<p>ಚಿಕ್ಕಬಳ್ಳಾಪುರ: ಅಂಬೇಡ್ಕರ್ ಅವರು ಹಾಕಿಕೊಟ್ಟ ಪರಂಪರೆ, ಆದರ್ಶಗಳು ಮತ್ತು ವಿಚಾರಗಳನ್ನು ಪ್ರತಿಯೊಬ್ಬರು ಅರಿತು ಪಾಲಿಸಬೇಕು. ಆ ಮೂಲಕ ನಾವು ಅವರಿಗೆ ಋಣಿ ಆಗಿರಬೇಕು ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಪ್ರೊ. ಕೋಡಿ ರಂಗಪ್ಪ ತಿಳಿಸಿದರು.</p>.<p>ನಗರದಲ್ಲಿ ಈಚೆಗೆ ಜಿಲ್ಲಾ ಮತ್ತು ತಾಲ್ಲೂಕು ಕಸಾಪದಿಂದ ನಡೆದ ಅಂಬೇಡ್ಕರ್ ಜಯಂತಿಯಲ್ಲಿ ಅವರು ಮಾತನಾಡಿದರು.</p>.<p>ಅಜ್ಞಾನ, ಅಸಮಾನತೆಯ ಕಾರಣ ದೇಶದಲ್ಲಿ ಕೋಟ್ಯಂತರ ಜನರು ಶೋಷಣೆ ಮತ್ತು ತಾರತಮ್ಯಗಳಿಗೆ ಒಳಗಾಗುತ್ತಿದ್ದರು. ಅಂತಹ ಸಮಾಜದ ಪರಿವರ್ತನೆಗಾಗಿ ಅಂಬೇಡ್ಕರ್ ಅವರು ಶಾಸನಾತ್ಮಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ನೈತಿಕವಾಗಿ ಜನರನ್ನು ಸಶಕ್ತಗೊಳಿಸಿದರು ಎಂದು ಸ್ಮರಿಸಿದರು.</p>.<p>ವಿಶ್ವವಿದ್ಯಾಲಯ ಶಿಕ್ಷಣ ಕಾಲೇಜಿನ ಪ್ರಾಧ್ಯಾಪಕ ಎಂ. ಶಂಕರ್, ದೇಶದಲ್ಲಿ ಅಂಬೇಡ್ಕರ್ ಅವರು ಹುಟ್ಟದಿದ್ದರೆ ಕೆಳ ವರ್ಗದ ಯಾರು ಸಹ ಬದುಕಿ ಬಾಳಲು ಆಗುತ್ತಿರಲಿಲ್ಲ ಎಂದರು.</p>.<p>ಸಾಹಿತಿ ಸರ್ದಾರ್ ಚಾಂದ್ ಪಾಷಾ, ಪುಸ್ತಕ ಸಂಸ್ಕೃತಿ ಬೆಳೆಸುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಬೇಕು ಎಂದರು. ಅಂಬೇಡ್ಕರ್ ಅವರ ಬದುಕಿನ ಕುರಿತು ಮಾತನಾಡಿದರು.</p>.<p>ತಾಲ್ಲೂಕು ಕಸಾಪ ಅಧ್ಯಕ್ಷ ಯಲುವಳ್ಳಿ ಸೊಣ್ಣೇಗೌಡ, ಗೌರವ ಕಾರ್ಯದರ್ಶಿ ಕೆ.ಎಂ ರೆಡ್ಡಪ್ಪ, ಅಧ್ಯಾಪಕ ಕೃಷ್ಣಮೂರ್ತಿ, ಪಿ.ಆರ್. ರವಿ, ಚರಣ್, ಅಣ್ಣಮ್ಮ ಮತ್ತಿತರರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-16-979428104</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಅಂಬೇಡ್ಕರ್ ಅವರು ಹಾಕಿಕೊಟ್ಟ ಪರಂಪರೆ, ಆದರ್ಶಗಳು ಮತ್ತು ವಿಚಾರಗಳನ್ನು ಪ್ರತಿಯೊಬ್ಬರು ಅರಿತು ಪಾಲಿಸಬೇಕು. ಆ ಮೂಲಕ ನಾವು ಅವರಿಗೆ ಋಣಿ ಆಗಿರಬೇಕು ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಪ್ರೊ. ಕೋಡಿ ರಂಗಪ್ಪ ತಿಳಿಸಿದರು.</p>.<p>ನಗರದಲ್ಲಿ ಈಚೆಗೆ ಜಿಲ್ಲಾ ಮತ್ತು ತಾಲ್ಲೂಕು ಕಸಾಪದಿಂದ ನಡೆದ ಅಂಬೇಡ್ಕರ್ ಜಯಂತಿಯಲ್ಲಿ ಅವರು ಮಾತನಾಡಿದರು.</p>.<p>ಅಜ್ಞಾನ, ಅಸಮಾನತೆಯ ಕಾರಣ ದೇಶದಲ್ಲಿ ಕೋಟ್ಯಂತರ ಜನರು ಶೋಷಣೆ ಮತ್ತು ತಾರತಮ್ಯಗಳಿಗೆ ಒಳಗಾಗುತ್ತಿದ್ದರು. ಅಂತಹ ಸಮಾಜದ ಪರಿವರ್ತನೆಗಾಗಿ ಅಂಬೇಡ್ಕರ್ ಅವರು ಶಾಸನಾತ್ಮಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ನೈತಿಕವಾಗಿ ಜನರನ್ನು ಸಶಕ್ತಗೊಳಿಸಿದರು ಎಂದು ಸ್ಮರಿಸಿದರು.</p>.<p>ವಿಶ್ವವಿದ್ಯಾಲಯ ಶಿಕ್ಷಣ ಕಾಲೇಜಿನ ಪ್ರಾಧ್ಯಾಪಕ ಎಂ. ಶಂಕರ್, ದೇಶದಲ್ಲಿ ಅಂಬೇಡ್ಕರ್ ಅವರು ಹುಟ್ಟದಿದ್ದರೆ ಕೆಳ ವರ್ಗದ ಯಾರು ಸಹ ಬದುಕಿ ಬಾಳಲು ಆಗುತ್ತಿರಲಿಲ್ಲ ಎಂದರು.</p>.<p>ಸಾಹಿತಿ ಸರ್ದಾರ್ ಚಾಂದ್ ಪಾಷಾ, ಪುಸ್ತಕ ಸಂಸ್ಕೃತಿ ಬೆಳೆಸುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಬೇಕು ಎಂದರು. ಅಂಬೇಡ್ಕರ್ ಅವರ ಬದುಕಿನ ಕುರಿತು ಮಾತನಾಡಿದರು.</p>.<p>ತಾಲ್ಲೂಕು ಕಸಾಪ ಅಧ್ಯಕ್ಷ ಯಲುವಳ್ಳಿ ಸೊಣ್ಣೇಗೌಡ, ಗೌರವ ಕಾರ್ಯದರ್ಶಿ ಕೆ.ಎಂ ರೆಡ್ಡಪ್ಪ, ಅಧ್ಯಾಪಕ ಕೃಷ್ಣಮೂರ್ತಿ, ಪಿ.ಆರ್. ರವಿ, ಚರಣ್, ಅಣ್ಣಮ್ಮ ಮತ್ತಿತರರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-16-979428104</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>