ಯಕ್ರಮ ವೇಳೆ ಆದಿಯೋಗಿಯ ಪ್ರತಿಮೆ ಮೇಲೆ ನಾಡಧ್ವಜದ ಬಣ್ಣಗಳನ್ನು ಬೆಳಗಿಸಲಾಯಿತು. </p><p>ಈ ವೇಳೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ಸಂಭ್ರಮಿಸಿದರು. ಇದೇ ಮೊದಲ ಬಾರಿಗೆ ನಾಡಧ್ವಜದ ಬಣ್ಣಗಳಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಮೇಲೆ ಬೆಳಗಿಸಲಾಯಿತು.</p><p>ಶನಿವಾರ ಸಂಜೆ 6.30ಕ್ಕೆ ಕೇಂದ್ರದಲ್ಲಿ ರಾಜ್ಯೋತ್ಸವ ಕಾರ್ಯಕ್ರಮಗಳು ಆರಂಭವಾದವು. ಯೋಗ ಕೇಂದ್ರದಲ್ಲಿ ಧ್ವಜಾರೋಹಣವನ್ನೂ<br>ಮಾಡಲಾಯಿತು. </p><p><strong>ಪೊಲೀಸ್ ಮಹಾನಿರ್ದೇಶಕ ಭೇಟಿ: </strong>ಈಶಾ ಯೋಗ ಕೇಂದ್ರಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಯೋಗ ಕೇಂದ್ರದ ಆದಿಯೋಗಿ ಪ್ರತಿಮೆ, ನಾಗಮಂಟಪ ಮತ್ತಿತರ ಸ್ಥಳಗಳಿಗೆ ಅವರು ಭೇಟಿ ನೀಡಿದರು.<strong> </strong></p><p>ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗನ್ನಾಥ್ ರೈ ಹಾಗೂ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>