<p><strong>ಚಿಕ್ಕಬಳ್ಳಾಪುರ:</strong> ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮರಳುಕುಂಟೆ ಕೃಷ್ಣಮೂರ್ತಿ ಮತ್ತು ಮಾವು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್ ನಡುವೆ ಮೂಡಿರುವ ಬಿರುಕಿಗೆ ಸಂಸದ ಡಾ.ಕೆ.ಸುಧಾಕರ್ ತೇಪ ಹಚ್ಚಲು ಮುಂದಾಗಿದ್ದಾರೆ ಎನ್ನುತ್ತವೆ ಬಿಜೆಪಿ ಮತ್ತು ಸಂಸದರ ಆಪ್ತ ಮೂಲಗಳು.</p>.<p>ಇತ್ತೀಚೆಗೆ ಸಂಸದ ಡಾ.ಕೆ.ಸುಧಾಕರ್ ಅವರ ಬೆಂಗಳೂರು ನಿವಾಸಕ್ಕೆ ಕೃಷ್ಣಮೂರ್ತಿ ಮತ್ತು ಅವರ 50ಕ್ಕೂ ಹೆಚ್ಚು ಬೆಂಬಲಿಗರು ತೆರಳಿದ್ದರು. ಈ ವೇಳೆ ಕೆ.ವಿ.ನಾಗರಾಜ್ ಅವರ ವಿರುದ್ಧ ಈ ತಂಡ ಅಸಮಾಧಾನ ವ್ಯಕ್ತಪಡಿಸಿತ್ತು. ಒಂದು ಹಂತದಲ್ಲಿ ‘ಪಕ್ಷದಲ್ಲಿ ನಾವು ಇರಬೇಕು ಇಲ್ಲ ಅವರು ಇರಬೇಕು’ ಎನ್ನುವ ಮಾತುಗಳನ್ನೂ ಆಡಿದ್ದಾರೆ. </p>.<p>ಶನಿವಾರ (ಮೇ 10) ಚಿಕ್ಕಬಳ್ಳಾಪುರದಲ್ಲಿ ಮಾತುಕತೆ ನಡೆಸುವುದಾಗಿ ಸುಧಾಕರ್ ಭರವಸೆ ನೀಡಿದ ಕಾರಣ ಕೃಷ್ಣಮೂರ್ತಿ ತಂಡ ತಣ್ಣಗಾಗಿದೆ. ಈಗ ಸುಧಾಕರ್ ಈ ಇಬ್ಬರು ನಾಯಕರ ನಡುವೆ ಯಾವ ಸಂಧಾನ ಸೂತ್ರ ಹೆಣೆಯುತ್ತಾರೆ ಎನ್ನುವ ಕುತೂಹಲವಿದೆ. </p>.<p>ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪ್ರಮುಖ ಮುಖಂಡರಾಗಿರುವ ಈ ಇಬ್ಬರೂ ಸಂಸದರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. </p>.<p>ಚಿಕ್ಕಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ಚುನಾವಣೆ ನಂತರ ಇಬ್ಬರ ಮುಖಂಡರ ನಡುವಿನ ಶೀತಲ ಸಮರ ಹೆಚ್ಚಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಜಯ ಸಾಧಿಸಿದರೂ ಮರಳುಕುಂಟೆ ಕೃಷ್ಣಮೂರ್ತಿ ಅವರ ಸೋಲು ಪಕ್ಷದಲ್ಲಿ ಆಂತರಿಕವಾಗಿ ಬಿರುಸಿನ ಚರ್ಚೆಗೆ ಕಾರಣವಾಗಿತ್ತು. </p>.<p>ತಮ್ಮ ಸೋಲಿನಲ್ಲಿ ಕೆ.ವಿ.ನಾಗರಾಜ್ ಅವರ ಪಾತ್ರವಿದೆ ಎಂದು ಸುಧಾಕರ್ ಅವರ ಬಳಿ ಕೃಷ್ಣಮೂರ್ತಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿಂದೆ ನಡೆದ ಕೋಚಿಮುಲ್ ಚುನಾವಣೆಯಲ್ಲಿ ಕೃಷ್ಣಮೂರ್ತಿ ಅವರು ಕೆ.ವಿ.ನಾಗರಾಜ್ ಅವರ ಸೋಲಿನಲ್ಲಿ ಪಾತ್ರವಹಿಸಿದ್ದರು. ಆದ ಕಾರಣ ನಾಗರಾಜ್ ಈಗ ಆ ಸೇಡು ತೀರಿಸಿಕೊಂಡಿದ್ದಾರೆ ಎನ್ನುವ ಚರ್ಚೆ ಬಿಜೆಪಿ ಮತ್ತು ಜೆಡಿಎಸ್ನಲ್ಲಿ ಕೇಳಿ ಬಂದಿದ್ದವು. ಈ ಹಿಂದೆ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿಯೂ ಈ ಇಬ್ಬರು ನಾಯಕರ ನಡುವೆ ಚಕಮಕಿ ನಡೆದಿತ್ತು.</p>.<p>ಮುಂದಿನ ದಿನಗಳಲ್ಲಿ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಇದೆ. ಈ ಕಾರಣದಿಂದ ಸಣ್ಣ ಭಿನ್ನಾಭಿಪ್ರಾಯಗಳು, ನಾಯಕರ ನಡುವಿನ ವೈಮನಸ್ಸುಗಳು ಪಕ್ಷಕ್ಕೆ ದುಬಾರಿಯಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. </p>.<p>ಈ ಕಾರಣದಿಂದ ನಾಯಕರ ನಡುವೆ ಮೂಡಿರುವ ವೈಮನಸ್ಸುಗಳನ್ನು ಸರಿಪಡಿಸಲೇಬೇಕಾಗಿದೆ. ಮುಂದಿನ ದಿನಗಳಲ್ಲಿ ಕೆ.ವಿ.ನಾಗರಾಜ್ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಚುನಾವಣೆ ಮತ್ತು ಮರಳುಕುಂಟೆ ಕೃಷ್ಣಮೂರ್ತಿ ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೆ ದೃಷ್ಟಿ ಇಟ್ಟಿದ್ದಾರೆ. ಈ ಎಲ್ಲ ಕಾರಣದಿಂದ ಸುಧಾಕರ್ ಯಾವ ಸಂಧಾನ ಸೂತ್ರ ಹೆಣೆಯುವರು, ಇಬ್ಬರು ಮುಖಂಡ ನಡುವೆ ಮೂಡಿರುವ ಭಿನ್ನಮತ ಶಮನ ಆಗುತ್ತದೆಯೇ ಎನ್ನುವ ಕುತೂಹಲ ಪಕ್ಷದ ನಾಯಕರಲ್ಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮರಳುಕುಂಟೆ ಕೃಷ್ಣಮೂರ್ತಿ ಮತ್ತು ಮಾವು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್ ನಡುವೆ ಮೂಡಿರುವ ಬಿರುಕಿಗೆ ಸಂಸದ ಡಾ.ಕೆ.ಸುಧಾಕರ್ ತೇಪ ಹಚ್ಚಲು ಮುಂದಾಗಿದ್ದಾರೆ ಎನ್ನುತ್ತವೆ ಬಿಜೆಪಿ ಮತ್ತು ಸಂಸದರ ಆಪ್ತ ಮೂಲಗಳು.</p>.<p>ಇತ್ತೀಚೆಗೆ ಸಂಸದ ಡಾ.ಕೆ.ಸುಧಾಕರ್ ಅವರ ಬೆಂಗಳೂರು ನಿವಾಸಕ್ಕೆ ಕೃಷ್ಣಮೂರ್ತಿ ಮತ್ತು ಅವರ 50ಕ್ಕೂ ಹೆಚ್ಚು ಬೆಂಬಲಿಗರು ತೆರಳಿದ್ದರು. ಈ ವೇಳೆ ಕೆ.ವಿ.ನಾಗರಾಜ್ ಅವರ ವಿರುದ್ಧ ಈ ತಂಡ ಅಸಮಾಧಾನ ವ್ಯಕ್ತಪಡಿಸಿತ್ತು. ಒಂದು ಹಂತದಲ್ಲಿ ‘ಪಕ್ಷದಲ್ಲಿ ನಾವು ಇರಬೇಕು ಇಲ್ಲ ಅವರು ಇರಬೇಕು’ ಎನ್ನುವ ಮಾತುಗಳನ್ನೂ ಆಡಿದ್ದಾರೆ. </p>.<p>ಶನಿವಾರ (ಮೇ 10) ಚಿಕ್ಕಬಳ್ಳಾಪುರದಲ್ಲಿ ಮಾತುಕತೆ ನಡೆಸುವುದಾಗಿ ಸುಧಾಕರ್ ಭರವಸೆ ನೀಡಿದ ಕಾರಣ ಕೃಷ್ಣಮೂರ್ತಿ ತಂಡ ತಣ್ಣಗಾಗಿದೆ. ಈಗ ಸುಧಾಕರ್ ಈ ಇಬ್ಬರು ನಾಯಕರ ನಡುವೆ ಯಾವ ಸಂಧಾನ ಸೂತ್ರ ಹೆಣೆಯುತ್ತಾರೆ ಎನ್ನುವ ಕುತೂಹಲವಿದೆ. </p>.<p>ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪ್ರಮುಖ ಮುಖಂಡರಾಗಿರುವ ಈ ಇಬ್ಬರೂ ಸಂಸದರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. </p>.<p>ಚಿಕ್ಕಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ಚುನಾವಣೆ ನಂತರ ಇಬ್ಬರ ಮುಖಂಡರ ನಡುವಿನ ಶೀತಲ ಸಮರ ಹೆಚ್ಚಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಜಯ ಸಾಧಿಸಿದರೂ ಮರಳುಕುಂಟೆ ಕೃಷ್ಣಮೂರ್ತಿ ಅವರ ಸೋಲು ಪಕ್ಷದಲ್ಲಿ ಆಂತರಿಕವಾಗಿ ಬಿರುಸಿನ ಚರ್ಚೆಗೆ ಕಾರಣವಾಗಿತ್ತು. </p>.<p>ತಮ್ಮ ಸೋಲಿನಲ್ಲಿ ಕೆ.ವಿ.ನಾಗರಾಜ್ ಅವರ ಪಾತ್ರವಿದೆ ಎಂದು ಸುಧಾಕರ್ ಅವರ ಬಳಿ ಕೃಷ್ಣಮೂರ್ತಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿಂದೆ ನಡೆದ ಕೋಚಿಮುಲ್ ಚುನಾವಣೆಯಲ್ಲಿ ಕೃಷ್ಣಮೂರ್ತಿ ಅವರು ಕೆ.ವಿ.ನಾಗರಾಜ್ ಅವರ ಸೋಲಿನಲ್ಲಿ ಪಾತ್ರವಹಿಸಿದ್ದರು. ಆದ ಕಾರಣ ನಾಗರಾಜ್ ಈಗ ಆ ಸೇಡು ತೀರಿಸಿಕೊಂಡಿದ್ದಾರೆ ಎನ್ನುವ ಚರ್ಚೆ ಬಿಜೆಪಿ ಮತ್ತು ಜೆಡಿಎಸ್ನಲ್ಲಿ ಕೇಳಿ ಬಂದಿದ್ದವು. ಈ ಹಿಂದೆ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿಯೂ ಈ ಇಬ್ಬರು ನಾಯಕರ ನಡುವೆ ಚಕಮಕಿ ನಡೆದಿತ್ತು.</p>.<p>ಮುಂದಿನ ದಿನಗಳಲ್ಲಿ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಇದೆ. ಈ ಕಾರಣದಿಂದ ಸಣ್ಣ ಭಿನ್ನಾಭಿಪ್ರಾಯಗಳು, ನಾಯಕರ ನಡುವಿನ ವೈಮನಸ್ಸುಗಳು ಪಕ್ಷಕ್ಕೆ ದುಬಾರಿಯಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. </p>.<p>ಈ ಕಾರಣದಿಂದ ನಾಯಕರ ನಡುವೆ ಮೂಡಿರುವ ವೈಮನಸ್ಸುಗಳನ್ನು ಸರಿಪಡಿಸಲೇಬೇಕಾಗಿದೆ. ಮುಂದಿನ ದಿನಗಳಲ್ಲಿ ಕೆ.ವಿ.ನಾಗರಾಜ್ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಚುನಾವಣೆ ಮತ್ತು ಮರಳುಕುಂಟೆ ಕೃಷ್ಣಮೂರ್ತಿ ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೆ ದೃಷ್ಟಿ ಇಟ್ಟಿದ್ದಾರೆ. ಈ ಎಲ್ಲ ಕಾರಣದಿಂದ ಸುಧಾಕರ್ ಯಾವ ಸಂಧಾನ ಸೂತ್ರ ಹೆಣೆಯುವರು, ಇಬ್ಬರು ಮುಖಂಡ ನಡುವೆ ಮೂಡಿರುವ ಭಿನ್ನಮತ ಶಮನ ಆಗುತ್ತದೆಯೇ ಎನ್ನುವ ಕುತೂಹಲ ಪಕ್ಷದ ನಾಯಕರಲ್ಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>