<p>ಚಿಕ್ಕಬಳ್ಳಾಪುರ: ಬಸವಣ್ಣ ಅವರ ನೇತೃತ್ವದಲ್ಲಿ 850 ವರ್ಷಗಳ ಹಿಂದೆ ನಡೆದ ಶರಣ ಚಳವಳಿಯ ಕನ್ನಡದ ನೆಲದಲ್ಲಿ ನಡೆದ ಮಹೋನ್ನತ ಚಳವಳಿ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸೋಮವಾರ ನಗರದ ಬಸವನಗುಡಿ ಮುಂಭಾಗದಲ್ಲಿ ನಡೆದ ವಿಶ್ವಗುರು, ಸಾಂಸ್ಕೃತಿಕ ನಾಯಕ ಬಸವಣ್ಣ ಅವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಸರಳವಾಗಿ ಆಡುಭಾಷೆಯಲ್ಲಿ ಶರಣರು ವಚನಗಳನ್ನು ರಚಿಸಿದರು. ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಜೊತೆಗೆ ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಕಾರಣವಾಗಿವೆ. ಆದ್ದರಿಂದಲೇ ವಚನಗಳು ಕರ್ನಾಟಕದ ಆಚೆಗೂ ಮಾತ್ರವಲ್ಲದೆ ಭಾರತದ ಆಚೆಗೂ ತಲುಪಿವೆ ಎಂದು ಹೇಳಿದರು.</p>.<p>12ನೇ ಶತಮಾನದಲ್ಲಿ ನಡೆದ ವಚನ ಚಳವಳಿ ಕ್ರಾಂತಿಯನ್ನೇ ಹುಟ್ಟು ಹಾಕಿದೆ. ಶರಣರ ಜೀವನಾನುಭವದಿಂದ ಬಂದ ವಚನಗಳು ಸಮಾಜಕ್ಕೆ ಸಮಾನತೆಯ ಸಂದೇಶ ನೀಡಿದವು. ವಚನಗಳು ಭಾರತದ ಆಚೆಗೂ ತಲುಪಿ ಭಾರತೀಯ ಸಂಸ್ಕೃತಿ, ಸಂಸ್ಕಾರ, ಮೌಲ್ಯಗಳನ್ನು ಜಾಗತಿಕ ಮಟ್ಟದಲ್ಲಿ ಎತ್ತಿಹಿಡಿದಿವೆ ಎಂದು ಹೇಳಿದರು.</p>.<p>ಶರಣರ ಪ್ರಾಮಾಣಿಕ, ಭಕ್ತಿ, ಸೇವೆ, ಅಧ್ಯಾತ್ಮ, ಮೌಲ್ಯಗಳು ಪ್ರಸ್ತುತ ಸಮಾಜಕ್ಕೆ ಪ್ರೇರಣೆ ಆಗಬೇಕು. ಸರಳವಾಗಿ ಆಡುಭಾಷೆಯಲ್ಲಿ ರಚನೆಯಾದ ವಚನಗಳು ಇಂದು ವಿಶ್ವಮಾನ್ಯವಾಗಿವೆ. ಅನುಭವ ಮಂಟಪವೇ ಮೊದಲ ಸಂಸತ್ತು. ಅನುಭವ ಮಂಟಪದಲ್ಲಿನ ಚಿಂತನ ಮಂಥನಗಳು ದೊಡ್ಡ ಜ್ಞಾನವನ್ನೇ ಪಸರಿಸಿವೆ ಎಂದು ಹೇಳಿದರು.</p>.<p>ಇಂದಿನ ವಿದ್ಯಾರ್ಥಿಗಳು, ಯುವ ಪೀಳಿಗೆ ಶರಣರ ವಿಚಾರಗಳನ್ನು ಅಧ್ಯಯನ ಮಾಡಬೇಕು. ಆ ಮೂಲಕ ಸಾಮಾಜಿಕ ಬದಲಾವಣೆಗೆ ಕಾರಣವಾಗಬೇಕು. ಕಂದಾಚಾರ, ಮೌಢ್ಯ, ಮೇಲು ಕೀಳುಗಳಂತಹ ಅನಿಷ್ಠಗಳನ್ನು ತೊಡೆಯಲು ವಚನಗಳನ್ನು ಪೂರಕ ಮತ್ತು ಪ್ರೇರಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.</p>.<p>ಕಮ್ಯುನಿಸ್ಟ್ ಆಡಳಿತ ವ್ಯವಸ್ಥೆ , ರಾಜಪ್ರಭುತ್ವ, ಮಿಲಿಟರಿ ಆಡಳಿತ ಹಾಗೂ ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಗಳು ಜಗತ್ತಿನ ವಿವಿಧ ದೇಶಗಳಲ್ಲಿ ಅಸ್ತಿತ್ವದಲ್ಲಿವೆ. ಈ ಆಡಳಿತ ವ್ಯವಸ್ಥೆಗಳಲ್ಲಿ ಅತ್ಯಂತ ಶಕ್ತಿಶಾಲಿ ಹಾಗೂ ಮೌಲ್ಯಯುತವಾದುದು ಪ್ರಜಾಪ್ರಭುತ್ವ. ಅಂತಹ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುನ್ನುಡಿ ಬರೆದವರು ಬಸವಣ್ಣ ಎಂದು ಸ್ಮರಿಸಿದರು.</p>.<p>ಸುನಿಲ್ ಆರಾಧ್ಯ, ಬಸವಣ್ಣ ಅವರ ವಿಚಾರಗಳ ಕುರಿತು ಉಪನ್ಯಾಸ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ. ನವೀನ್ ಭಟ್, ಉಪ ವಿಭಾಗಾಧಿಕಾರಿ ಡಿ.ಎಚ್ ಅಶ್ವಿನ್, ಸಮುದಾಯದ ಮುಖಂಡರಾದ ಮಹೇಶ್ ಬಸಾಪುರ, ಗಿರೀಶ್, ಸಮುದಾಯದ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಬಸವಣ್ಣನ ಅನುಯಾಯಿಗಳು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-16-7255123</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಬಸವಣ್ಣ ಅವರ ನೇತೃತ್ವದಲ್ಲಿ 850 ವರ್ಷಗಳ ಹಿಂದೆ ನಡೆದ ಶರಣ ಚಳವಳಿಯ ಕನ್ನಡದ ನೆಲದಲ್ಲಿ ನಡೆದ ಮಹೋನ್ನತ ಚಳವಳಿ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸೋಮವಾರ ನಗರದ ಬಸವನಗುಡಿ ಮುಂಭಾಗದಲ್ಲಿ ನಡೆದ ವಿಶ್ವಗುರು, ಸಾಂಸ್ಕೃತಿಕ ನಾಯಕ ಬಸವಣ್ಣ ಅವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಸರಳವಾಗಿ ಆಡುಭಾಷೆಯಲ್ಲಿ ಶರಣರು ವಚನಗಳನ್ನು ರಚಿಸಿದರು. ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಜೊತೆಗೆ ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಕಾರಣವಾಗಿವೆ. ಆದ್ದರಿಂದಲೇ ವಚನಗಳು ಕರ್ನಾಟಕದ ಆಚೆಗೂ ಮಾತ್ರವಲ್ಲದೆ ಭಾರತದ ಆಚೆಗೂ ತಲುಪಿವೆ ಎಂದು ಹೇಳಿದರು.</p>.<p>12ನೇ ಶತಮಾನದಲ್ಲಿ ನಡೆದ ವಚನ ಚಳವಳಿ ಕ್ರಾಂತಿಯನ್ನೇ ಹುಟ್ಟು ಹಾಕಿದೆ. ಶರಣರ ಜೀವನಾನುಭವದಿಂದ ಬಂದ ವಚನಗಳು ಸಮಾಜಕ್ಕೆ ಸಮಾನತೆಯ ಸಂದೇಶ ನೀಡಿದವು. ವಚನಗಳು ಭಾರತದ ಆಚೆಗೂ ತಲುಪಿ ಭಾರತೀಯ ಸಂಸ್ಕೃತಿ, ಸಂಸ್ಕಾರ, ಮೌಲ್ಯಗಳನ್ನು ಜಾಗತಿಕ ಮಟ್ಟದಲ್ಲಿ ಎತ್ತಿಹಿಡಿದಿವೆ ಎಂದು ಹೇಳಿದರು.</p>.<p>ಶರಣರ ಪ್ರಾಮಾಣಿಕ, ಭಕ್ತಿ, ಸೇವೆ, ಅಧ್ಯಾತ್ಮ, ಮೌಲ್ಯಗಳು ಪ್ರಸ್ತುತ ಸಮಾಜಕ್ಕೆ ಪ್ರೇರಣೆ ಆಗಬೇಕು. ಸರಳವಾಗಿ ಆಡುಭಾಷೆಯಲ್ಲಿ ರಚನೆಯಾದ ವಚನಗಳು ಇಂದು ವಿಶ್ವಮಾನ್ಯವಾಗಿವೆ. ಅನುಭವ ಮಂಟಪವೇ ಮೊದಲ ಸಂಸತ್ತು. ಅನುಭವ ಮಂಟಪದಲ್ಲಿನ ಚಿಂತನ ಮಂಥನಗಳು ದೊಡ್ಡ ಜ್ಞಾನವನ್ನೇ ಪಸರಿಸಿವೆ ಎಂದು ಹೇಳಿದರು.</p>.<p>ಇಂದಿನ ವಿದ್ಯಾರ್ಥಿಗಳು, ಯುವ ಪೀಳಿಗೆ ಶರಣರ ವಿಚಾರಗಳನ್ನು ಅಧ್ಯಯನ ಮಾಡಬೇಕು. ಆ ಮೂಲಕ ಸಾಮಾಜಿಕ ಬದಲಾವಣೆಗೆ ಕಾರಣವಾಗಬೇಕು. ಕಂದಾಚಾರ, ಮೌಢ್ಯ, ಮೇಲು ಕೀಳುಗಳಂತಹ ಅನಿಷ್ಠಗಳನ್ನು ತೊಡೆಯಲು ವಚನಗಳನ್ನು ಪೂರಕ ಮತ್ತು ಪ್ರೇರಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.</p>.<p>ಕಮ್ಯುನಿಸ್ಟ್ ಆಡಳಿತ ವ್ಯವಸ್ಥೆ , ರಾಜಪ್ರಭುತ್ವ, ಮಿಲಿಟರಿ ಆಡಳಿತ ಹಾಗೂ ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಗಳು ಜಗತ್ತಿನ ವಿವಿಧ ದೇಶಗಳಲ್ಲಿ ಅಸ್ತಿತ್ವದಲ್ಲಿವೆ. ಈ ಆಡಳಿತ ವ್ಯವಸ್ಥೆಗಳಲ್ಲಿ ಅತ್ಯಂತ ಶಕ್ತಿಶಾಲಿ ಹಾಗೂ ಮೌಲ್ಯಯುತವಾದುದು ಪ್ರಜಾಪ್ರಭುತ್ವ. ಅಂತಹ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುನ್ನುಡಿ ಬರೆದವರು ಬಸವಣ್ಣ ಎಂದು ಸ್ಮರಿಸಿದರು.</p>.<p>ಸುನಿಲ್ ಆರಾಧ್ಯ, ಬಸವಣ್ಣ ಅವರ ವಿಚಾರಗಳ ಕುರಿತು ಉಪನ್ಯಾಸ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ. ನವೀನ್ ಭಟ್, ಉಪ ವಿಭಾಗಾಧಿಕಾರಿ ಡಿ.ಎಚ್ ಅಶ್ವಿನ್, ಸಮುದಾಯದ ಮುಖಂಡರಾದ ಮಹೇಶ್ ಬಸಾಪುರ, ಗಿರೀಶ್, ಸಮುದಾಯದ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಬಸವಣ್ಣನ ಅನುಯಾಯಿಗಳು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-16-7255123</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>