<p><strong>ಚಿಕ್ಕಬಳ್ಳಾಪುರ:</strong> ಕೃಷಿ ಇಲಾಖೆಯು ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಬಿತ್ತನೆ ಗುರಿ ನಿಗದಿಗೊಳಿಸಿದೆ. ಈ ಬಾರಿ 1,26,854 ಹೆಕ್ಟೇರ್ ಬಿತ್ತನೆಯ ಗುರಿಯನ್ನು ಹೊಂದಲಾಗಿದೆ.</p>.<p>ಕಳೆದ ವರ್ಷಕ್ಕೆ 1,32,796 ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿತ್ತು. ಈ ಬಾರಿ ಆರು ಸಾವಿರ ಹೆಕ್ಟೇರ್ ಬಿತ್ತನೆ ಗುರಿ ಕಡಿಮೆಯಾಗಿದೆ. ಈ ಪೈಕಿ ನೆಲಗಡಲೆಯೇ 6000 ಹೆಕ್ಟೇರ್ ಬಿತ್ತನೆ ಪ್ರದೇಶ ಕುಸಿತ ಕಂಡಿದೆ.</p>.<p>ಕೃಷಿ ಇಲಾಖೆಯು ಬಿತ್ತನೆ ಕಾರ್ಯ ಅಗತ್ಯ ಸಿದ್ಧತೆಗಳಲ್ಲಿ ತಲ್ಲೀನವಾಗಿದೆ. ಜಿಲ್ಲೆಯಲ್ಲಿ ಕಳೆದ ಎರಡು, ಮೂರು ತಿಂಗಳಿಂದ ಆರ್ಭಟಿಸಿದ್ದ ಬಿಸಿಲಿನ ತಾಪ ಕುಂಚ ಕಡಿಮೆ ಆಗುತ್ತಿದೆ. ಮೋಡ ಕವಿದ ವಾತಾವರಣಯೂ ಆಗೊಮ್ಮೆ ಈಗೊಮ್ಮೆ ಕಾಣಿಸಿಕೊಂಡಿದೆ.</p>.<p>ಬಯಲು ಸೀಮೆಯ ಚಿಕ್ಕಬಳ್ಳಾಪುರ ಜಿಲ್ಲೆಯು ಶಾಶ್ವತ ನೀರಾವರಿ ವಂಚಿತ ಜಿಲ್ಲೆ. ಮಳೆ ಅಶ್ರಿತ ಬೇಸಾಯ ಹೆಚ್ಚು ಅವಲಂಬಿಸಿದೆ. ಜಿಲ್ಲೆಯಲ್ಲಿ ನೀರಾವರಿ ಪ್ರದೇಶಕ್ಕಿಂತ ಮಳೆ ಆಶ್ರಿತ ಕೃಷಿ ಭೂಮಿಯೆ ಹೆಚ್ಚಾಗಿದೆ.</p>.<p>ಈಗಾಗಲೇ ಜಿಲ್ಲೆಯ ಕೃಷಿ ಇಲಾಖೆ ಅಧಿಕಾರಿಗಳು, ಕೃಷಿ ಪರಿಕರಗಳ ಮಾರಾಟಗಾರರೊಂದಿಗೆ ಸಭೆ ನಡೆಸಿ ಮುಂಗಾರು ಬಿತ್ತನೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಿದ್ದಾರೆ.</p>.<p>ಇನ್ನೂ ಈ ಬಾರಿ ರಸಗೊಬ್ಬರ ಅದರಲ್ಲೂ ಯೂರಿಯಾ, ಡಿಎಪಿ ದುರ್ಬಳಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರೈತರನ್ನು ಕಡ್ಡಾಯವಾಗಿ ಪ್ರೋಟ್ಸ್ ತಂತ್ರಾಂಶದಲ್ಲಿ ನೋಂದಣಿ ಆಗಿರಬೇಕು ಎನ್ನುವ ನಿಯಮವನ್ನು ಕಡ್ಡಾಯ ಮಾಡಲಾಗಿದೆ.</p>.<p>ಮಾರ್ಚ್ ಮಧ್ಯಭಾಗದಲ್ಲಿ ಮಳೆ ಬಂದಿತ್ತು. ಮೇ ಆರಂಭದಲ್ಲಿಯೂ ತುಂತುರು ಮಳೆ ಸುರಿದಿತ್ತು. ಕೃಷಿ ಇಲಾಖೆ ಅಧಿಕಾರಿಗಳು ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ತಾಲ್ಲೂಕುಗಳಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.</p>.<p>ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಈಗಾಗಲೇ ಚಾಲನೆ ನೀಡಿರುವ ರೈತರು ತಿಪ್ಪೆಗಳಲ್ಲಿ ಸಂಗ್ರಹಿಸಿದ್ದ ಗೊಬ್ಬರವನ್ನು ಹೊಲಗಳಿಗೆ ಸಾಗಿಸುತ್ತಿದ್ದಾರೆ.</p>.<p>ಜಿಲ್ಲೆಯಲ್ಲಿ ಈಗಾಗಲೇ ಮಿತಿ ಮೀರಿ ರಸಗೊಬ್ಬರ ಬಳಕೆ ಮಾಡುತ್ತಿರುವುದನ್ನು ಕೃಷಿ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಹೀಗಿದ್ದರೂ ಜಿಲ್ಲೆಯಲ್ಲಿ ಈ ವರ್ಷ 50 ಸಾವಿರ ಟನ್ನಷ್ಟು ರಸಗೊಬ್ಬರ ಬೇಕಿದೆ ಎಂದು ಕೃಷಿ ಇಲಾಖೆ ಅಂದಾಜಿಸಿದೆ.</p>.<p>ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ ದಾಸ್ತಾನಿಗೆ ಕೃಷಿ ಇಲಾಖೆ ಮುಂದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಕೃಷಿ ಇಲಾಖೆಯು ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಬಿತ್ತನೆ ಗುರಿ ನಿಗದಿಗೊಳಿಸಿದೆ. ಈ ಬಾರಿ 1,26,854 ಹೆಕ್ಟೇರ್ ಬಿತ್ತನೆಯ ಗುರಿಯನ್ನು ಹೊಂದಲಾಗಿದೆ.</p>.<p>ಕಳೆದ ವರ್ಷಕ್ಕೆ 1,32,796 ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿತ್ತು. ಈ ಬಾರಿ ಆರು ಸಾವಿರ ಹೆಕ್ಟೇರ್ ಬಿತ್ತನೆ ಗುರಿ ಕಡಿಮೆಯಾಗಿದೆ. ಈ ಪೈಕಿ ನೆಲಗಡಲೆಯೇ 6000 ಹೆಕ್ಟೇರ್ ಬಿತ್ತನೆ ಪ್ರದೇಶ ಕುಸಿತ ಕಂಡಿದೆ.</p>.<p>ಕೃಷಿ ಇಲಾಖೆಯು ಬಿತ್ತನೆ ಕಾರ್ಯ ಅಗತ್ಯ ಸಿದ್ಧತೆಗಳಲ್ಲಿ ತಲ್ಲೀನವಾಗಿದೆ. ಜಿಲ್ಲೆಯಲ್ಲಿ ಕಳೆದ ಎರಡು, ಮೂರು ತಿಂಗಳಿಂದ ಆರ್ಭಟಿಸಿದ್ದ ಬಿಸಿಲಿನ ತಾಪ ಕುಂಚ ಕಡಿಮೆ ಆಗುತ್ತಿದೆ. ಮೋಡ ಕವಿದ ವಾತಾವರಣಯೂ ಆಗೊಮ್ಮೆ ಈಗೊಮ್ಮೆ ಕಾಣಿಸಿಕೊಂಡಿದೆ.</p>.<p>ಬಯಲು ಸೀಮೆಯ ಚಿಕ್ಕಬಳ್ಳಾಪುರ ಜಿಲ್ಲೆಯು ಶಾಶ್ವತ ನೀರಾವರಿ ವಂಚಿತ ಜಿಲ್ಲೆ. ಮಳೆ ಅಶ್ರಿತ ಬೇಸಾಯ ಹೆಚ್ಚು ಅವಲಂಬಿಸಿದೆ. ಜಿಲ್ಲೆಯಲ್ಲಿ ನೀರಾವರಿ ಪ್ರದೇಶಕ್ಕಿಂತ ಮಳೆ ಆಶ್ರಿತ ಕೃಷಿ ಭೂಮಿಯೆ ಹೆಚ್ಚಾಗಿದೆ.</p>.<p>ಈಗಾಗಲೇ ಜಿಲ್ಲೆಯ ಕೃಷಿ ಇಲಾಖೆ ಅಧಿಕಾರಿಗಳು, ಕೃಷಿ ಪರಿಕರಗಳ ಮಾರಾಟಗಾರರೊಂದಿಗೆ ಸಭೆ ನಡೆಸಿ ಮುಂಗಾರು ಬಿತ್ತನೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಿದ್ದಾರೆ.</p>.<p>ಇನ್ನೂ ಈ ಬಾರಿ ರಸಗೊಬ್ಬರ ಅದರಲ್ಲೂ ಯೂರಿಯಾ, ಡಿಎಪಿ ದುರ್ಬಳಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರೈತರನ್ನು ಕಡ್ಡಾಯವಾಗಿ ಪ್ರೋಟ್ಸ್ ತಂತ್ರಾಂಶದಲ್ಲಿ ನೋಂದಣಿ ಆಗಿರಬೇಕು ಎನ್ನುವ ನಿಯಮವನ್ನು ಕಡ್ಡಾಯ ಮಾಡಲಾಗಿದೆ.</p>.<p>ಮಾರ್ಚ್ ಮಧ್ಯಭಾಗದಲ್ಲಿ ಮಳೆ ಬಂದಿತ್ತು. ಮೇ ಆರಂಭದಲ್ಲಿಯೂ ತುಂತುರು ಮಳೆ ಸುರಿದಿತ್ತು. ಕೃಷಿ ಇಲಾಖೆ ಅಧಿಕಾರಿಗಳು ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ತಾಲ್ಲೂಕುಗಳಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.</p>.<p>ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಈಗಾಗಲೇ ಚಾಲನೆ ನೀಡಿರುವ ರೈತರು ತಿಪ್ಪೆಗಳಲ್ಲಿ ಸಂಗ್ರಹಿಸಿದ್ದ ಗೊಬ್ಬರವನ್ನು ಹೊಲಗಳಿಗೆ ಸಾಗಿಸುತ್ತಿದ್ದಾರೆ.</p>.<p>ಜಿಲ್ಲೆಯಲ್ಲಿ ಈಗಾಗಲೇ ಮಿತಿ ಮೀರಿ ರಸಗೊಬ್ಬರ ಬಳಕೆ ಮಾಡುತ್ತಿರುವುದನ್ನು ಕೃಷಿ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಹೀಗಿದ್ದರೂ ಜಿಲ್ಲೆಯಲ್ಲಿ ಈ ವರ್ಷ 50 ಸಾವಿರ ಟನ್ನಷ್ಟು ರಸಗೊಬ್ಬರ ಬೇಕಿದೆ ಎಂದು ಕೃಷಿ ಇಲಾಖೆ ಅಂದಾಜಿಸಿದೆ.</p>.<p>ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ ದಾಸ್ತಾನಿಗೆ ಕೃಷಿ ಇಲಾಖೆ ಮುಂದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>