<p>ಚಿಕ್ಕಬಳ್ಳಾಪುರ: ನಗರದ ಎಸ್ಜೆಸಿಐಟಿಯ ಬಿಜಿಎಸ್ ಸಭಾಂಗಣದಲ್ಲಿ ಶುಕ್ರವಾರ ‘ಸಂಭ್ರಮ–2026’ ಕಾರ್ಯಕ್ರಮ ನಡೆಯಿತು.</p>.<p>ಕಾರ್ಯಕ್ರಮದ ಅಂಗವಾಗಿ ಕಾಲೇಜು ಆವರಣವು ಸಾಂಸ್ಕೃತಿಕ ವಾತಾವರಣದಲ್ಲಿ ಮುಳುಗಿತ್ತು. ಗಣ್ಯರು ಕಾಲೇಜು ಮುಂಭಾಗಕ್ಕೆ ಬಂದಾಗ ಅವರನ್ನು ಮೆರವಣಿಗೆ ಮೂಲಕ ಸಭಾಂಗಣಕ್ಕೆ ಕರೆ ತರಲಾಯಿತು. ವೀರಗಾಸೆ, ಡೊಳ್ಳು ಕುಣಿತ, ನೃತ್ಯ, ಭರತನಾಟ್ಯ, ಜನಪದ ನೃತ್ಯ ಸೇರಿದಂತೆ ವಿವಿಧ ನೃತ್ಯ ಪ್ರಕಾರಗಳು ಜರುಗಿದವು.</p>.<p>ಮುಖ್ಯ ಅತಿಥಿ ನಟ ದೊಡ್ಡಣ್ಣ ಮಾತನಾಡಿ, ಆದಿಚುಂಚನಗಿರಿ ಮಠವು ನಾಡಿನಲ್ಲಿ ಅಕ್ಷರ, ಅನ್ನ ದಾಸೋಹಕ್ಕೆ ಹೆಸರುವಾಸಿಯಾಗಿದೆ. ಸಮಾಜ ಕಟ್ಟುವಲ್ಲಿ ಮಹತ್ವದ ಪಾತ್ರವಹಿಸಿದೆ. ನಾಡಿನಲ್ಲಿ ನಾನಾ ರೀತಿಯ ಸೇವಾ ಕಾರ್ಯಗಳನ್ನು ನಡೆಸುತ್ತಿದೆ ಎಂದರು.</p>.<p>ವಿದ್ಯಾರ್ಥಿಗಳು ತಮ್ಮ ಕಾಲೇಜು ದಿನಗಳಲ್ಲಿಯೇ ಗುರಿಯನ್ನು ಹೊಂದಬೇಕು. ಆ ಗುರಿ ಸಾಧನೆಗಾಗಿ ಮುನ್ನಡೆಯಬೇಕು. ಇದರಿಂದ ಅವರ ಜೀವನ ಉಜ್ವಲವಾಗುತ್ತದೆ. ನೀವು ಕಲಿಯುವ ವಿದ್ಯೆ, ಸಂಸ್ಕಾರ ನಿಮ್ಮ ಬದುಕನ್ನು ಬೆಳಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>ನಾಡು, ನುಡಿಯ ಪರಂಪರೆಯನ್ನು ನಾವು ತಿಳಿದುಕೊಳ್ಳಬೇಕು. ಗುರುವನ್ನು ನಂಬಿಕೆಟ್ಟವರು ಇತಿಹಾಸದಲ್ಲಿ ಇಲ್ಲ. ಕಷ್ಟಪಡದೆಯೇ ಯಾವುದೂ ಸಿಗುವುದಿಲ್ಲ. ಮೊಬೈಲ್ ಮಿತವಾಗಿ ಬಳಸಬೇಕು. ರಾಮಾಯಣ, ಮಹಾಭಾರತ ಸೇರಿದಂತೆ ಉತ್ತಮ ಗ್ರಂಥಗಳನ್ನು ವಿದ್ಯಾರ್ಥಿಗಳು ಓದಬೇಕು ಎಂದರು.</p>.<p>ಮಂಗಳಾನಂದನಾಥ ಸ್ವಾಮೀಜಿ ಮಾತನಾಡಿ, ‘ವಿದ್ಯಾರ್ಥಿ ಜೀವನವು ಮಹತ್ವದ ಘಟ್ಟ. ಈ ಅವಧಿಯು ನಿಮ್ಮ ಬದುಕನ್ನು ನೀವೇ ಉತ್ತಮವಾಗಿ ರೂಪಿಸಿಕೊಳ್ಳಲು ಇರುವ ಸುವರ್ಣಕಾಲ. ಪೋಷಕರು, ಗುರು ಹಿರಿಯರ ಮಾರ್ಗದರ್ಶನದಲ್ಲಿ ಸಾಗಬೇಕು ಎಂದು ಸಲಹೆ ನೀಡಿದರು.</p>.<p>ಪೋಷಕರು ನಿಮ್ಮ ಮೇಲೆ ಅಪಾರ ನಿರೀಕ್ಷೆಗಳನ್ನು ಹೊಂದಿರುತ್ತಾರೆ. ಅವರ ನಿರೀಕ್ಷೆಗಳನ್ನು ಈಡೇರಿಸುವುದರಿಂದ ನಿಮ್ಮ ಭವಿಷ್ಯವೂ ಉತ್ತಮವಾಗುತ್ತದೆ. ಪೋಷಕರು, ಸಮಾಜಕ್ಕೂ ಹೆಸರು ತರುತ್ತೀರಿ ಎಂದು ಹೇಳಿದರು.</p>.<p>ತಂದೆ ತಾಯಿಯನ್ನು ಗೌರವಿಸಬೇಕು. ಅವರು ನಿಮ್ಮ ಜೀವನವನ್ನು ರೂಪಿಸಲು ಕಷ್ಟಪಡುವರು ಎಂದರು.</p>.<p>ಪ್ರಾಂಶುಪಾಲ ಜಿ.ಟಿ.ರಾಜು ಮಾತನಾಡಿ, ದೊಡ್ಡಣ್ಣ ಅವರು ಒಂದು ಸಾವಿರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಂತಹ ಹಿರಿಯ ಕಲಾವಿದರು ನಮ್ಮ ಕಾಲೇಜಿಗೆ ಬಂದಿರುವುದು ಸಂತೋಷವನ್ನು ತಂದಿದೆ ಎಂದರು.</p>.<p>ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಆಡಳಿತಾಧಿಕಾರಿ ಜಿ.ಆರ್.ರಂಗಸ್ವಾಮಿ, ಮಂಜುನಾಥ್ ಕುಮಾರ್ ಬಿ.ಎಚ್., ಜಿ.ನಾರಾಯಣ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-16-44483198</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ನಗರದ ಎಸ್ಜೆಸಿಐಟಿಯ ಬಿಜಿಎಸ್ ಸಭಾಂಗಣದಲ್ಲಿ ಶುಕ್ರವಾರ ‘ಸಂಭ್ರಮ–2026’ ಕಾರ್ಯಕ್ರಮ ನಡೆಯಿತು.</p>.<p>ಕಾರ್ಯಕ್ರಮದ ಅಂಗವಾಗಿ ಕಾಲೇಜು ಆವರಣವು ಸಾಂಸ್ಕೃತಿಕ ವಾತಾವರಣದಲ್ಲಿ ಮುಳುಗಿತ್ತು. ಗಣ್ಯರು ಕಾಲೇಜು ಮುಂಭಾಗಕ್ಕೆ ಬಂದಾಗ ಅವರನ್ನು ಮೆರವಣಿಗೆ ಮೂಲಕ ಸಭಾಂಗಣಕ್ಕೆ ಕರೆ ತರಲಾಯಿತು. ವೀರಗಾಸೆ, ಡೊಳ್ಳು ಕುಣಿತ, ನೃತ್ಯ, ಭರತನಾಟ್ಯ, ಜನಪದ ನೃತ್ಯ ಸೇರಿದಂತೆ ವಿವಿಧ ನೃತ್ಯ ಪ್ರಕಾರಗಳು ಜರುಗಿದವು.</p>.<p>ಮುಖ್ಯ ಅತಿಥಿ ನಟ ದೊಡ್ಡಣ್ಣ ಮಾತನಾಡಿ, ಆದಿಚುಂಚನಗಿರಿ ಮಠವು ನಾಡಿನಲ್ಲಿ ಅಕ್ಷರ, ಅನ್ನ ದಾಸೋಹಕ್ಕೆ ಹೆಸರುವಾಸಿಯಾಗಿದೆ. ಸಮಾಜ ಕಟ್ಟುವಲ್ಲಿ ಮಹತ್ವದ ಪಾತ್ರವಹಿಸಿದೆ. ನಾಡಿನಲ್ಲಿ ನಾನಾ ರೀತಿಯ ಸೇವಾ ಕಾರ್ಯಗಳನ್ನು ನಡೆಸುತ್ತಿದೆ ಎಂದರು.</p>.<p>ವಿದ್ಯಾರ್ಥಿಗಳು ತಮ್ಮ ಕಾಲೇಜು ದಿನಗಳಲ್ಲಿಯೇ ಗುರಿಯನ್ನು ಹೊಂದಬೇಕು. ಆ ಗುರಿ ಸಾಧನೆಗಾಗಿ ಮುನ್ನಡೆಯಬೇಕು. ಇದರಿಂದ ಅವರ ಜೀವನ ಉಜ್ವಲವಾಗುತ್ತದೆ. ನೀವು ಕಲಿಯುವ ವಿದ್ಯೆ, ಸಂಸ್ಕಾರ ನಿಮ್ಮ ಬದುಕನ್ನು ಬೆಳಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>ನಾಡು, ನುಡಿಯ ಪರಂಪರೆಯನ್ನು ನಾವು ತಿಳಿದುಕೊಳ್ಳಬೇಕು. ಗುರುವನ್ನು ನಂಬಿಕೆಟ್ಟವರು ಇತಿಹಾಸದಲ್ಲಿ ಇಲ್ಲ. ಕಷ್ಟಪಡದೆಯೇ ಯಾವುದೂ ಸಿಗುವುದಿಲ್ಲ. ಮೊಬೈಲ್ ಮಿತವಾಗಿ ಬಳಸಬೇಕು. ರಾಮಾಯಣ, ಮಹಾಭಾರತ ಸೇರಿದಂತೆ ಉತ್ತಮ ಗ್ರಂಥಗಳನ್ನು ವಿದ್ಯಾರ್ಥಿಗಳು ಓದಬೇಕು ಎಂದರು.</p>.<p>ಮಂಗಳಾನಂದನಾಥ ಸ್ವಾಮೀಜಿ ಮಾತನಾಡಿ, ‘ವಿದ್ಯಾರ್ಥಿ ಜೀವನವು ಮಹತ್ವದ ಘಟ್ಟ. ಈ ಅವಧಿಯು ನಿಮ್ಮ ಬದುಕನ್ನು ನೀವೇ ಉತ್ತಮವಾಗಿ ರೂಪಿಸಿಕೊಳ್ಳಲು ಇರುವ ಸುವರ್ಣಕಾಲ. ಪೋಷಕರು, ಗುರು ಹಿರಿಯರ ಮಾರ್ಗದರ್ಶನದಲ್ಲಿ ಸಾಗಬೇಕು ಎಂದು ಸಲಹೆ ನೀಡಿದರು.</p>.<p>ಪೋಷಕರು ನಿಮ್ಮ ಮೇಲೆ ಅಪಾರ ನಿರೀಕ್ಷೆಗಳನ್ನು ಹೊಂದಿರುತ್ತಾರೆ. ಅವರ ನಿರೀಕ್ಷೆಗಳನ್ನು ಈಡೇರಿಸುವುದರಿಂದ ನಿಮ್ಮ ಭವಿಷ್ಯವೂ ಉತ್ತಮವಾಗುತ್ತದೆ. ಪೋಷಕರು, ಸಮಾಜಕ್ಕೂ ಹೆಸರು ತರುತ್ತೀರಿ ಎಂದು ಹೇಳಿದರು.</p>.<p>ತಂದೆ ತಾಯಿಯನ್ನು ಗೌರವಿಸಬೇಕು. ಅವರು ನಿಮ್ಮ ಜೀವನವನ್ನು ರೂಪಿಸಲು ಕಷ್ಟಪಡುವರು ಎಂದರು.</p>.<p>ಪ್ರಾಂಶುಪಾಲ ಜಿ.ಟಿ.ರಾಜು ಮಾತನಾಡಿ, ದೊಡ್ಡಣ್ಣ ಅವರು ಒಂದು ಸಾವಿರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಂತಹ ಹಿರಿಯ ಕಲಾವಿದರು ನಮ್ಮ ಕಾಲೇಜಿಗೆ ಬಂದಿರುವುದು ಸಂತೋಷವನ್ನು ತಂದಿದೆ ಎಂದರು.</p>.<p>ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಆಡಳಿತಾಧಿಕಾರಿ ಜಿ.ಆರ್.ರಂಗಸ್ವಾಮಿ, ಮಂಜುನಾಥ್ ಕುಮಾರ್ ಬಿ.ಎಚ್., ಜಿ.ನಾರಾಯಣ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-16-44483198</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>